ನವದೆಹಲಿ: ಕಳೆದ ವರ್ಷ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕಥುವಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಠಾಣ್ ಕೋಟ್ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಪ್ರಕರಣದಲ್ಲಿ ಆರು ಆರೋಪಿಗಳು ದೋಷಿಗಳೆಂದು ತಿಳಿಸಿದೆ. ಇನ್ನೊಬ್ಬ ಆರೋಪಿ ವಿಶಾಲ್ ನನ್ನು ಪ್ರಕರಣದಿಂದ ಕೈಬಿಡಲಾಗಿದೆ.


COMMERCIAL BREAK
SCROLL TO CONTINUE READING

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ 8 ವರ್ಷ ವಯಸ್ಸಿನ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೊಲೀಸ್ ಅಧಿಕಾರಿಗಳಾದ ದೀಪಕ್ ಖಜುರಿಯಾ, ಪರ್ವೇಶ್ ಕುಮಾರ್, ಪ್ರಮುಖ ಆರೋಪಿ ಗ್ರಾಮದ ಮುಖ್ಯಸ್ಥ ಸಂಜಿ ರಾಮ್, ಆನಂದ್ ದತ್ತಾ, ಸುರೇಂದ್ರ ವರ್ಮಾ ಮತ್ತು ತಿಲಕ್ ರಾಜ್ ಎಂಬುವವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪಿತ್ತಿದೆ. 


ಕಳೆದ ವರ್ಷ ಜನವರಿಯಲ್ಲಿ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಗೆ ಮತ್ತು ಬರುವ ಔಷಧಿ ನೀಡಿ ಹಲವು ದಿನಗಳ ವರೆಗೆ ಆಕೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿತ್ತು. 2018ರ ಎಪ್ರಿಲ್ ನಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಕಳೆದ ಜೂನ್ 3 ರಂದು ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು.