ಪರ್ತಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Soumya Vishwanathan Murder Case: ಪ್ರಮುಖ ಇಂಗ್ಲಿಷ್ ಸುದ್ದಿ ವಾಹಿನಿಯೊಂದರಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ವಿಶ್ವನಾಥನ್ ಅವರು ಸೆಪ್ಟೆಂಬರ್ 30, 2008ರ ತಡರಾತ್ರಿ ದಕ್ಷಿಣ ದೆಹಲಿಯ ನೆಲ್ಸನ್ ಮಂಡೇಲಾ ರಸ್ತೆಯಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕಿಡಿಗೇಡಿಗಳಿ ನಡೆಸಿದ ಗುಂಡಿನ ದಾಳಿಯಲ್ಲಿ ಕೊನೆಯುಸಿರೆಳೆದಿದ್ದರು

Written by - Bhavishya Shetty | Last Updated : Nov 25, 2023, 09:02 PM IST
    • ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ
    • ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ನ್ಯಾಯಾಲಯ
    • ದಂಡದ ಮೊತ್ತವನ್ನು ಸಂತ್ರಸ್ತೆಯ ಕುಟುಂಬಕ್ಕೆ ನೀಡಲಾಗುವುದು ಎಂದ ನ್ಯಾಯಾಲಯ
ಪರ್ತಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ  title=
Journalist Soumya Viswanathan

Soumya Vishwanathan Murder Case: ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. 2008ರ ಈ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಶನಿವಾರ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಐದನೇ ಅಪರಾಧಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಶಿಕ್ಷೆಯನ್ನು ಪ್ರಕಟಿಸುವ ಸಂದರ್ಭದಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರವೀಂದ್ರ ಕುಮಾರ್ ಪಾಂಡೆ, ಈ ಅಪರಾಧವು 'ಅಪರೂಪದ' ಪ್ರಕರಣಗಳ ವರ್ಗಕ್ಕೆ ಬರುವುದಿಲ್ಲ. ಆದ್ದರಿಂದ ಮರಣದಂಡನೆಯ ಕೋರಿಕೆಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಐಪಿಎಲ್ 2024ರಲ್ಲಿ ಈ ತಂಡದ ಮಾರ್ಗದರ್ಶಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ರಾಹುಲ್ ದ್ರಾವಿಡ್!

ಪ್ರಕರಣದಲ್ಲಿ ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್ ಮತ್ತು ಅಜಯ್ ಕುಮಾರ್ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು, ಐದನೇ ಅಪರಾಧಿ ಅಜಯ್ ಸೇಥಿಗೆ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.

ನ್ಯಾಯಾಲಯವು ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್ ಮತ್ತು ಅಜಯ್ ಕುಮಾರ್’ಗೆ ತಲಾ 1.25 ಲಕ್ಷ ರೂಪಾಯಿ ಮತ್ತು ಅಜಯ್ ಸೇಥಿಗೆ 7.25 ಲಕ್ಷ ರೂಪಾಯಿ ದಂಡ ವಿಧಿಸಿದೆ. ಸೇಥಿ ಈಗಾಗಲೇ 14 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾನೆ ಎಂದು ಕೋರ್ಟ್ ಉಲ್ಲೇಖಿಸಿದೆ.

ಅಪರಾಧಿಗಳಿಗೆ ವಿಧಿಸಲಾದ ಒಟ್ಟು ದಂಡದ ಮೊತ್ತವನ್ನು ಸಂತ್ರಸ್ತೆಯ ಕುಟುಂಬಕ್ಕೆ ನೀಡಲಾಗುವುದು ಎಂದು ನ್ಯಾಯಾಲಯ ಇದೇ ಸಂದರ್ಭದಲ್ಲಿ ಹೇಳಿದೆ. ವಿಚಾರಣೆ ವೇಳೆ ಸಂತ್ರಸ್ತೆಯ ತಾಯಿ ಮಾಧವಿ ವಿಶ್ವನಾಥನ್ ಅವರು “ಕಳೆದ 15 ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಪ್ರಮುಖ ಇಂಗ್ಲಿಷ್ ಸುದ್ದಿ ವಾಹಿನಿಯೊಂದರಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ವಿಶ್ವನಾಥನ್ ಅವರು ಸೆಪ್ಟೆಂಬರ್ 30, 2008ರ ತಡರಾತ್ರಿ ದಕ್ಷಿಣ ದೆಹಲಿಯ ನೆಲ್ಸನ್ ಮಂಡೇಲಾ ರಸ್ತೆಯಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕಿಡಿಗೇಡಿಗಳಿ ನಡೆಸಿದ ಗುಂಡಿನ ದಾಳಿಯಲ್ಲಿ ಕೊನೆಯುಸಿರೆಳೆದಿದ್ದರು.  

ಇದನ್ನೂ ಓದಿ: ಕಾರ್ತಿಕ ಪೂರ್ಣಿಮೆಯಂದು ನಕ್ಷತ್ರದಂತೆ ಹೊಳೆಯಲಿದೆ ಈ ರಾಶಿಗಳ ಅದೃಷ್ಟ: ಮಹಾಧನ ಯೋಗದಿಂದ ಬಂಪರ್ ಯಶಸ್ಸು, ಬಹುದಿನದ ಕನಸೆಲ್ಲಾ ನನಸು

ಸೌಮ್ಯ ವಿಶ್ವನಾಥನ್ ಅವರ ಕೊಲೆಗೆ ದರೋಡೆಯೇ ಕಾರಣ ಎಂದು ಪೊಲೀಸರು ಹೇಳಿದ್ದರು. ಅಕ್ಟೋಬರ್ 18 ರಂದು, ನ್ಯಾಯಾಲಯವು ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್ ಮತ್ತು ಅಜಯ್ ಕುಮಾರ್ ಅವರನ್ನು ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 302 (ಕೊಲೆ) ಮತ್ತು ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (MCOCA) ಯ ನಿಬಂಧನೆಗಳ ಅಡಿಯಲ್ಲಿ ದೋಷಿಗಳೆಂದು ಘೋಷಿಸಿತು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/-l9UZYUp33o?si=_K0khSS1BDeQ7ypt

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News