ನವದೆಹಲಿ: ಕೂಚ್ ಬೆಹರ್ ಗುಂಡಿನ ದಾಳಿ ಸಂತ್ರಸ್ತರ ಶವಗಳೊಂದಿಗೆ ರ್ಯಾಲಿಯನ್ನು ಪ್ರಸ್ತಾಪಿಸುವ ಆಡಿಯೋ ಟೇಪ್ ಹೊರಹೊಮ್ಮಿದ ನಂತರ ತಮ್ಮ ಪೋನ್ ನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿದ್ದಾರೆ.ಅಷ್ಟೇ ಅಲ್ಲದೆ ಸಿಐಡಿ ತನಿಖೆಗೆ ಆದೇಶಿಸುವುದಾಗಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಲ್ಲಿ ನಡೆದ ಚುನಾವಣಾ ರ್ಯಾಲಿಯೊಂದನ್ನುದ್ದೇಶಿಸಿ ಮಾತನಾಡಿದ ಅವರು, ತೃಣಮೂಲ ಪಕ್ಷದ ಅಭಿವೃದ್ದಿ ಕಾರ್ಯಕ್ರಮಗಳಿಗೆ ಬಿಜೆಪಿ ಹೊಂದಿಕೆಯಾಗುವುದಿಲ್ಲವಾದ್ದರಿಂದ ಬಿಜೆಪಿ ಈ ಪಿತೂರಿಯಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದರು.


ಇದನ್ನೂ ಓದಿ: Uttar Pradesh: ಮಹಿಳೆಯರಿಗೆ 'ಜೀನ್ಸ್ ಬ್ಯಾನ್' ಮಾಡಿದ ಉತ್ತರ ಪ್ರದೇಶ ಖಾಪ್ ಪಂಚಾಯತ್!


'ಬಿಜೆಪಿ ನಾಯಕರು ನಮ್ಮ ದೈನಂದಿನ ಸಂಭಾಷಣೆಯನ್ನು ಸಹ ಕೇಳುತ್ತಿದ್ದಾರೆ.ಅವರು ಅಡುಗೆ ಮತ್ತು ಇತರ ಮನೆಕೆಲಸಗಳಲ್ಲಿ ನಮ್ಮ ಫೋನ್ ಕರೆಗಳನ್ನು ಟ್ಯಾಪ್ ಮಾಡುತ್ತಿದ್ದಾರೆಂದು ತೋರುತ್ತದೆ.ಈ ವಿಷಯದ ಬಗ್ಗೆ ಸಿಐಡಿ ತನಿಖೆಗೆ ನಾನು ಆದೇಶ ನೀಡುತ್ತೇನೆ.ಇಂತಹ ಸ್ನೂಪಿಂಗ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಯಾರನ್ನೂ ನಾನು ಬಿಡುವುದಿಲ್ಲ. ಇದರ ಹಿಂದೆ ಯಾರೆಂದು ನಾನು ಈಗಾಗಲೇ ತಿಳಿದುಕೊಂಡಿದ್ದೇನೆ"ಎಂದು ಟಿಎಂಸಿ ಮುಖ್ಯಸ್ಥರು ಹೇಳಿದ್ದಾರೆ.


'ಕೆಲವು ಏಜೆಂಟರೊಂದಿಗೆ ಕೇಂದ್ರ ಪಡೆಗಳು ಇಂತಹ ಕೃತ್ಯಗಳಲ್ಲಿ ಭಾಗಿಯಾಗುತ್ತಿವೆ.ಬಿಜೆಪಿ ಇದರ ಹಿಂದೆ ಯಾವುದೇ ಪಾತ್ರವಿಲ್ಲ ಎಂದು ಅವರು ಹೇಳಿಕೊಂಡರೂ ಅದರ ಹಿಂದೆ ಇದೆ ಎಂಬುದು ಸ್ಪಷ್ಟವಾಗಿದೆ" ಎಂದು ಅವರು ಹೇಳಿದರು.


ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಿಸಿದ ನಂತರ, ರಸ್ತೆ ಅಪಘಾತದಲ್ಲಿ ಬಾಲಕಿಯ ತಂದೆ ಸಾವು


ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಚುನಾವಣಾ ಪ್ರಚಾರದ ಮೇಲೆ 24 ಗಂಟೆಗಳ ನಿಷೇಧ ಹೇರುವ ಚುನಾವಣಾ ಆಯೋಗಗಳ ನಿರ್ಧಾರವನ್ನು ವಿರೋಧಿಸಿ ಧರಣಿ ನಡೆಸಿದರು.ಮಮತಾ ಅವರ ಕ್ಲಿಪ್‌ನಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕರೆ ನೀಡಿದೆ. ಇದು ಕಳೆದ 17 ದಿನಗಳಲ್ಲಿ 5 ನೇ ಬೇಡಿಕೆಯಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.