ಮಧುರೈ (ತಮಿಳುನಾಡು): ಡಿಸೆಂಬರ್ 13 ರಿಂದ ತಮಿಳುನಾಡಿನ ಮಧುರೈನಲ್ಲಿರುವ ದೇವಸ್ಥಾನಕ್ಕೆ ಸಂಪೂರ್ಣವಾಗಿ ಲಸಿಕೆ ಹಾಕಿದ ವ್ಯಕ್ತಿಗಳಿಗೆ ಮಾತ್ರ ಪ್ರವೇಶಿಸಲು ಅವಕಾಶವಿದೆ ಎಂಬ ಆದೇಶವನ್ನು ಮೀನಾಕ್ಷಿ ದೇವಸ್ಥಾನದ ಆಡಳಿತ ಹಿಂತೆಗೆದುಕೊಂಡಿದೆ. 


COMMERCIAL BREAK
SCROLL TO CONTINUE READING

ಸಂಪೂರ್ಣ ಕೋವಿಡ್-19 ಲಸಿಕೆ ಹಾಕಿದ ವ್ಯಕ್ತಿಗಳಿಗೆ ಮಾತ್ರ ದೇವಸ್ಥಾನಕ್ಕೆ ಪ್ರವೇಶ ನೀಡಲಾಗುವುದು ಎಂದು ದೇವಸ್ಥಾನದ ಆಡಳಿತ ಶನಿವಾರ (ಡಿ.11) ಹೇಳಿತ್ತು.


ಮಧುರೈ ಆಡಳಿತವು ಲಸಿಕೆ ಹಾಕದ ಜನರು ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿದ ನಂತರ ಈ ಆದೇಶ ಮಾಡಲಾಗಿತ್ತು. ಕೋವಿಡ್-19 ಲಸಿಕೆ ಹಾಕದ ಜನರಿಗೆ ಡಿಸೆಂಬರ್ 13 ರಿಂದ ಮಧುರೈ ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶವನ್ನು ಅನುಮತಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಅನೀಶ್ ಶೇಖರ್ ಮಾಹಿತಿ ನೀಡಿದ್ದಾರೆ.


ಮಧುರೈನಲ್ಲಿ ಲಸಿಕೆ ಹಾಕಿಸಿಕೊಳ್ಳದವರಿಗೆ ನ್ಯಾಯಬೆಲೆ ಅಂಗಡಿಗಳು, ವ್ಯಾಪಾರ ಸಂಸ್ಥೆಗಳು, ಸೂಪರ್‌ಮಾರ್ಕೆಟ್‌ಗಳು, ಥಿಯೇಟರ್‌ಗಳು, ಮದುವೆ ಮಂಟಪಗಳು, ಶಾಪಿಂಗ್ ಮಾಲ್‌ಗಳು, ಗಾರ್ಮೆಂಟ್ಸ್ ಅಂಗಡಿಗಳು, ಬ್ಯಾಂಕ್‌ಗಳು ಮತ್ತು ಮದ್ಯದಂಗಡಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ: ಎದೆಯ ಮೇಲೆ ರಜನಿಕಾಂತ್ ಹಚ್ಚೆ ಹಾಕಿಸಿಕೊಂಡ ಹರ್ಭಜನ್ ಸಿಂಗ್


ಲಸಿಕೆ ಹಾಕಿಸಿಕೊಳ್ಳದವರನ್ನು ಸಮೀಪದ ಕೇಂದ್ರಗಳಿಗೆ ಕಳುಹಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಈ ಹಿಂದೆ, ಆಡಳಿತವು ಜನರಿಗೆ ಕನಿಷ್ಠ ಒಂದು ಡೋಸ್ COVID-19 ಲಸಿಕೆಯನ್ನು ಪಡೆಯಲು ಒಂದು ವಾರದ ಸಮಯವನ್ನು ನೀಡಿತ್ತು.


"ಜನರಿಗೆ ಕನಿಷ್ಠ ಒಂದು ಡೋಸ್ COVID-19 ಲಸಿಕೆಯನ್ನು ಪಡೆಯಲು ಒಂದು ವಾರದ ಸಮಯವನ್ನು ನೀಡಲಾಗಿದೆ, ವಿಫಲವಾದರೆ ಲಸಿಕೆ ಹಾಕದ ಜನರು ಹೋಟೆಲ್‌ಗಳು, ಶಾಪಿಂಗ್ ಮಾಲ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳಂತಹ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ" ಎಂದು ಜಿಲ್ಲಾಧಿಕಾರಿ ಹೇಳಿದರು.


ಏತನ್ಮಧ್ಯೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ತಮಿಳುನಾಡು ಇದುವರೆಗೆ 7,64,71,285  ಕೊರೊನಾ ಲಸಿಕೆ ಡೋಸ್‌ಗಳನ್ನು ನೀಡಿದೆ.  


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.