ನವದೆಹಲಿ: 2024ರ ಲೋಕಸಭೆ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ಹೆಚ್ಚಾಗುತ್ತಿವೆ. ಶನಿವಾರ ಜೈಪುರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ' ಗಾಂಧಿ ಕುಟುಂಬವನ್ನು ನಿಂದಿಸುವುದನ್ನು ಬಿಟ್ಟು ಪ್ರಧಾನಿ ಮೋದಿಗೆ ಯಾವುದೇ ಕೆಲಸವಿಲ್ಲ' ಎಂದು ಕಿಡಿ ಕಾರಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ಬುಲೆರೋ ವಾಹನ ಪಲ್ಟಿ..!


ದೇಶ ಅಭಿವೃದ್ಧಿಯಾಗಿದೆ ಎಂದು ಮೋದಿಯವರು ಹೇಳುತ್ತಾರೆ.ಸುಳ್ಳು ಹೇಳುವುದನ್ನು ಬಿಟ್ಟು ಬೇರೆ ಗ್ಯಾರಂಟಿ ಇಲ್ಲ. ಮೋದಿ ಜೀ ಯಾವಾಗಲೂ ಜನರನ್ನು ದಾರಿ ತಪ್ಪಿಸುತ್ತಾರೆ.ಕಾಂಗ್ರೆಸ್ 55 ವರ್ಷಗಳಲ್ಲಿ ಏನು ಮಾಡಿದೆ ಎಂದು ಲೆಕ್ಕ ಹಾಕುತ್ತಿದ್ದಾರೆ.ಇಂದಿರಾ ಗಾಂಧಿಯವರು ಪಾಕಿಸ್ತಾನವನ್ನು ಎರಡು ಭಾಗಗಳಾಗಿ ವಿಂಗಡಿಸಿದ್ದರು. ಚೀನೀಯರು ಬಂದು ಅದನ್ನು ನಿಧಾನವಾಗಿ ಆಕ್ರಮಿಸಿಕೊಳ್ಳುತ್ತಿದ್ದಾರೆ. ನಗರದ ಹೆಸರು ಬದಲಾಯಿಸಲಾಗುತ್ತಿದೆ, ನಮ್ಮ ಮಾತು ಗ್ಯಾರಂಟಿ, ಅದನ್ನು ಮೋದಿ ಕದ್ದಿದ್ದಾರೆ, ಹಿಮಾಚಲ ಮತ್ತು ಕರ್ನಾಟಕದಲ್ಲಿ ನಾವು ಹೇಳಿದ ಗ್ಯಾರಂಟಿ ಈಗಾಗಲೇ ಜಾರಿಯಾಗಿದೆ ಎಂದು ಹೇಳಿದರು.


ಇದನ್ನೂ ಓದಿ: ಬಳ್ಳಾರಿ ಲೋಕಸಭಾ ಕ್ಷೇತ್ರ: ಚುನಾವಣೆಯ ಐತಿಹಾಸಿಕ ಹಿನ್ನೋಟ


ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನರೇಂದ್ರ ಮೋದಿ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದರು ಆದರೆ ಅವರು 2 ಕೋಟಿ ಉದ್ಯೋಗದ ಭರವಸೆಯನ್ನು ಈಡೇರಿಸಿದ್ದಾರೆಯೇ? ವಿದೇಶದಲ್ಲಿರುವ ಕಪ್ಪುಹಣ ತಂದು ದೇಶದ ಜನತೆಗೆ ನೀಡಿದ್ದಾರೆಯೇ? ಜನರ ಖಾತೆಗೆ 15 ಲಕ್ಷ ಜಮಾ ಮಾಡಿದ್ದಾರೆಯೇ? ಎಂದು ಅವರು ಪ್ರಶ್ನಿಸಿದರು.


"ನಾವು ರೈಲು ಹಳಿಗಳನ್ನು ಹಾಕಿದ್ದೇವೆ, ಮೋದಿ ಕೇವಲ ರೈಲುಗಳನ್ನು ಫ್ಲ್ಯಾಗ್ ಆಫ್ ಮಾಡುತ್ತಿದ್ದಾರೆ. ನರೇಂದ್ರ ಮೋದಿಗೆ ನೀಡಲು ಯಾವುದೇ ಗ್ಯಾರಂಟಿ ಇಲ್ಲ. ನಮ್ಮ ಸರ್ಕಾರವು ಭರವಸೆಯನ್ನು ಪೂರೈಸಿದೆ. ಅವರು ಸುಳ್ಳು ಹೇಳುವುದನ್ನು ಹೊರತುಪಡಿಸಿ ಯಾವುದೇ ಗ್ಯಾರಂಟಿ ಇಲ್ಲ" ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ