ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಸದಾ ಒಂದಲ್ಲಾ ಒಂದು ಟೀಕೆ ಮಾಡುವ ಕಾಂಗ್ರೆಸ್ ಐಟಿ ಘಟಕದ ಮುಖ್ಯಸ್ಥೆ ರಮ್ಯಾ, ಇದೀಗ ಮತ್ತೊಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದ್ದರೆ. 


COMMERCIAL BREAK
SCROLL TO CONTINUE READING

ಬುಧವಾರ ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿರುವ ನರ್ಮದಾ ಅಣೆಕಟ್ಟಿನ ಮುಂಭಾಗದಲ್ಲಿ ಸ್ವಾತಂತ್ರ್ಯ ಸೇನಾನಿ, ಭಾರತದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರ ಗಗನಚುಂಬಿ ಪ್ರತಿಮೆ 'ಏಕತಾ ಮೂರ್ತಿ'ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ್ದರು. ಈ ಸಂದರ್ಭದಲ್ಲಿ ಪ್ರತಿಮೆಯ ಕಾಲ ಬಳಿ ನಿಂತಿರುವ ಫೋಟೋವೊಂದನ್ನು ಟ್ವೀಟ್ನಲ್ಲಿ ಹಾಕಿರುವ ರಮ್ಯಾ, 'ಇದೇನು ಹಕ್ಕಿಯ ಹಿಕ್ಕೆಯಾ?' ಎಂದು ಪ್ರಶ್ನಿಸಿದ್ದಾರೆ. 



ದೇಶದ ಉನ್ನತ ಹುದ್ದೆಯಲ್ಲಿರುವ ನರೇಂದ್ರ ಮೋದಿ ಅವರ ಬಗ್ಗೆ ರಮ್ಯಾ ಅವರ ಟೀಕೆಗಳು ದಿನದಿಂದ ದಿನಕ್ಕೆ ಮತ್ತಷ್ಟು ಕೆಲಮಟ್ಟಕ್ಕಿಳಿಯುತ್ತಿರುವುದು ಟ್ವಿಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.