ಮಹಾ' ರಾಜ್ಯಪಾಲರು ಮೋದಿ ಸೂಚನೆಗೆ ಅನುಗುಣವಾಗಿ ಕಾರ್ಯನಿರ್ವಹಿಸಿದ್ದಾರೆ- ಸೋನಿಯಾ ಗಾಂಧಿ

 ಕಳೆದ ವಾರ ನಡೆದ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಅವರನ್ನು ಸರ್ಕಾರಕ್ಕೆ ರಚನೆಗೆ ಆಹ್ವಾನಿಸಿದ ನಡೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಾ ಪ್ರಹಾರ ನಡೆಸಿದ್ದಾರೆ.

Last Updated : Nov 28, 2019, 01:59 PM IST
ಮಹಾ' ರಾಜ್ಯಪಾಲರು ಮೋದಿ ಸೂಚನೆಗೆ ಅನುಗುಣವಾಗಿ ಕಾರ್ಯನಿರ್ವಹಿಸಿದ್ದಾರೆ- ಸೋನಿಯಾ ಗಾಂಧಿ  title=
Photo courtesy: Twitter

ನವದೆಹಲಿ:  ಕಳೆದ ವಾರ ನಡೆದ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಅವರನ್ನು ಸರ್ಕಾರಕ್ಕೆ ರಚನೆಗೆ ಆಹ್ವಾನಿಸಿದ ನಡೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಾ ಪ್ರಹಾರ ನಡೆಸಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿಕೂಟವು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮೊದಲು ಅವರು ಮಹಾರಾಷ್ಟ್ರದ ರಾಜ್ಯಪಾಲರ ಮೇಲೆ ಕಿಡಿ ಕಾರಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರು ಪ್ರಧಾನಿ ಮತ್ತು ಗೃಹ ಸಚಿವರ ಸೂಚನೆಯಂತೆ ನಡೆದುಕೊಂಡಿದ್ದಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಬಿಜೆಪಿಯ ಚುನಾವಣಾ ಪೂರ್ವ ಮೈತ್ರಿ ತನ್ನದೇ ಆದ ದುರಹಂಕಾರ ಮತ್ತು ಅತಿಯಾದ ಆತ್ಮವಿಶ್ವಾಸದಿಂದಾಗಿ ನಡೆಯಲಿಲ್ಲ" ಎಂದು ಸೋನಿಯಾ ಗಾಂಧಿ ಸಂಸತ್ ಭವನದಲ್ಲಿ ನಡೆದ ಕಾಂಗ್ರೆಸ್ ಸಂಸದರ ಸಭೆಯಲ್ಲಿ ಹೇಳಿದರು.

'ಮೂರು ಪಕ್ಷಗಳ ಮೈತ್ರಿ ಸರ್ಕಾರ ರಚನೆಯನ್ನು ನಿರ್ದಾಕ್ಷಿಣ್ಯವಾಗಿ ಹಾಳುಮಾಡುವ ಎಲ್ಲ ಪ್ರಯತ್ನಗಳನ್ನು ಮಾಡಲಾಯಿತು, ಆದರೆ ನಾವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನರೇಂದ್ರ ಮೋದಿ-ಅಮಿತ್ ಷಾ ಸರ್ಕಾರವನ್ನು ಸಂಪೂರ್ಣವಾಗಿ ಬಹಿರಂಗಪಡಿಸಿದೆವು. ನಾನು ನಿಮಗೆ ಭರವಸೆ ನೀಡುವೆ, ಬಿಜೆಪಿಯ ಕೆಟ್ಟ ಕುಶಲತೆಯನ್ನು ಸೋಲಿಸುವ ಸಂಕಲ್ಪದಿಂದಾಗಿ ನಾವು ಮೂರು ಪಕ್ಷಗಳು ಒಂದಾಗಿವೆ 'ಎಂದು ಹೇಳಿದರು. ಇನ್ನೊಂದೆಡೆಗೆ ಶಿವಸೇನೆಯ ಆದಿತ್ಯ ಠಾಕ್ರೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ತಮ್ಮ ತಂದೆಯ ಪ್ರಮಾಣವಚನಕ್ಕೆ ಆಹ್ವಾನಿಸಿದರು.

ಇದೇ ಆರ್ಥಿಕ ಕುಸಿತದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸೋನಿಯಾ ಗಾಂಧಿ 'ರೈತರು, ವ್ಯಾಪಾರಿಗಳು ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳಲ್ಲಿ ಹದಗೆಡುತ್ತಿರುವ ತೊಂದರೆ ಇದೆ...ಸಮಸ್ಯೆಯನ್ನು ನಿಭಾಯಿಸುವ ಬದಲು, ನರೇಂದ್ರ ಮೋದಿ- ಅಮಿತ್ ಷಾ ಸರ್ಕಾರವು ಅಂಕಿ ಅಂಶಗಳನ್ನು ಮರೆಮಾಚುವಲ್ಲಿ ನಿರತವಾಗಿದೆ ಅಥವಾ ನಿಜಕ್ಕೂ ಅವುಗಳನ್ನು ಪ್ರಕಟಿಸುತ್ತಿಲ್ಲ ! ಎಂದರು.

ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏತನ್ಮಧ್ಯೆ, ಪಿಎಂ ಮೋದಿಯನ್ನು ಕರೆದು ಬುಧವಾರ ಸಂಜೆ ಅವರ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.ಮುಂಬೈನಲ್ಲಿ ಉದವ್ ಠಾಕ್ರೆ ಅವರ ಪ್ರಮಾಣವಚನ ಸಮಾರಂಭಕ್ಕಾಗಿ 2,000 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ

Trending News