ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಗಾಗಿ ಉತ್ತರಪ್ರದೇಶದಲ್ಲಿ ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ) ಮತ್ತು ಸಮಾಜವಾದಿ ಪಕ್ಷ(ಎಸ್​ಪಿ)ಗಳು ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಘೋಷಣೆಯ ನಂತರ, ನೆರೆಯ ರಾಜ್ಯವಾದ ಬಿಹಾರದಲ್ಲಿ ಸಕ್ರಿಯವಾಗಿರುವ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ, ಈ ಮೈತ್ರಿಗಾಗಿ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿಗೆ ಶುಭಾಶಯ ಹೇಳಿದ್ದಾರೆ. ಬಿಎಸ್​ಪಿ ನಾಯಕಿ ಮಾಯಾವತಿ ನಿವಾಸದಲ್ಲಿ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ತೇಜಸ್ವಿಯಾದವ್ ಈ ಮೈತ್ರಿ ರಚನೆಯ ಬಳಿಕ ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಸಂಪೂರ್ಣವಾಗಿ ನಾಶಗೊಳ್ಳಲಿದೆ, ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಮರಳಲು ಸಾಧ್ಯವಿಲ್ಲ ಎಂದು ಹೇಳಿದರು.


COMMERCIAL BREAK
SCROLL TO CONTINUE READING

ಬಾಬಾ ಸಾಹೇಬ್ ಅಂಬೇಡ್ಕರ್ ಮಾಡಿದ ಸಂವಿಧಾನವನ್ನು ರದ್ದುಗೊಳಿಸಿ ನಾಗ್ಪುರದ ಕಾನೂನನ್ನು ಜಾರಿಗೆ ತರಲು ಬಿಜೆಪಿ ಮುಂದಾಗಿದೆ ಎಂದು ತೇಜಸ್ವಿ ದೂರಿದರು. ಮಾಯಾವತಿ ಮತ್ತು ಅಖಿಲೇಶ್ ಅವರ ಸ್ನೇಹವನ್ನು ಸಾರ್ವಜನಿಕರು ಸ್ವಾಗತಿಸುತ್ತಿದ್ದಾರೆ. ಬಿಹಾರ ಮತ್ತು ಉತ್ತರ ಪ್ರದೇಶದಿಂದ ಬಿಜೆಪಿ ಹಿಮ್ಮೆಟ್ಟಲಿದೆ. ಉತ್ತರ ಪ್ರದೇಶದಲ್ಲಿ, ಬಿಜೆಪಿ ಏಕೈಕ ಸೀಟನ್ನು ಗೆಲ್ಲುವುದಿಲ್ಲ. ಎಸ್​ಪಿ-ಬಿಎಸ್​ಪಿ ಮೈತ್ರಿ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲೂ ಗೆಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮಯದಲ್ಲೇ ನನ್ನ ತಂದೆ ಎಸ್​ಪಿ ಮತ್ತು ಬಿಎಸ್​ಪಿ ಮೈತ್ರಿ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದರು. ಹಾಗೆ ಮಾಡಿದರೆ ಇಡೀ ಉತ್ತರ ಪ್ರದೇಶದಿಂದ ಬಿಜೆಪಿ ನಾಶವಾಗಲಿದೆ ಎಂದು ಅವರು ಆಶಿಸಿದ್ದರು. ಅದಾಗ್ಯೂ, ಈ ಬಾರಿ ಎಸ್​ಪಿ-ಬಿಎಸ್​ಪಿ ಮೈತ್ರಿ ಮಾಡಿಕೊಂಡಿರುವುದಕ್ಕೆ ಲಾಲೂ ಪ್ರಸಾದ್ ಯಾದವ್ ಬಹಳ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದರು. ದೇಶದಲ್ಲಿ ನರೇಂದ್ರ ಮೋದಿ ಸರಕಾರವು ಅಘೋಷಿತ ತುರ್ತು ಪರಿಸ್ಥಿತಿಯನ್ನು ವಿಧಿಸಿದೆ ಎಂದು ಆರ್ಜೆಡಿ ನಾಯಕ ಹೇಳಿದರು.


ಸರ್ಕಾರಿ ಯಂತ್ರಗಳನ್ನು ದುರ್ಬಳಕೆ ಮಾಡುವ ಮೂಲಕ ಬಿಜೆಪಿಯು ವಿರೋಧ ಪಕ್ಷದ ನಾಯಕರನ್ನು ದುರುಪಯೋಗಪಡಿಸುತ್ತಿದೆ ಎಂದು ತೇಜಸ್ವಿ ಹೇಳಿದ್ದಾರೆ. ಲಾಲು ಯಾದವ್ ಅವರನ್ನು ಸುಳ್ಳು ಪ್ರಕರಣಗಳಲ್ಲಿ ಸಿಕ್ಕಿಹಾಕಿಸಿ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ನಾನು 13-14 ವರ್ಷ ವಯಸ್ಸಿನವನಿದ್ದಾಗ, ನಾನು ಭ್ರಷ್ಟಾಚಾರ ಪ್ರಕರಣದಲ್ಲಿ ನೋಂದಾಯಿಸಲ್ಪಟ್ಟಿದ್ದೆ. ಈ ಕೆಲಸದಲ್ಲಿ ನನ್ನ ನಿತೀಶ್ ಚಿಕ್ಕಪ್ಪ ಅವರಿಗೆ ಸಹಾಯ ಮಾಡುತ್ತಿದ್ದಾರೆ. ನಿತೀಶ್ ಕುಮಾರ್ ನಮ್ಮೊಂದಿಗೆ ಜಂಟಿಯಾಗಿ ಚುನಾವಣೆಯಲ್ಲಿ ಗೆದ್ದಿದ್ದಾರೆ, ಬಳಿಕ ಅವರು ಬಿಜೆಪಿ ಜೊತೆ ಸೇರಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸಿದಾಗ ಎಸ್​ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಹಿಂದೆ ಸಿಬಿಐ ಬಿಡಲಾಗುವುದು ಎಂದು ತೇಜಸ್ವಿ ಹೇಳಿದರು.