ಕೃಷಿ ಕಾನೂನು ಸಂಬಂಧಿತ ಅಧಿವೇಶನ ನಡೆಸಲು ಕೇರಳ ರಾಜ್ಯಪಾಲರ ನಕಾರ

ಸಿಪಿಎಂ ನೇತೃತ್ವದ ಸರ್ಕಾರದ ಸಚಿವ ಸಂಪುಟ ಸೋಮವಾರ ನಿರ್ಧರಿಸಿದ ಏಕದಿನ ವಿಶೇಷ ವಿಧಾನಸಭಾ ಅಧಿವೇಶನಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಿರಾಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.

Last Updated : Dec 22, 2020, 08:17 PM IST
ಕೃಷಿ ಕಾನೂನು ಸಂಬಂಧಿತ ಅಧಿವೇಶನ ನಡೆಸಲು ಕೇರಳ ರಾಜ್ಯಪಾಲರ ನಕಾರ  title=

ನವದೆಹಲಿ: ಸಿಪಿಎಂ ನೇತೃತ್ವದ ಸರ್ಕಾರದ ಸಚಿವ ಸಂಪುಟ ಸೋಮವಾರ ನಿರ್ಧರಿಸಿದ ಏಕದಿನ ವಿಶೇಷ ವಿಧಾನಸಭಾ ಅಧಿವೇಶನಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಿರಾಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.

ಮೋದಿ 'ಮನ್ ಕಿ‌ ಬಾತ್' ಕಾರ್ಯಕ್ರಮದ ವೇಳೆ ತಟ್ಟೆ ಬಾರಿಸಿ ಪ್ರತಿಭಟನೆ ನಡೆಸಲು ಕರೆ

ಆರಂಭದಲ್ಲಿ ವಿಶೇಷ ಅಧಿವೇಶನಕ್ಕೆ ಕಾರಣವೇನೆಂದು ಹಿಂದಿನ ದಿನ ರಾಜ್ಯಪಾಲರು ಪ್ರತಿಕ್ರಿಯೆ ಕೋರಿದರು, ಅದಕ್ಕೆ ಪ್ರತಿಕ್ರಿಯೆ ಕಳುಹಿಸಲಾಗಿದೆ. ಆದಾಗ್ಯೂ, ಮೂಲಗಳ ಪ್ರಕಾರ, ಒಪ್ಪಿಗೆಯನ್ನು ನಿರಾಕರಿಸಲಾಗಿದೆ ಎಂದು ತಿಳಿದುಬಂದಿದೆ.ಹೊಸ ಕೃಷಿ ಕಾನೂನುಗಳ ಬಗ್ಗೆ ಚರ್ಚಿಸಲು ವಿಶೇಷ ಅಸೆಂಬ್ಲಿ ಅಧಿವೇಶನವನ್ನು ಡಿಸೆಂಬರ್ 23 ರಂದು ಕರೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡಲು ಸಚಿವ ಸಂಪುಟ ನಿರ್ಧರಿಸಿದ್ದು, ವಿರೋಧದ ಜೊತೆಗೆ ಅದರ ವಿರುದ್ಧ ನಿರ್ಣಯವನ್ನು ಮಂಡಿಸಲು ಯೋಜಿಸಿತ್ತು.

ಮಾತುಕತೆಗೆ ಬರುವಂತೆ ರೈತರಿಗೆ ಪತ್ರ ಬರೆದ ಕೇಂದ್ರ ಸರ್ಕಾರ

ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ 'ವಿಶೇಷ ಅಧಿವೇಶನಕ್ಕೆ ರಾಜ್ಯಪಾಲರು ಅನುಮತಿ ನಿರಾಕರಿಸುವುದು ದುರದೃಷ್ಟಕರ ಸಂಗತಿ. ಶಾಸಕರು ಸದಸ್ಯರ ಕೋಣೆಯಲ್ಲಿ ಒಟ್ಟುಗೂಡಬೇಕು ಮತ್ತು ಕೃಷಿ ಕಾನೂನುಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಬೇಕು" ಎಂದು ಹೇಳಿದರು.
 

Trending News