ಪತ್ನಿ, ಮೂವರು ಮಕ್ಕಳನ್ನು ಕೊಂದು ವ್ಯಕ್ತಿ ಪರಾರಿ

ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಮಿತ್ ಕುಮಾರ್ ಜನವರಿಯಲ್ಲಿ ತನ್ನ ಕೆಲಸ ಕಳೆದುಕೊಂಡು ಹಣಕಾಸಿನ ತೊಂದರೆ ಅನುಭವಿಸಿದ್ದ ಎನ್ನಲಾಗಿದೆ. 

Last Updated : Apr 22, 2019, 03:20 PM IST
ಪತ್ನಿ, ಮೂವರು ಮಕ್ಕಳನ್ನು ಕೊಂದು ವ್ಯಕ್ತಿ ಪರಾರಿ title=

ಗಾಜಿಯಾಬಾದ್: ಪತ್ನಿ ಹಾಗೂ ಮೂವರು ಮಕ್ಕಳನ್ನು ಕೊಂದ ವ್ಯಕ್ತಿಯೊಬ್ಬ ಬಳಿಕ ತಲೆಮರೆಸಿಕೊಂಡಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ.

ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಮಿತ್ ಕುಮಾರ್ ಜನವರಿಯಲ್ಲಿ ತನ್ನ ಕೆಲಸ ಕಳೆದುಕೊಂಡು ಹಣಕಾಸಿನ ತೊಂದರೆ ಅನುಭವಿಸಿದ್ದ ಎನ್ನಲಾಗಿದೆ. ಅಲ್ಲದೆ, ಸಾಕಷ್ಟು ಸಾಲದ ಹೊರೆಯೂ ಇತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿ ಸುಮಿತ್ ಕುಮಾರ್ ತನ್ನ ಪತ್ನಿ ಆಶು ಬಾಲಾ(32), ಪುತ್ರ ಪರಮೇಶ್(5), ಅವಳಿ ಮಕ್ಕಳಾದ ಆಕೃತಿ(4) ಮತ್ತು ಆರು(4)ಗೆ ಪಾನೀಯದಲ್ಲಿ ನಿದ್ದೆ ಮಾತ್ರೆ ಹಾಕಿ ಕೊಟ್ಟಿದ್ದಾನೆ. ಬಳಿಕ ತನ್ನ ಭಾಮೈದನಿಗೆ ಹೆಂಡತಿ, ಮಕ್ಕಳನ್ನು ಕೊಂದು, ತಾನೂ ಸಾಯುವುದಾಗಿ ತಿಳಿಸಿದ್ದ ಎನ್ನಲಾಗಿದೆ. ಆದರೆ ಇದುವರೆಗೂ ಸುಮಿತ್ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧೀಕ್ಷಕ ಶ್ಲೋಕ್ ಕುಮಾರ್ ತಿಳಿಸಿದ್ದಾರೆ. 

ವಿಧಿವಿಜ್ಞಾನ ಪ್ರಯೋಗಾಲಯದ ಪ್ರಾಥಮಿಕ ವರದಿ ಪ್ರಕಾರ ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ರಾತ್ರಿ 8 ಗಂಟೆಗೆ ಬೆಳಕಿಗೆ ಬಂದಿದೆ. ಸದ್ಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Trending News