ನವದೆಹಲಿ: ಕೊಲೆ ಪ್ರಕರಣದ ಆರೋಪಿಯಾಗಿದ್ದ, ಸುಮಾರು 11ಕ್ಕೂ ಅಧಿಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಶಾರ್ಪ್ ಶೂಟರ್ ನನ್ನು ಬಂಧಿಸಿರುವುದಾಗಿ ದೆಹಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಆರೋಪಿ ಅರವಿಂದ ಕುಮಾರ್(32)ನನ್ನು ತಮಿಳುನಾಡಿನ ವೆಲ್ಲೂರಿನಲ್ಲಿ ಪೊಲೀಸರು ಎಪ್ರಿಲ್ 29ರಂದು ಬಂಧಿಸಿದ್ದಾರೆ. ಅನಿಲ್ ಧುಜಾನಾ-ರಂದೀಪ್ ಭಾಟಿ ಗ್ಯಾಂಗ್ ನಲ್ಲಿ ಆತ ಶಾರ್ಪ್ ಶೂಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 


ಸಂವೇದನೆಯ ಕೊಲೆಯ ಸಾಕ್ಷಿಯ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿದೆ. ಈ ಬಗ್ಗೆ ಹೊಸ ಅಶೋಕ್ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ದೆಹಲಿ ಮತ್ತು ಯುಪಿ ಪೊಲೀಸ್ ಠಾಣೆಗಳಲ್ಲಿ ಕುಮಾರ್ ವಿರುದ್ಧ 11 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.