Eknath Shinde Profile: ಒಂದು ಕಾಲದ ಆಟೋ ಡ್ರೈವರ್‌.. ಇಂದು ಮಹಾರಾಷ್ಟ್ರದ ಸಿಎಂ

Eknath Shinde Profile: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಇದೀಗ ಅಂತ್ಯಗೊಂಡಿದೆ. ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ. 

Written by - Chetana Devarmani | Last Updated : Jun 30, 2022, 06:24 PM IST
  • ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಇದೀಗ ಅಂತ್ಯಗೊಂಡಿದೆ
  • ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ
  • ಒಂದು ಕಾಲದ ಆಟೋ ಡ್ರೈವರ್‌.. ಇಂದು ಮಹಾರಾಷ್ಟ್ರದ ಸಿಎಂ
Eknath Shinde Profile: ಒಂದು ಕಾಲದ ಆಟೋ ಡ್ರೈವರ್‌.. ಇಂದು ಮಹಾರಾಷ್ಟ್ರದ ಸಿಎಂ  title=
ಏಕನಾಥ್ ಶಿಂಧೆ

ಮುಂಬೈ: ಎಲ್ಲರ ಚಿತ್ತ ಸೆಳೆದಿದ್ದ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಕೊನೆಗೂ ಅಂತ್ಯಗೊಂಡಿದೆ. ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಎಂದು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದರು. ಇಂದು ಸಂಜೆ 7.30ಕ್ಕೆ ಏಕನಾಥ್‌ ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಒಂದು ಕಾಲದಲ್ಲಿ ಮಹಾರಾಷ್ಟ್ರದ ಥಾಣೆ ರಸ್ತೆಗಳಲ್ಲಿ ಆಟೋ ಓಡಿಸಿದ್ದ ಏಕನಾಥ್ ಶಿಂಧೆ ಈಗ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಥಾಣೆ ನಗರದಲ್ಲಿ ಆಟೋ ಓಡಿಸುತ್ತಿದ್ದ ಶಿಂಧೆ, ಶಿವಸೇನೆ ಮೂಲಕ ರಾಜಕೀಯ ಪ್ರವೇಶಿಸಿ, ಹಂತ ಹಂತವಾಗಿ ಬೆಳೆಯುತ್ತಾ ಹೋದವರು.

ಇದನ್ನೂ ಓದಿ: BJP Master Stroke: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಸಂಜೆ 7.30ಕ್ಕೆ ಏಕನಾಥ್ ಸಿಂಧೆ ಪ್ರಮಾಣವಚನ ಸ್ವೀಕಾರ

ಇಂದು ಏಕನಾಥ್ ಶಿಂಧೆ ಮಾತ್ರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏಕನಾಥ್ ಶಿಂಧೆ ಅವರ ಸಂಪುಟದಿಂದ ನಾನು ಹೊರಗುಳಿಯುತ್ತೇನೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಸಂಜೆ 7.30ಕ್ಕೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ. ಬಿಜೆಪಿ ಬೆಂಬಲ ನೀಡಲಿದೆ. ಅದೇ ಸಮಯದಲ್ಲಿ, ಉದ್ಧವ್ ಠಾಕ್ರೆ ಅವರನ್ನು ಗುರಿಯಾಗಿಸಿ, ಫಡ್ನವಿಸ್ ಅವರು ಪ್ರತಿದಿನ ಹಿಂದುತ್ವವನ್ನು ಅವಮಾನಿಸುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ. ಕಳೆದ 2.5 ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದ್ದಾರೆ.  

1964 ರಲ್ಲಿ ಜನಿಸಿದ ಏಕನಾಥ್ ಶಿಂಧೆ, ಮರಾಠಾ ಸಮುದಾಯಕ್ಕೆ ಸೇರಿದವರು. ಜೀವನೋಪಾಯಕ್ಕಾಗಿ ವಿದ್ಯಾಭ್ಯಾಸವನ್ನು ಬೇಗ ತೊರೆದಿದ್ದರು. ಆದಾಗ್ಯೂ, 2014 ರಲ್ಲಿ ಬಿಜೆಪಿ-ಶಿವಸೇನೆ ಸರ್ಕಾರದಲ್ಲಿ ಸಚಿವರಾದ ನಂತರ, ಶಿಂಧೆ ತಮ್ಮ ಅಧ್ಯಯನವನ್ನು ಪುನರಾರಂಭಿಸಿದರು. ಮಹಾರಾಷ್ಟ್ರದ ಯಶವಂತರಾವ್ ಚವಾಣ್ ಮುಕ್ತ ವಿಶ್ವವಿದ್ಯಾಲಯದಿಂದ ಪದವಿ ಪಡೆದರು. 1980 ರ ದಶಕದಲ್ಲಿ ಶಿವಸೇನೆಯ ಮುಖ್ಯಸ್ಥ ಬಾಳಾ ಸಾಹೇಬ್ ಠಾಕ್ರೆ ಮತ್ತು ಶಿವಸೇನೆಯ ಥಾಣೆ ಜಿಲ್ಲಾ ಮುಖ್ಯಸ್ಥ ಆನಂದ್ ದಿಘೆ ಅವರ ಸಂಪರ್ಕಕ್ಕೆ ಬಂದ ನಂತರ ಶಿಂಧೆ ಶಿವಸೇನೆಗೆ ಸೇರಿದರು.

1997 ರಲ್ಲಿ ಶಿಂಧೆ‌ ರಾಜಕೀಯ ಜೀವನ ಪ್ರಾರಂಭ:

ಏಕನಾಥ್‌ ಶಿಂಧೆ ಅವರು ತಮ್ಮ ರಾಜಕೀಯ ಜೀವನವನ್ನು 1997 ರಲ್ಲಿ ಮೊದಲ ಬಾರಿಗೆ ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ಗೆ ಕೌನ್ಸಿಲರ್ ಆಗಿ ಆಯ್ಕೆಯಾಗುವ ಮೂಲಕ ಪ್ರಾರಂಭಿಸಿದರು. 2001 ರಲ್ಲಿ, ಅವರು ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಸಭಾನಾಯಕರಾದರು ಮತ್ತು 2002 ರಲ್ಲಿ ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ಗೆ ಎರಡನೇ ಬಾರಿಗೆ ಆಯ್ಕೆಯಾದರು. ಅವರು 2004 ರಲ್ಲಿ ಥಾಣೆಯ ಕೊಪ್ರಿ-ಪಚ್ಪಖಾಡಿ ಕ್ಷೇತ್ರದಿಂದ ಮೊದಲ ಬಾರಿಗೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರು ಮತ್ತು ಅಂದಿನಿಂದ ಸತತ ನಾಲ್ಕು ಅವಧಿಗೆ ಶಾಸಕರಾಗಿದ್ದಾರೆ. ಏಕನಾಥ್ ಶಿಂಧೆ ಅವರು ರಾಜಕೀಯ ಪ್ರವೇಶಿಸಿದ ಕೆಲವೇ ದಿನಗಳಲ್ಲಿ ಥಾಣೆ-ಪಾಲ್ಘರ್ ಪ್ರದೇಶದಲ್ಲಿ ಶಿವಸೇನೆಯ ಪ್ರಮುಖ ನಾಯಕರಾಗಿ ತಮ್ಮ ಛಾಪು ಮೂಡಿಸಿದರು. ಅವರು ಸಾರ್ವಜನಿಕ ಸಮಸ್ಯೆಗಳನ್ನು ಆಕ್ರಮಣಕಾರಿಯಾಗಿ ಪ್ರಸ್ತಾಪಿಸಲು ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ: 'ಮಹಾ' ಸಿಎಂ ಆಗಿ ಏಕನಾಥ್ ಶಿಂಧೆ ಹೆಸರು ಘೋಷಣೆ!

2014 ರ ವಿಜಯದ ನಂತರ ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರಾಗಿ ಶಿಂಧೆ ಅವರನ್ನು ನೇಮಿಸಲಾಯಿತು ಮತ್ತು ಉದ್ಧವ್ ಠಾಕ್ರೆ ಅವರು ನವೆಂಬರ್ 2019 ರಲ್ಲಿ MVA ಸರ್ಕಾರದ ಮುಖ್ಯಮಂತ್ರಿಯಾಗುವ ಮೊದಲು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡರು. ಶಿಂಧೆ ಅವರನ್ನು 2019 ರಲ್ಲಿ MVA ಸರ್ಕಾರದಲ್ಲಿ ನಗರಾಭಿವೃದ್ಧಿ ಮತ್ತು ಸಾರ್ವಜನಿಕ ಕಾರ್ಯಗಳ (ಸಾರ್ವಜನಿಕ ಉದ್ಯಮಗಳು) ಕ್ಯಾಬಿನೆಟ್ ಸಚಿವರನ್ನಾಗಿ ಮಾಡಲಾಯಿತು ಮತ್ತು ಪ್ರಸ್ತುತ ನಗರ ವ್ಯವಹಾರಗಳ ಸಚಿವರಾಗಿದ್ದಾರೆ.

ಇಂದು ಸಂಜೆ ಅವರು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News