ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಸಾಧ್ಯತೆ- ಹವಾಮಾನ ಇಲಾಖೆ

ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಸಂಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Last Updated : Jun 7, 2019, 05:11 PM IST
ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಸಾಧ್ಯತೆ- ಹವಾಮಾನ ಇಲಾಖೆ   title=
ಸಾಂದರ್ಭಿಕ ಚಿತ್ರ

ನವದೆಹಲಿ: ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಸಂಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ನೈಋತ್ಯ ಮಾನ್ಸೂನ್ ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಭೂಮಿಗೆ ಇಳಿಯಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಿತ್ತಳೆ ಎಚ್ಚರಿಕೆಯನ್ನು ನೀಡಿದೆ.ತಿರುವನಂತಪುರಂ, ಕೊಲ್ಲಂ, ಅಲಪ್ಪುಳ ಮತ್ತು ಎರ್ನಾಕುಲಂ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆಯನ್ನು ನೀಡಲಾಗಿದೆ. ಈ ಪ್ರದೇಶಗಳಲ್ಲಿ ಜೂನ್ 10 ಕ್ಕೆ ಭಾರಿ ಮಳೆ ಸಂಭವಿಸಲಿದೆ. 

ಇದಲ್ಲದೆ, ಜೂನ್ 9 ಕ್ಕೆ ಕೊಲ್ಲಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಕಿತ್ತಳೆ ಎಚ್ಚರಿಕೆಯನ್ನು ನೀಡಲಾಗಿದೆ ಮತ್ತು ಜೂನ್ 9 ಮತ್ತು ಏಳು ಜಿಲ್ಲೆಗಳಲ್ಲಿ ಜೂನ್ 10 ರಂದು ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಮಾನ್ಸೂನ್ ವಿಳಂಭದ ಹಿನ್ನಲೆಯಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ವಿಪರಿತ ಸೆಕೆ ಇರಲಿದೆ ಎನ್ನಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಮಾನ್ಸೂನ್ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದ್ದರು ಕೂಡ  ತೀವ್ರತರವಾದ ಶಾಖ ತರಂಗ ಪರಿಸ್ಥಿತಿಗಳನ್ನು ವೀಕ್ಷಿಸುತ್ತಿರುವ ದೇಶದ ಕೇಂದ್ರ ಮತ್ತು ಪಶ್ಚಿಮ ಪ್ರದೇಶಗಳನ್ನು ತಲುಪಲು ಇದು ಕನಿಷ್ಠ ಏಳು ದಿನಗಳನ್ನು ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ದೇಶದ ಹಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು 45 ರಿಂದ 50 ಡಿಗ್ರಿ ಸೆಲ್ಷಿಯಸ್ ವರೆಗೆ ಇದೆ ಎಂದು ಹೇಳಲಾಗಿದೆ.

Trending News