ರಾಂಚಿ: ಆರ್ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರನ್ನು ಉತ್ತಮ ಚಿಕಿತ್ಸೆಗಾಗಿ ಜಾರ್ಖಂಡ್ನಿಂದ ದೆಹಲಿಯ AIIMS ಆಸ್ಪತ್ರೆಗೆ ಸ್ಥಳಾಂತರಿಸಲು ಸಿದ್ಧತೆ ನಡೆಸಲಾಗಿದೆ.  ರಾಂಚಿಯಲ್ಲಿ ವೈದ್ಯಕೀಯ ಸಮಿತಿಯ ಸಭೆಯಲ್ಲಿ ಲಾಲೂ ಅವರಿಗೆ ಉತ್ತಮ ಚಿಕಿತ್ಸೆಗಾಗಿ ಏಮ್ಸ್ ಗೆ ಸ್ಥಳಾಂತರಿಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ವಾಸ್ತವವಾಗಿ, ಹೃದಯ, ಮಧುಮೇಹ ಮತ್ತು ಮೂತ್ರಪಿಂಡಗಳಲ್ಲಿ ಲಾಲೂ ಪ್ರಸಾದ್ ಯಾದವ್ ಸಮಸ್ಯೆ ಎದುರಿಸುತ್ತಿದ್ದಾರೆ. ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಬೇಕೆಂದು ಲಾಲು ಯಾದವ್ ಬಯಸಿದ್ದರು. ಅದೇ ಸಮಯದಲ್ಲಿ ವೈದ್ಯರು ಲಾಲೂಗೆ ಇದೀಗ ಯಾವುದೇ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ ಎಂದು ಹೇಳುತ್ತಾರೆ.


ಮೇವು ಹಗರಣದಲ್ಲಿ ಆರೋಪಿಯಾರುವ ಲಾಲೂ ಸೆರೆವಾಸದಲ್ಲಿದ್ದಾರೆ. 4 ಪ್ರತ್ಯೇಕ ಪ್ರಕರಣಗಳಲ್ಲಿ ಅವರ ಮೇಲೆ ದೋಷಾರೋಪಣೆ ಮಾಡಲಾಗಿದೆ. ಇದೀಗ ಕಳೆದ ಕೆಲವು ದಿನಗಳಿಂದ ಲಾಲೂ ಚಿಕಿತ್ಸೆಗಾಗಿ ರಿಮ್ಸ್ ನಲ್ಲಿ ದಾಖಲಾಗಿದ್ದಾರೆ. ಒಂದುವೇಳೆ ಲಾಲೂ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸದಿದ್ದರೆ ರಿಮ್ಸ್ ಆಸ್ಪತ್ರೆಯಲ್ಲಿ ಅವರ ಚಿಕಿತ್ಸೆ ಮುಂದುವರೆಯಲಿದೆ.


ಮೇವು ಹಗರಣದ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ, ಲಾಲೂ ಯಾದವ್ ಅವರನ್ನು ರೋ ಹಾಟ್ವಾರ್ ಜೈಲಿಗೆ ಕಳುಹಿಸಲಾಗಿದೆ. ಲಾಲೂ ಯಾವ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದರ ಬಗ್ಗೆ ಜೈಲು ಅಧೀಕ್ಷಕರಿಗೆ ಮಾಹಿತಿ ನೀಡಲಾಗಿದೆ.


ಎದೆ ನೋವಿನ ಕಾರಣ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಲಾಲು ಯಾದವ್ ಅವರ ಆರೋಗ್ಯವು ಹಲವು ದಿನಗಳಿಂದ ಉತ್ತಮವಾಗಿಲ್ಲ. ಜೈಲಿನ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದರು.