ನವದೆಹಲಿ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದು,ಈ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.


COMMERCIAL BREAK
SCROLL TO CONTINUE READING

ಸಬ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಉಪೇಂದ್ರ ಅಗರ್ವಾಲ್ ನೇತೃತ್ವದ ಒಂಬತ್ತು ಸದಸ್ಯರ ಎಸ್‌ಐಟಿ ಮಿಶ್ರಾ ಅವರನ್ನು 11 ಗಂಟೆಗಳಿಗಿಂತ ಹೆಚ್ಚು ಕಾಲ ಪ್ರಶ್ನಿಸಿದ ನಂತರ ಬಂಧಿಸಿತು.ಆಶಿಶ್‌ಗೆ ಯುಪಿ ಪೊಲೀಸರು ಸಮನ್ವಯ ಎಸ್‌ಐಟಿಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು, ಅವರು ಈ ಹಿಂದೆ ವಿಚಾರಣೆಗೆ ಹಾಜರಾಗಲು ವಿಫಲರಾಗಿದ್ದರು.


ಡಿಐಜಿ ಉಪೇಂದ್ರ ಅಗರ್‌ವಾಲ್, ಸಹರಾನ್‌ಪುರ್ ಸುದ್ದಿಗಾರರೊಂದಿಗೆ ಮಾತನಾಡಿ, ಆಶಿಶ್ ಸಹಕರಿಸುತ್ತಿಲ್ಲ ಮತ್ತು ಕೆಲವು ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾದರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು" ಎಂದು  ಅವರು ಎಎನ್ಐಗೆ ತಿಳಿಸಿದ್ದಾರೆ 


ಇದನ್ನೂ ಓದಿ: ಕನ್ನಡಿಗ ಕೆ.ಎಲ್.ರಾಹುಲ್ ನಾಯಕತ್ವದ ಬಗ್ಗೆ ಅಜೇಯ್ ಜಡೇಜಾ ನೀಡಿದ ಶಾಕಿಂಗ್ ಹೇಳಿಕೆ ಏನು ಗೊತ್ತಾ?


ಡಿಐಜಿ ಉಪೇಂದ್ರ ಅಗರ್ವಾಲ್ ನೇತೃತ್ವದ ಒಂಬತ್ತು ಸದಸ್ಯರ ತಂಡವು ಸಚಿವರ ಮಗ ಮತ್ತು ಇತರರ ವಿರುದ್ಧ ಪ್ರಕರಣದ ತನಿಖೆ ನಡೆಸುತ್ತಿದೆ.ಏತನ್ಮಧ್ಯೆ, ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಏಳು ಜನರ ಪೈಕಿ ಇಬ್ಬರನ್ನು ಗುರುವಾರ ಬಂಧಿಸಲಾಗಿದೆ.


ಬಂಧಿತರನ್ನು ಲುವಕುಶ್ ಮತ್ತು ಆಶಿಶ್ ಪಾಂಡೆ ಎಂದು ಗುರುತಿಸಲಾಗಿದೆ. ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ.ಮತ್ತೊಂದೆಡೆ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಅಕ್ಟೋಬರ್ 12 ಅನ್ನು ದೇಶಾದ್ಯಂತ 'ಶಹೀದ್ ಕಿಸಾನ್ ದಿವಸ್' ಎಂದು ಆಚರಿಸಲಾಗುವುದು ಎಂದು ಅದು ಹೇಳಿದೆ.


ಇದನ್ನೂ ಓದಿ: Petrol Diesel Price: ರಾಜ್ಯಗಳು ಬಯಸಿದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡಬಹುದು- ಕೇಂದ್ರ ಪೆಟ್ರೋಲಿಯಂ ಸಚಿವ


ರೈತರಿಗಾಗಿ ವಿಶೇಷ ಪ್ರಾರ್ಥನಾ ಸಭೆಗಳನ್ನು ಅಥವಾ ಶ್ರದ್ಧಾಂಜಲಿ ಸಭೆಗಳನ್ನು ಆಯೋಜಿಸುವಂತೆ ಸಂಘಟನಾ ಸಂಸ್ಥೆಯು ರೈತ ಸಂಘಟನೆಗಳನ್ನು ಒತ್ತಾಯಿಸಿದೆ.ಅಕ್ಟೋಬರ್ 18 ರಂದು 'ರೈಲು ರೋಕೋ' ಮತ್ತು ಅಕ್ಟೋಬರ್ 26 ರಂದು ಲಕ್ನೋದಲ್ಲಿ ಬೃಹತ್ 'ಮಹಾಪಂಚಾಯತ್' ನಡೆಯಲಿದೆ ಎಂದು ಯೋಗೇಂದ್ರ ಯಾದವ್ ದೃಢಪಡಿಸಿದರು.


ಇದನ್ನೂ ಓದಿ : CRICURU App : ಕ್ರಿಕೆಟ್ ತರಬೇತಿಗೆ 'ಆ್ಯಪ್' ಆರಂಭಿಸಿದ ವೀರೇಂದ್ರ ಸೆಹ್ವಾಗ್!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.