ಮಹಾರಾಷ್ಟ್ರ; ಬಸ್-ಕಂಟೇನರ್ ಟ್ರಕ್ ನಡುವೆ ಮುಖಾಮುಖಿ, 13 ಸಾವು, 20 ಜನರಿಗೆ ಗಾಯ

ಬಸ್ ಔರಂಗಾಬಾದ್‌ನಿಂದ ಧುಲೆ ಕಡೆಗೆ ಹೋಗುತ್ತಿತ್ತು, ಅದೇ ಸಮಯದಲ್ಲಿ ಅದು ಮುಂಭಾಗದಿಂದ ಬರುತ್ತಿದ್ದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ 13 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Last Updated : Aug 19, 2019, 08:36 AM IST
ಮಹಾರಾಷ್ಟ್ರ; ಬಸ್-ಕಂಟೇನರ್ ಟ್ರಕ್ ನಡುವೆ ಮುಖಾಮುಖಿ, 13 ಸಾವು, 20 ಜನರಿಗೆ ಗಾಯ title=

ನವದೆಹಲಿ: ಮಹಾರಾಷ್ಟ್ರದ ಧುಲೇನಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಜನರು ಸಾವನ್ನಪ್ಪಿದ್ದರೆ, ಅಪಘಾತದಲ್ಲಿ 15-20 ಜನರು ಗಾಯಗೊಂಡಿದ್ದಾರೆ. ವಾಸ್ತವವಾಗಿ, ಮಹಾರಾಷ್ಟ್ರದ ಧುಲೆ ಜಿಲ್ಲೆಯ ರಾಜ್ಯ ಸಾರಿಗೆ ಬಸ್ ಅಪಘಾತಕ್ಕೆ ಬಲಿಯಾಗಿದೆ. ಈ ಬಸ್ ಔರಂಗಾಬಾದ್‌ನಿಂದ ಧುಲೆ ಕಡೆಗೆ ಹೋಗುತ್ತಿತ್ತು, ಅದೇ ಸಮಯದಲ್ಲಿ ಅದು ಮುಂಭಾಗದಿಂದ ಬರುತ್ತಿದ್ದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅಪಘಾತದಲ್ಲಿ 13 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 15 ರಿಂದ 20 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಕೆಲವರು ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಗೊಂಡ ಮತ್ತು ಮೃತ ದೇಹಗಳನ್ನು ಬಸ್ಸಿನಿಂದ ಹೊರಗೆ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಕೆಲವು ಜನರ ಸ್ಥಿತಿ ಗಂಭೀರವಾಗಿದೆ. ಕೆಲವು ಪ್ರಯಾಣಿಕರ ಸ್ಥಿತಿ ಇನ್ನೂ ಗಂಭೀರವಾಗಿದ್ದರಿಂದ ಸತ್ತವರ ಸಂಖ್ಯೆ ಈಗ ಹೆಚ್ಚಾಗಬಹುದು ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅವರ ಸ್ಥಿತಿ ಬಗ್ಗೆ ಯಾವುದೇ ಹೇಳಿಕೆ ನೀಡಲು ವೈದ್ಯರು ನಿರಾಕರಿಸಿದ್ದಾರೆ.

ಸ್ವೀಕರಿಸಿದ ಮಾಹಿತಿಯ ಪ್ರಕಾರ, ಭಾನುವಾರ ರಾತ್ರಿ 10.30 ಕ್ಕೆ ಶಹ್ದಾ-ದೊಂಡಿಚಾ ರಸ್ತೆಯ ನಿಮ್‌ಗುಲ್ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಔರಂಗಾಬಾದ್‌ನಿಂದ ಧುಲೆ ಜಿಲ್ಲೆ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮುಂಭಾಗದಿಂದ ಬರುತ್ತಿದ್ದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ, ನಂತರ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 13 ಜನರು ಸಾವನ್ನಪ್ಪಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ, ಮೃತ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಅಪಘಾತದ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ಹೇಳುತ್ತಾರೆ. ಪೊಲೀಸರು ಕೂಡ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಅಪಘಾತದಲ್ಲಿ, ಟ್ರಕ್ ಮತ್ತು ಬಸ್‌ನ ಚಾಲಕ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಲ್ಲಾ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನಂತರ ಮೃತ ದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Trending News