ಕಾಂಗ್ರೆಸ್ ಹೈಕಮಾಂಡ್ ಗೆ ವಾರ್ನಿಂಗ್ ಕೊಟ್ಟ ನವಜೋತ್ ಸಿಂಗ್ ಸಿಧು

ಪಂಜಾಬ್ ಕಾಂಗ್ರೆಸ್ ನಲ್ಲಿನ ಗೊಂದಲದ ನಡುವೆ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರ ಮಲ್ವಿಂದರ್ ಸಿಂಗ್ ಮಾಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಅವರ ಸಲಹೆಗಾರರಾಗಿದ್ದ ಅವಧಿಯಲ್ಲಿ, ಮಾಲಿ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.ಇದರ ನಂತರ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರರನ್ನು ತೆಗೆದುಹಾಕುವಂತೆ ಕೇಳಿದ್ದರು.

Written by - Zee Kannada News Desk | Last Updated : Aug 27, 2021, 05:21 PM IST
  • ನೀವು ನನಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಬಿಡದಿದ್ದರೆ, ನಾನು ಯಾರನ್ನೂ ಬಿಡುವುದಿಲ್ಲ ಎಂದು ನಾನು ಹೈಕಮಾಂಡ್‌ಗೆ ಹೇಳಿದ್ದೇನೆ.
  • ಕೈಗಾರಿಕೆಯಿಲ್ಲದೆ ಯಾವುದೇ ರಾಜ್ಯವು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ.ಅಂತಾರಾಷ್ಟ್ರೀಯ ವ್ಯಾಪಾರ ಆರಂಭವಾಗಬೇಕು.
  • ಪಂಜಾಬಿನ ಜನರು ನಿರಾಸೆಗೊಂಡಿದ್ದಾರೆ.ಅವರ ಜೀವನವನ್ನು ಮತ್ತೆ ಸರಿದಾರಿಗೆ ತರಬೇಕು ಅವರನ್ನು ಹಿಂದುಳಿಯಲು ನಾನು ಬಿಡುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಹೈಕಮಾಂಡ್ ಗೆ ವಾರ್ನಿಂಗ್ ಕೊಟ್ಟ ನವಜೋತ್ ಸಿಂಗ್ ಸಿಧು  title=
file photo

ನವದೆಹಲಿ: ಪಂಜಾಬ್ ಕಾಂಗ್ರೆಸ್ ನಲ್ಲಿನ ಗೊಂದಲದ ನಡುವೆ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರ ಮಲ್ವಿಂದರ್ ಸಿಂಗ್ ಮಾಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಅವರ ಸಲಹೆಗಾರರಾಗಿದ್ದ ಅವಧಿಯಲ್ಲಿ, ಮಾಲಿ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.ಇದರ ನಂತರ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ನವಜೋತ್ ಸಿಂಗ್ ಸಿಧು ಅವರ ಸಲಹೆಗಾರರನ್ನು ತೆಗೆದುಹಾಕುವಂತೆ ಕೇಳಿದ್ದರು.

ಇದನ್ನೂ ಓದಿ: Punjab Congress Crisis: ರಾಹುಲ್ ಗಾಂಧಿ ಭೇಟಿಯಾದ ನವಜೋತ್ ಸಿಂಗ್ ಸಿಧು

ಈಗ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನವಜೋತ್ ಸಿಂಗ್ ಸಿಧು (Navjot Singh Sidhu) ಅವರು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುಮತಿ ನೀಡದಿದ್ದರೆ, ಅವರು ಅದನ್ನು ಹಗುರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ.ಸಿಧು ಅವರು ಪ್ರದರ್ಶನ ಕುದುರೆಯಂತೆ ಬದುಕಲು ಬಯಸುವುದಿಲ್ಲ ಎಂದು ಹೇಳುತ್ತಾರೆ.

ಶುಕ್ರವಾರ ವರ್ತಕರ ಸಂಘದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, "ನೀವು ನನಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಬಿಡದಿದ್ದರೆ, ನಾನು ಯಾರನ್ನೂ ಬಿಡುವುದಿಲ್ಲ ಎಂದು ನಾನು ಹೈಕಮಾಂಡ್‌ಗೆ ಹೇಳಿದ್ದೇನೆ, ಕೈಗಾರಿಕೆಯಿಲ್ಲದೆ ಯಾವುದೇ ರಾಜ್ಯವು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ.ಅಂತಾರಾಷ್ಟ್ರೀಯ ವ್ಯಾಪಾರ ಆರಂಭವಾಗಬೇಕು.ಪಂಜಾಬಿನ ಜನರು ನಿರಾಸೆಗೊಂಡಿದ್ದಾರೆ.ಅವರ ಜೀವನವನ್ನು ಮತ್ತೆ ಸರಿದಾರಿಗೆ ತರಬೇಕು ಅವರನ್ನು ಹಿಂದುಳಿಯಲು ನಾನು ಬಿಡುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ನವಜೋತ್ ಸಿಂಗ್ ಸಿಧು ಗೆ ಔತಣಕೂಟಕ್ಕೆ ಆಹ್ವಾನ ನೀಡಿ ಅಚ್ಚರಿ ಮೂಡಿಸಿದ ಸಿಎಂ ಅಮರಿಂದರ್ ಸಿಂಗ್ ...!

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಸಿಕ್ಕರೂ ಸಹಿತ ನವಜೋತ್ ಸಿಂಗ್ ಸಿಧು ಮತ್ತೊಮ್ಮೆ ಬಂಡಾಯದ ವರ್ತನೆ ತೋರಿದ್ದಾರೆ.ಆ ಮೂಲಕ ಅವರು ಮತ್ತೊಮ್ಮೆ ಹೈಕಮಾಂಡ್‌ಗೆ ಸವಾಲು ಹಾಕಿದ್ದಾರೆ.ಏತನ್ಮಧ್ಯೆ, ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಶುಕ್ರವಾರ ಪಕ್ಷದ ಪಂಜಾಬ್ ಘಟಕದ ನಾಯಕ ತಪ್ಪಾಗಿ ಅರ್ಥೈಸಿಕೊಳ್ಳದ ರೀತಿಯಲ್ಲಿ ವರ್ತಿಸಬೇಕು, ಇದರಿಂದ ಪಕ್ಷಕ್ಕೆ ಹಾನಿಯಾಗಬಹುದು ಎಂದು ಹೇಳಿದರು.

ಸಿಧು ಅವರ 'ನಿರ್ಧಾರ ತೆಗೆದುಕೊಳ್ಳುವಲ್ಲಿ ಸ್ವಾತಂತ್ರ್ಯದ ಕೊರತೆ' ಕುರಿತು ಕೇಳಿದ ಪ್ರಶ್ನೆಗೆ ರಾವತ್, "ನಾನು ಹೇಳಿಕೆಯ ಸನ್ನಿವೇಶವನ್ನು ಪಕ್ಷದ ಪ್ರೋಟೋಕಾಲ್ ಪ್ರಕಾರ ನೋಡುತ್ತೇನೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News