Temple preist threat in Bharatpur: ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಎಂಎಸ್‌ಜೆ ಕಾಲೇಜು ಆವರಣದಲ್ಲಿ ನಿರ್ಮಿಸಿರುವ ದೇವಸ್ಥಾನದ ಅರ್ಚಕರಿಗೆ ಬೆದರಿಕೆ ಪತ್ರ  ಬಂದಿದೆ. ದೇವಸ್ಥಾನ  ತೊರೆಯದೆ ಇದ್ದಲ್ಲಿ 10 ದಿನಗಳಲ್ಲಿ  ತಲೆ ಕಡಿಯುವುದಾಗಿ ಆ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ. ಈ ಪತ್ರದಲ್ಲಿ ಬರೆದಿರುವುದನ್ನು ಕಡೆಗಣಿಸಿದರೆ ಮುಂದೆ ಸಂಭವಿಸಬಹುದಾದ ಅನಾಹುತಕ್ಕೆ ದೇವಾಲಯದ ಅರ್ಚಕನೇ ಹೊಣೆ ಎಂದು  ಪತ್ರದಲ್ಲಿ ಹೇಳಲಾಗಿದೆ.  ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಸಂಘಟನೆಗಳು ಆಗ್ರಹಿಸಿವೆ. 
 
ಉದಯಪುರ ಘಟನೆಯನ್ನು ಪ್ರಸ್ತಾಪಿಸಿ ಬೆದರಿಕೆ :
ಕಾಲೇಜಿನಲ್ಲಿ ನಿರ್ಮಿಸಿರುವ ದೇವಸ್ಥಾನದ ಅರ್ಚಕರಿಗೆ ಬೆದರಿಕೆ ಹಾಕಿರುವ ಪ್ರಕರಣ ಹೊರ ಬರುತ್ತಿದ್ದಂತೆಯೇ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾಲೇಜು ಗೇಟ್‌ಗೆ ಬೀಗ ಜಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದೆ. ಪೊಲೀಸರು ಪ್ರಕರಣದ ಆರೋಪಿಗಳನ್ನು  ಶೀಘ್ರ ಬಂಧಿಸಬೇಕು ಎಂದು ಎಬಿವಿಪಿ ಆಗ್ರಹಿಸಿದೆ. ಇನ್ನು  ಪತ್ರದಲ್ಲಿ ಉದಯಪುರ ಘಟನೆಯನ್ನು ಪ್ರಸ್ತಾಪಿಸಿರುವ ಕಾರಣ ಘಟನೆಯ ಚರ್ಚೆ ಎಲ್ಲೆಡೆ ಹಬ್ಬಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : Free Booster Dose : ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ 'ಉಚಿತ ಬೂಸ್ಟರ್ ಡೋಸ್' : ಹೀಗೆ ನೊಂದಾಯಿಸಿಕೊಳ್ಳಿ!


ತನಿಖೆಯಲ್ಲಿ ತೊಡಗಿರುವ ಪೊಲೀಸರು : 
ಪ್ರಕರಣದ ಬಗ್ಗೆ ದೂರು ದಾಖಲಿಸಿರುವ ಪೊಲೀಸರು ದೇವಾಲಯದ ಎದುರು ಅಂಟಿಸಲಾದ ಈ ಪತ್ರವನ್ನು ತೆಗೆದುಹಾಕಿದ್ದಾರೆ. ಪ್ರಕರಣ ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ. 


ಇದನ್ನೂ ಓದಿ : Amit Shah : ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಬಿಗ್ ನ್ಯೂಸ್ ನೀಡಿದ ಕೇಂದ್ರ ಸಚಿವ ಅಮಿತ್ ಶಾ!


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ