ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ, ದಕ್ಷಿಣ ಭಾರತದ ದ್ರಾವಿಡ ಚಳವಳಿಯ ಪ್ರಮುಖ ನಾಯಕ ಎಂ.ಕರುಣಾನಿಧಿ (94) ಅವರ ಅಂತ್ಯಸಂಸ್ಕಾರವನ್ನು ಮರೀನಾ ಬೀಚ್​ನಲ್ಲಿ ದ್ರಾವಿಡ ಸಂಪ್ರದಾಯದಂತೆ ಬುಧವಾರ ಸಂಜೆ ನೆರವೇರಿಸಲಾಯಿತು. 


ಕರುಣಾನಿಧಿಯವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. 


ಕರುಣಾನಿಧಿ, ಡಿಎಂಕೆ ಅಧ್ಯಕರು ಎಂದು ತಮಿಳಿನಲ್ಲಿ ಬರೆಯಲಾಗಿತ್ತು.


ಎಂ.ಕರುಣಾನಿಧಿ ಮಂಗಳವಾರ ಸಂಜೆ ಕೊನೆಯುಸಿರೆಳೆದಿದ್ದರು.