ನವದೆಹಲಿ: ರೈತ ಹಾಗೂ ಕಾರ್ಮಿಕ ಸಂಘಟನೆಗಳು ನೀಡಿದ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆಯನ್ನು ಚದುರಿಸಲು ನೀರಿನ ಫಿರಂಗಿ ಹಾಗೂ ಆಶ್ರುವಾಯುಗಳನ್ನು ಬಳಸಿದರು.


COMMERCIAL BREAK
SCROLL TO CONTINUE READING

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧದ ತಮ್ಮ ದೆಹಲಿ ಚಲೋ ಮೆರವಣಿಗೆಯ ಭಾಗವಾಗಿ ರಾಷ್ಟ್ರದ ರಾಜಧಾನಿಯನ್ನು ಪ್ರವೇಶಿಸಲು ನಿರ್ಧರಿಸಿದರು. ಈ ಪ್ರತಿಭಟನಾ ಮೆರವಣಿಗೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ ಗಡಿ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ನ್ನು ಏರ್ಪಡಿಸಿದ್ದರು. 



ಇದಕ್ಕೂ ಮುಂಚೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ರೈತರು ದೆಹಲಿಯ ಕಡೆಗೆ ಹೋಗುವುದನ್ನು ನಿಲ್ಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು, ಅವರ ವಿರುದ್ಧ ಅಧಿಕಾರವನ್ನು ವಿವೇಚನೆ ಇಲ್ಲದೆ ಬಳಸುವುದು 'ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ 'ಎಂದು ಹೇಳಿದರು. 


ರೈತರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶಾಂತಿಯುತ ಪ್ರದರ್ಶನವು ರೈತರ ಸಾಂವಿಧಾನಿಕ ಹಕ್ಕು ಎಂದು ಹೇಳಿದರು. “ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳು ರೈತ ವಿರೋಧಿ. ಅವುಗಳನ್ನು ಹಿಂತೆಗೆದುಕೊಳ್ಳುವ ಬದಲು, ರೈತರು ಶಾಂತಿಯುತ ಪ್ರದರ್ಶನಗಳನ್ನು ನಡೆಸದಂತೆ ತಡೆಯಲಾಗುತ್ತಿದೆ, ಅವುಗಳ ಮೇಲೆ ಜಲ ಫಿರಂಗಿಗಳನ್ನು ಬಳಸಲಾಗುತ್ತಿದೆ. ಇದು ಸಂಪೂರ್ಣವಾಗಿ ತಪ್ಪು. ಶಾಂತಿಯುತ ಪ್ರದರ್ಶನಗಳು ಅವರ ಸಾಂವಿಧಾನಿಕ ಹಕ್ಕು ”ಎಂದು ಅವರು ಹಿಂದಿಯಲ್ಲಿ ಮಾಡಿದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.