Rain Update: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸೆಪ್ಟೆಂಬರ್‌ 25ರಂದು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿದ್ದು ಇಂದೂ ಸಹ ವ್ಯಾಪಕ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೆ ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ಕೊನೆಗೂ ಸ್ಪಷ್ಟನೆ ಕೊಟ್ಟ ಡಿಕೆ ಶಿವಕುಮಾರ್


ಸೆಪ್ಟೆಂಬರ್‌ ತಿಂಗಳ ಮೊದಲ ಮೂರು ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರ ಶುರು ಮಾಡಿದ್ದಾನೆ. ಕರಾವಳಿ ಹಾಗೂ ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಬಾಗಲಕೋಟೆ, ಕಲಬುರಗಿಯಲ್ಲಿ ಮುಂದಿನ 2-3 ದಿನಗಳ ಕಾಲ ಭಾರೀ ಮಳೆ ಸುರಿಯುವ ಭೀತಿ ಇದೆ. ಇನ್ನೊಂದೆಡೆ ವರುಣಾರ್ಭಟ ಮುಂದುವರಿದರೆ ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಸಾಧ್ಯತೆ ಇದೆ.


ಇದಲ್ಲದೆ ಸೆಪ್ಟೆಂಬರ್‌ 28 ಮತ್ತು 29ರಂದು ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.


ಇದನ್ನೂ ಓದಿ: ಮಧುಮೇಹಿಗಳು ಹಿತ್ತಲಲ್ಲೇ ಸಿಗುವ ʼಈʼ ಎಲೆಯನ್ನ ಜಗಿದ್ರೆ ಕ್ಷಣಾರ್ಧಲ್ಲೇ ನಾರ್ಮಲ್‌ ಆಗುತ್ತೆ ಶುಗರ್‌! ಮತ್ತೆಂದೂ ಹೆಚ್ಚಾಗೋದೇ ಇಲ್ಲ!


ಮೀನುಗಾರಿಕೆ ನಿಷೇಧ:
ಭಾರೀ ಮಳೆಯಿಂದಾಗಿ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು ಆಳ ಸಮುದ್ರ ಮೀನುಗಾರಿಕೆ ಮತ್ತೆ ಸ್ಥಗಿತಗೊಂಡಿದೆ. ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಮುದ್ರ ಪ್ರಕ್ಷುಬ್ದಗೊಂಡಿದೆ. ಅಷ್ಟೇ ಅಲ್ಲದೆ ವೇಗವಾಗಿ ಗಾಳಿ ಬೀಸುತ್ತಿರುವ ಕಾರಣ ಮೀನುಗಾರಿಕೆಗೆ ತೆರಳಿದ್ದ ಬೋಟುಗಳೆಲ್ಲಸೋಮವಾರ ಸಂಜೆಯೇ ತೀರಕ್ಕೆ ಮರಳಿವೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ