Monkey Last Rite in Jharkhand: ಜಾರ್ಖಂಡ್‌ ನಲ್ಲಿ ವಿಶಿಷ್ಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಚಲಿಸುತ್ತಿದ್ದ ರೈಲಿಗೆ ಗಾಯಗೊಂಡಿದ್ದ ಕೋತಿಗೆ ಚಿಕಿತ್ಸೆ ನೀಡದರೂ ಪ್ರಯೋಜನವಾಗಿರಲಿಲ್ಲ. ಇದೀಗ ಸಾವನ್ನಪ್ಪಿದ ಆ ಕೋತಿಗೆ ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆಯನ್ನು ಮಾಡಲಾಗಿದೆ. ಅಷ್ಟೇ ಅಲ್ಲದೆ, ಮಂಗನ ಮೃತದೇಹವನ್ನು ಹೂಳಿರುವ ಜಾಗದಲ್ಲಿ ಹನುಮಾನ್ ಮಂದಿರ ನಿರ್ಮಿಸಲು ಜನರು ಸಿದ್ಧತೆ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Asia Cup 2023: Tಏಷ್ಯಾ ಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಟಾಪ್ 10 ಬ್ಯಾಟ್ಸ್ಮನ್ ಗಳು


ಧನ್‌’ಬಾದ್‌’ನ ನಿರ್ಸಾ ವಿಧಾನಸಭಾ ಕ್ಷೇತ್ರದ ಗಲ್ಫಾರ್ ಬರಿಯಲ್ಲಿರುವ ನಂಬರ್ 4 ರೈಲ್ವೇ ಗೇಟ್ ಬಳಿ ಮಂಗವೊಂದು ರೈಲಿಗೆ ಡಿಕ್ಕಿ ಹೊಡೆದಿತ್ತು. ಇದರಿಂದ ಕೋತಿ ತೀವ್ರವಾಗಿ ಗಾಯಗೊಂಡಿತ್ತು. ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಗಾಯಗೊಂಡ ಕೋತಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ವೇಳೆ ಕೋತಿ ಸಾವನ್ನಪ್ಪಿದೆ.


ಇನ್ನು ಈ ಕೋತಿಯ ಅಂತ್ಯಸಂಸ್ಕಾರಕ್ಕೆ ಮುಂದಾದ ಸ್ಥಳೀಯ ಜನರು ಹಿಂದೂ ಸಂಪ್ರದಾಯದಂತೆ ಕಾರ್ಯ ಮಾಡಿದ್ದಾರೆ. ಇದಾದ ಬಳಿಕ ಇದೀಗ ಮಂಗನ ಸಮಾಧಿ ನಿರ್ಮಿಸಿದ ಜಾಗದಲ್ಲಿ ಹನುಮಾನ್ ಮಂದಿರ ನಿರ್ಮಿಸಲು ಜನ ಸಿದ್ಧತೆ ನಡೆಸಿದ್ದಾರೆ.


ಇದನ್ನೂ ಓದಿ: ಶೀಘ್ರದಲ್ಲೇ ನಟನೆಗೆ ಮುಂದಾಗಲಿದ್ದಾರೆಯೇ ಎಂ.ಎಸ್.ಧೋನಿ..?


ಇಂದಿಗೂ ಜನರು ಮಂಗಗಳ ಮೇಲೆ ಅಪಾರ ನಂಬಿಕೆ ಹೊಂದಿದ್ದಾರೆ. ಜನರು ಕೋತಿಯನ್ನು ಹನುಮಂತನ ರೂಪವೆಂದು ಪರಿಗಣಿಸುತ್ತಾರೆ. ಈ ಕಾರಣಕ್ಕಾಗಿ ಜನರು ಗಾಯಗೊಂಡ ಸ್ಥಿತಿಯಲ್ಲಿ ಮಲಗಿದ್ದ ಕೋತಿಗೆ ಚಿಕಿತ್ಸೆ ನೀಡಿದ್ದು ಮಾತ್ರವಲ್ಲದೆ, ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ ಆ ಕೋತಿಗೆ ಸಂಪ್ರದಾಯಗಳ ಪ್ರಕಾರ ಅಂತ್ಯಕ್ರಿಯೆಯನ್ನು ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ