ಲಖನೌ (ಉತ್ತರ ಪ್ರದೇಶ): ಮುಂಬರುವ ವಿಧಾನಸಭೆ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ (Uttar Pradesh Assembly Election) ಸರ್ಕಾರ ರಚಿಸುವುದಾಗಿ ಮತ್ತು 'ರಾಮ ರಾಜ್ಯ' ಸ್ಥಾಪಿಸುವುದಾಗಿ ಹೇಳಲು ಶ್ರೀಕೃಷ್ಣ ರಾತ್ರೋರಾತ್ರಿ ತನ್ನ ಕನಸಿಗೆ ಬರುತ್ತಾನೆ ಎಂದು ಸಮಾಜವಾದಿ ಪಕ್ಷದ (Samajwadi Party) ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಬಿಜೆಪಿಯ ಬಹ್ರೈಚ್ ಶಾಸಕಿ ಮಾಧುರಿ ವರ್ಮಾ (Madhuri Verma) ಅವರ ಪಕ್ಷಕ್ಕೆ ಸೇರ್ಪಡೆಗಾಗಿ ನಡೆದ ಸಮಾರಂಭದಲ್ಲಿ ಯುಪಿ ಮಾಜಿ ಮುಖ್ಯಮಂತ್ರಿ ಹೀಗೆ ಹೇಳಿದ್ದಾರೆ. 


ಮಾಧುರಿ ವರ್ಮಾ ಎರಡನೇ ಬಾರಿ ಶಾಸಕರಾಗಿದ್ದಾರೆ. ಅವರು 2010 ರಿಂದ 2012 ರವರೆಗೆ ಯುಪಿಯ ಲೆಜಿಸ್ಲೇಟಿವ್ ಕೌನ್ಸಿಲ್ ಸದಸ್ಯರಾಗಿದ್ದರು. ಬಹ್ರೈಚ್ ಜಿಲ್ಲೆಯ ನಾನ್ಪಾರಾ ವಿಧಾನಸಭಾ ಕ್ಷೇತ್ರದಿಂದ ಹಾಲಿ ಬಿಜೆಪಿ ಶಾಸಕರ ಸೇರ್ಪಡೆಯ ಬಗ್ಗೆ ಹರ್ಷ ವ್ಯಕ್ತಪಡಿಸಿದ ಯಾದವ್,  ಉತ್ತರ ಪ್ರದೇಶದಲ್ಲಿ ಸರ್ಕಾರ ರಚಿಸುವ ಹಾದಿಯಲ್ಲಿರುವುದಾಗಿ ಪ್ರತಿಪಾದಿಸಿದರು.


ಸಮಾಜವಾದ  (socialism) ಮಾರ್ಗದ ಮೂಲಕ ರಾಮರಾಜ್ಯದ ಹಾದಿ ಇದೆ. ಸಮಾಜವಾದ ಸ್ಥಾಪನೆಯಾದ ದಿನವೇ ರಾಜ್ಯದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ ಎಂದು ಅಖಿಲೇಶ್ ಯಾದವ್ ಹೇಳಿದರು.


ನಮ್ಮ ಸರ್ಕಾರ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಲು ಭಗವಾನ್ ಶ್ರೀಕೃಷ್ಣ (Lord Krishna) ಪ್ರತಿ ರಾತ್ರಿ ನನ್ನ ಕನಸಿನಲ್ಲಿ ಬರುತ್ತಾನೆ" ಎಂದು ಅವರು ಸೇರಿಸಿದರು.


 


 Arvind Kejriwal: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಕರೋನಾ ದೃಢ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.