ನವದೆಹಲಿ: ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ಅವರನ್ನು ಸಿಬಿಐ (ಕೇಂದ್ರ ತನಿಖಾ ದಳ) ದ ಹೊಸ ನಿರ್ದೇಶಕರಾಗಿ ಮೇ 14 ರಂದು ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ - ಬಸವರಾಜ ಬೊಮ್ಮಾಯಿ‌


“ಸಕ್ಷಮ ಪ್ರಾಧಿಕಾರದ ಅನುಮೋದನೆಯನ್ನು ಈ ಮೂಲಕ ಶ್ರೀ ಪ್ರವೀಣ್ ಸೂದ್ ರವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕ ಮಾಡಲು ಎರಡು ವರ್ಷಗಳ ಅವಧಿಗೆ ತಿಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಲೋಕಸಭೆಯ ವಿರೋಧ ಪಕ್ಷದ ನಾಯಕ (ಕಾಂಗ್ರೆಸ್) ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯು ಮೇ 13 ರಂದು ಶ್ರೀ ಸೂದ್ ಅವರ ಹೆಸರನ್ನು ಅಂತಿಮಗೊಳಿಸಿದೆ.


ಇದನ್ನೂ ಓದಿ: ವೈಯಕ್ತಿಕ ವರ್ಚಸ್ಸಿಗೆ ಸಾಕ್ಷಿಯಾದ ಬೆಳಗಾವಿ ಜಿಲ್ಲೆಯ ಫೈನಲ್ ರಿಸಲ್ಟ್ ಇಲ್ಲಿದೆ


ಶ್ರೀ ಸೂದ್ ಅವರು ಕರ್ನಾಟಕ ಕೇಡರ್‌ನ 1986 ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು ಅವರನ್ನು ಮೂರು ವರ್ಷಗಳ ಹಿಂದೆ ರಾಜ್ಯ ಡಿಜಿಪಿಯಾಗಿ ನೇಮಕ ಮಾಡಲಾಗಿತ್ತು.ಅವರು ಮೂಲತಃ ಹಿಮಾಚಲ ಪ್ರದೇಶದವರು ಮತ್ತು ಐಐಟಿ-ದೆಹಲಿಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ.ಈಗ ಅವರು ಸಿಬಿಐ ನಿರ್ದೇಶಕರಾಗಿ  ಎರಡು ವರ್ಷಗಳ ನಿಶ್ಚಿತ ಅಧಿಕಾರಾವಧಿಯನ್ನು ಪಡೆಯುತ್ತಾರೆ ಮತ್ತು ಕನಿಷ್ಠ ಮೇ 2025 ರವರೆಗೆ ಅಧಿಕಾರದಲ್ಲಿರುತ್ತಾರೆ.


ಮಹಾರಾಷ್ಟ್ರ ಕೇಡರ್‌ನ 1985ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಸುಬೋಧ್‌ ಕುಮಾರ್‌ ಜೈಸ್ವಾಲ್‌ ಅವರ ಎರಡು ವರ್ಷಗಳ ಅವಧಿಯು ಮೇ 25ರಂದು ಕೊನೆಗೊಳ್ಳಲಿದೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ