Jammu-Kashmir:ಭದ್ರತಾ ಪಡೆಯ ಗುಂಡೇಟಿಗೆ ಬಲಿಯಾದ ಎಲ್‌ಇಟಿ ಕಮಾಂಡರ್‌

ಕುಲ್ಗಾಂ ಜಿಲ್ಲೆಯ ರೆಡ್ವಾನಿ ಬಾಲಾ ಪ್ರದೇಶದ ನಿವಾಸಿಯಾದ ನಿಸಾರ್‌ ದಾರ್‌, ಸಿರಹ್ಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾನೆ ಎಂದು ಕಾಶ್ಮೀರ ವಲಯ ಐಜಿಪಿ ಸ್ಪಷ್ಟಪಡಿಸಿದ್ದಾರೆ. 

Written by - Zee Kannada News Desk | Last Updated : Apr 9, 2022, 12:04 PM IST
  • ಲಷ್ಕರ್‌–ಎ–ತೈಯಬಾದ ಉಗ್ರ ಸಂಘಟನೆಯ ಕಮಾಂಡರ್‌ ನಿಸಾರ್‌ ಅಹ್ಮದ್‌ ದಾರ್‌ ಹತ್ಯೆ
  • ಭದ್ರತಾ ಪಡೆಯ ಗುಂಡೇಟಿಗೆ ಬಲಿಯಾದ ಉಗ್ರ
  • ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಸಿರಹ್ಮಾ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆ
Jammu-Kashmir:ಭದ್ರತಾ ಪಡೆಯ ಗುಂಡೇಟಿಗೆ ಬಲಿಯಾದ ಎಲ್‌ಇಟಿ ಕಮಾಂಡರ್‌ title=
Encounter

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಸಿರಹ್ಮಾ ಪ್ರದೇಶದಲ್ಲಿ ಇಂದು ಮುಂಜಾನೆ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌–ಎ–ತೈಯಬಾದ ಉಗ್ರ ಸಂಘಟನೆಯ ಕಮಾಂಡರ್‌ ನಿಸಾರ್‌ ಅಹ್ಮದ್‌ ದಾರ್‌ನನ್ನು ಹತ್ಯೆ ಮಾಡಲಾಗಿದೆ. 

ಇದನ್ನು ಓದಿ: Viral Video:ತುಂಗೆ ತಟದಲಿ ಸ್ವರ್ಗಲೋಕ... ಶೃಂಗೇರಿಗೆ ಪ್ರಕೃತಿಯ "ಶೃಂಗಾರ"

ಕುಲ್ಗಾಂ ಜಿಲ್ಲೆಯ ರೆಡ್ವಾನಿ ಬಾಲಾ ಪ್ರದೇಶದ ನಿವಾಸಿಯಾದ ನಿಸಾರ್‌ ದಾರ್‌, ಸಿರಹ್ಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾನೆ ಎಂದು ಕಾಶ್ಮೀರ ವಲಯ ಐಜಿಪಿ ಸ್ಪಷ್ಟಪಡಿಸಿದ್ದಾರೆ. 

ಉಗ್ರರು ಅಡಗಿದ್ದ ಖಚಿತ ಮಾಹಿತಿ ಪಡೆದ ಪೊಲೀಸರು ಮತ್ತು ಭಾರತೀಯ ಸೇನೆ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಕಮಾಂಡರ್‌ ಹತ್ಯೆಯಾಗಿದ್ದಾನೆ.

ಇದನ್ನು ಓದಿ: Siddaramaiah : ಪಂಚೆ ಕಟ್ಟಿ ಫುಟ್ಬಾಲ್ ಒದ್ದು ಗೋಲ್ ಬಾರಿಸಿದ ಮಾಜಿ ಸಿಎಂ!

2021ರಲ್ಲಿ ಉಗ್ರ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದ ನಿಸಾರ್ ದಾರ್‌, ಹಲವು ಅಪರಾಧ ಕೃತ್ಯ ಹಾಗೂ ಹತ್ಯೆಗಳಲ್ಲಿ ಭಾಗಿಯಾಗಿದ್ದ ಎಂದು ಉನ್ನತ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು. ಸದ್ಯ ಮುನ್ನೆಚ್ಚರಿಕೆ ಕ್ರಮವಾಗಿ ಅನಂತನಾಗ್‌ ಜಿಲ್ಲೆಯ ಕೆಲವೆಡೆ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News