ನವದೆಹಲಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ನವಜೋತ್ ಸಿಂಗ್ ಸಿಧು ನೇಮಕವಾದ ನಂತರ ಮೊದಲ ಬಾರಿಗೆ ಶಾಂತಿ ಸಂಧಾನದ ಪ್ರಯತ್ನವಾಗಿ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಜೊತೆಗಿನ ಟೀ ಪಾರ್ಟಿಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Navjot Singh Sidhu: 62 ಶಾಸಕರ ಬೆಂಬಲ ತೋರಿಸಿದ ನವಜೋತ್ ಸಿಂಗ್ ಸಿಧು


ಪಕ್ಷದ ಎಲ್ಲಾ ಶಾಸಕರನ್ನು ಹಾಗೂ ಮುಖಂಡರನ್ನು ಟೀ ಪಾರ್ಟಿಗಾಗಿ ಆಹ್ವಾನಿಸಲಾಗಿದೆ.ಈ ಟೀ ಪಾರ್ಟಿ ಪಂಜಾಬ್ ಭವನದಲ್ಲಿ ನಡೆಯಲಿದೆ ಎನ್ನಲಾಗಿದೆ."ನನಗೆ ಯಾವುದೇ ವೈಯಕ್ತಿಕ ಕಾರ್ಯಸೂಚಿ ಇಲ್ಲ,ಜನರ ಪರವಾದ ಕಾರ್ಯಸೂಚಿ ಮಾತ್ರ ಇದೆ. ಹೀಗಾಗಿ, ನಮ್ಮ ಪಂಜಾಬ್ ಕಾಂಗ್ರೆಸ್ ಕುಟುಂಬದ ಹಿರಿಯರಾಗಿ, ದಯವಿಟ್ಟು ಬಂದು ಹೊಸ ಪ್ರದೇಶ ಕಾಂಗ್ರೆಸ್ ತಂಡವನ್ನು ಆಶೀರ್ವದಿಸಬೇಕೆಂದು ನಾನು ವಿನಂತಿಸುತ್ತೇನೆ" ಎಂದು ಸಿಧು (Navjot Singh Sidhu) ಹೇಳಿದ್ದಾರೆ.


ಸಿಎಂ ಅಮರಿಂದರ್ ಜೊತೆಗಿನ ಸಂಘರ್ಷದ ನಡುವೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಸಿಧು ನೇಮಕ


ಸಿಎಂ ಅಮರಿಂದರ್ ಸಿಧುಗೆ ಅವಹೇಳನಕಾರಿ ಟ್ವೀಟ್ಗಳಿಗಾಗಿ ಕ್ಷಮೆಯಾಚಿಸಬೇಕೆಂದು ಕೋರಿದ್ದರು, ಆದರೆ ಸಿಧು ಇನ್ನೂ ಸಾರ್ವಜನಿಕವಾಗಿ ಕ್ಷಮೆಯಾಚಿಸಿಲ್ಲ ಎನ್ನಲಾಗಿದೆ.ಆದರೆ ಮೂಲಗಳು ಹೇಳುವಂತೆ ಇಬ್ಬರು ನಾಯಕರ ನಡುವೆ ಸ್ವಲ್ಪ ಹೊಂದಾಣಿಕೆ ನಡೆದಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ : YouTube Super Thanks: YouTuberಗಳಿಗಾಗಿ ತೆರೆದುಕೊಂಡ ಆದಾಯದ ಹೊಸ ಮಾರ್ಗ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ