ಶಿಮ್ಲಾ: ಐದು ಬಾರಿಗೆ ಶಾಸಕರಾಗಿದ್ದ ರಜಪೂತ ಸಮುದಾಯದ ಜೈರಾಮ್ ಠಾಕೂರ್ ಹಿಮಾಚಲ್ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. 


COMMERCIAL BREAK
SCROLL TO CONTINUE READING

ಭಾನುವಾರದಂದು ಮುಖ್ಯಮಂತ್ರಿಗಳ ಆಯ್ಕೆಗಾಗಿ ಕರೆಯಲಾಗಿದ್ದ ಸಭೆಯಲ್ಲಿ  ಬಿಜೆಪಿಯ ಶಾಸಕರು ಸರ್ವಮತದ ಅಭಿಪ್ರಾಯದ ಮೂಲಕ ಜೈರಾಮ್ ರವರನ್ನು ಆಯ್ಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರದ ವಿಕ್ಷಕರಾಗಿ ನಿರ್ಮಲಾ ಸೀತಾರಾಮನ್  ಮತ್ತು ನರೇಂದ್ರ ಸಿಂಗ್ ತೋಮರ್ ಸಭೆಯಲ್ಲಿ ಹಾಜರಿದ್ದರು. 


ಮೊದಲಿಗೆ ಜೈರಾಮ್ ಠಾಕೂರ್ ರವರ ಹೆಸರನ್ನು ಪ್ರಸ್ತಾಪಿಸಿದ ಮಾಜಿ ಮುಖ್ಯಮಂತ್ರಿ ಪ್ರೇಮ ಕುಮಾರ್ ಧುಮಾಲ್ ಗೆ ಸಭೆಯಲ್ಲಿದ್ದ ಎಲ್ಲ ಬಿಜೆಪಿ ಶಾಸಕರು ಸರ್ವಮತದ ಒಪ್ಪಿಗೆಯನ್ನು ಸೂಚಿಸಿದರು ಎಂದು ಕೇಂದ್ರದ ವಿಕ್ಷಕರಾದ ನರೇಂದ್ರ ಸಿಂಗ್ ತೋಮರ್ ತಿಳಿಸಿದರು.


ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವು ಸೋಮವಾರ ಅಥವಾ ದಿನಾಂಕ 27 ರಂದು ಜರುಗಲಿದೆ  ಎಂದು ಹೇಳಲಾಗಿದೆ. ಈ ಸಂಧರ್ಭದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಜರಿರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.