ನವದೆಹಲಿ: ಜೆಡಿಯು ಎಂದಿಗೂ ಎನ್ಡಿಎ ಮೈತ್ರಿಕೂಟದಿಂದ ಹೊರನಡೆಯುವುದಿಲ್ಲ ಎಂದು ಹೇಳುವ ಮೂಲಕ ಈ ಹಿಂದೆ ಇದ್ದ ಎಲ್ಲಾ ವದಂತಿಗಳಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೆರೆ ಎಳೆದಿದ್ದಾರೆ.


COMMERCIAL BREAK
SCROLL TO CONTINUE READING

ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದಲ್ಲಿ ನವದೆಹಲಿಯಲ್ಲಿ ಭಾನುವಾರ ನಡೆದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ 2019 ರ ಚುನಾವಣೆಯನ್ನು ಬಿಜೆಪಿ ಜೊತೆಯಲ್ಲೇ ಎದುರಿಸಲು ತೀರ್ಮಾನ ಕೈಗೊಳ್ಳಲಾಗಿದೆ.


2019ರ ಲೋಕಸಭೆ ಮತ್ತು 2020ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳ ಬಗ್ಗೆ ಸಭೆಯಲ್ಲಿ ಎಲ್ಲಾ ನಾಯಕರೊಂದಿಗೆ ಚರ್ಚಿಸಿದ ಬಳಿಕ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸಲು ಜೆಡಿಯು ನಿರ್ಧರಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಯು 17 ಸ್ಥಾನಗಳಲ್ಲಿ ಸ್ಪರ್ಧಿಸಲು ಜೆಡಿಯು ನಿರ್ಧರಿಸಿದ್ದು, ಉಳಿದ ಸ್ಥಾನಗಳನ್ನು ಬಿಜೆಪಿ, ಎಲ್‌ಜೆಪಿ ಮತ್ತು ಆರ್‌ಎಲ್‌ಎಸ್‌ಪಿಗೆ ಬಿಟ್ಟುಕೊಡಲು ತೀರ್ಮಾನಿಸಿದೆ.