ನವದೆಹಲಿ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಹಾರಾಷ್ಟ್ರ ಸರ್ಕಾರವನ್ನು ಅನೈತಿಕ ರೀತಿಯಲ್ಲಿ ಬೀಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

"ನಾವು ಉದ್ಧವ್ ಠಾಕ್ರೆ ಮತ್ತು ಎಲ್ಲರಿಗೂ ನ್ಯಾಯವನ್ನು ಬಯಸುತ್ತೇವೆ. ಇಂದು (ಬಿಜೆಪಿ) ನೀವು ಅಧಿಕಾರದಲ್ಲಿದ್ದೀರಿ ಮತ್ತು ಹಣ, ತೋಳ್ಬಲ, ಮಾಫಿಯಾ ಶಕ್ತಿಯನ್ನು ಬಳಸುತ್ತಿದ್ದೀರಿ. ಆದರೆ ಒಂದು ದಿನ ನೀವು ಕೂಡ ಹೋಗಲೇಬೇಕು. ನಿಮ್ಮ ಪಕ್ಷವನ್ನೂ ಯಾರಾದರೂ ಒಡೆಯಬಹುದು. ಇದು ತಪ್ಪು ಮತ್ತು ನಾನು ಅದನ್ನು ಬೆಂಬಲಿಸುವುದಿಲ್ಲ" ಎಂದು ಮಮತಾ ಬ್ಯಾನರ್ಜೀ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.


ಇದೆ ವೇಳೆ ಗುವಾಹಟಿಯ ಹೋಟೆಲ್‌ಗೆ ತೆರಳಿದ ಬಂಡಾಯ ಶಾಸಕರ ವಿರುದ್ಧವೂ ವಾಗ್ದಾಳಿ ನಡೆಸಿದ ದೀದಿ "ಅಸ್ಸಾಂನಲ್ಲಿ ಪ್ರವಾಹದ ನಡುವೆ, ಸಂತ್ರಸ್ತ ಜನರಿಗೆ ತೊಂದರೆ ನೀಡಲು ಮಹಾರಾಷ್ಟ್ರದ ಶಾಸಕರನ್ನು ಆ ರಾಜ್ಯಕ್ಕೆ ಏಕೆ ಕಳುಹಿಸಲಾಗುತ್ತಿದೆ?" ಎಂದು ಪ್ರಶ್ನಿಸಿದ್ದಾರೆ. "ಮಹಾರಾಷ್ಟ್ರದ ಶಾಸಕರನ್ನು ಬಂಗಾಳಕ್ಕೆ ಕಳುಹಿಸಿ, ನಾವು ಅವರಿಗೆ ಉತ್ತಮ ಆತಿಥ್ಯ ನೀಡುತ್ತೇವೆ" ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ : Maharashtra Political Crisis : ಉದ್ಧವ್ ಠಾಕ್ರೆಗೆ ಓಪನ್ ಚಾಲೆಂಜ್ ಹಾಕಿದ ಏಕನಾಥ್ ಶಿಂಧೆ!


ಇದಕ್ಕೂ ಮುನ್ನ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಶಾಸಕರು ಬರೆದ ಪತ್ರವನ್ನು ಟ್ವೀಟ್ ಮಾಡಿ, ಜೂನ್ 22 ರಂದು ಅವರು ಶಿವಸೇನೆಯ ಶಾಸಕರಿಗೆ ಮುಖ್ಯಮಂತ್ರಿ ನಿವಾಸಕ್ಕೆ ಪ್ರವೇಶವಿಲ್ಲ ಎಂದು ಹೇಳಿದ್ದರು. ಮುಖ್ಯಮಂತ್ರಿಗಳು ಎಂದಿಗೂ ಕೂಡ ಸೆಕ್ರೆಟರಿಯೇಟ್‌ನಲ್ಲಿ ಇರುತ್ತಿರಲಿಲ್ಲ, ಬದಲಿಗೆ ಅವರು ಮಾತೋಶ್ರೀ (ಠಾಕ್ರೆ ನಿವಾಸ) ದಲ್ಲಿ ಇರುತ್ತಿದ್ದರು. ಸಿಎಂ ಸುತ್ತಲಿನ ಜನರಿಗೆ ಕರೆ ಮಾಡಿದರೆ ಅವರು ಸ್ವೀಕರಿಸುತ್ತಿರಲಿಲ್ಲ, ಇದರಿಂದ ನಾವು ಬೇಸರಗೊಂಡಿದ್ದೇವೆ ಮತ್ತು ಏಕನಾಥ್ ಶಿಂಧೆ ಅವರನ್ನು ಈ ಕ್ರಮಕ್ಕೆ ಮನವೊಲಿಸಿದೆವು ಎಂದು ಶಾಸಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.