/kannada/photo-gallery/rahu-star-transit-will-bless-these-zodiac-sign-221364 ರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲ  ರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲ 221364

ಬೆಂಗಳೂರು : ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಕಳಪೆ ತನಿಖೆಗೆ ಒಳಪಟ್ಟಿದ್ದ ಮುಂಬೈ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮುಖ್ಯಸ್ಥ ಸಮೀರ್ ವಾಂಖೆಡೆ ಅವರನ್ನು ಚೆನ್ನೈನಲ್ಲಿರುವ ತೆರಿಗೆದಾರರ ಸೇವೆಗಳ ಮಹಾನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿದೆ. ಇವರ ಸ್ಥಾನಕ್ಕೆ ಬೆಂಗಳೂರು ಎನ್‌ಸಿಬಿ ನಿರ್ದೇಶಕ ಅಮಿತ್ ಘಾವಟೆಗೆ ಅವರನ್ನು ನೇಮಕ ಮಾಡಲಾಗಿದೆ. 2008 ರ ಬ್ಯಾಚ್‌ನ ಭಾರತೀಯ ಕಂದಾಯ ಸೇವಾ ಅಧಿಕಾರಿ ಘಾವಟೆ ಅವರು ಜೂನ್ 2020 ರಲ್ಲಿ ಬೆಂಗಳೂರು, ಎನ್‌ಸಿಬಿ ವಲಯ ನಿರ್ದೇಶಕರಾಗಿ ನೇಮಕಗೊಂಡಿದ್ದರು. 

ಬೆಂಗಳೂರು ಎನ್‌ಸಿಬಿ ವಲಯ ಘಟಕವು ಇತರ ಮೂರು ರಾಜ್ಯಗಳನ್ನು ಒಳಗೊಂಡಿದೆ - ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕೇರಳ. ಝೋನಲ್ ಡೈರೆಕ್ಟರ್, ಎನ್‌ಸಿಬಿ, ಚೆನ್ನೈ ಅಧಿಕಾರಿ ಯಾಗಿದ್ದ ಪಿ ಅರವಿಂದನ್ ಅವರು, ಬೆಂಗಳೂರು ಎನ್‌ಸಿಬಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಇವರು 2010 ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) ಅಧಿಕಾರಿಯಾಗಿದ್ದಾರೆ. ಇವರು ತಮಿಳುನಾಡು, ಕೇರಳ, ಪಾಂಡಿಚೇರಿ ಮತ್ತು ಲಕ್ಷದ್ವೀಪಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಘಾವಟೆ ಅವರ ಮೇಲ್ವಿಚಾರಣೆಯಲ್ಲಿ, NCB, BZU ಹಲವಾರು ಡ್ರಗ್ ಸಿಂಡಿಕೇಟ್‌ಗಳನ್ನು ಭೇದಿಸಿದ್ದಾರೆ. 

ಇದನ್ನೂ ಓದಿ : Hawala case : ಸತ್ಯೇಂದ್ರಗೆ ಕ್ಲೀನ್ ಚಿಟ್ ನೀಡಿದ ಕೇಜ್ರಿವಾಲ್ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ

2020ರ ಆಗಸ್ಟ್‌ನಲ್ಲಿ ನಡೆದ ಮಾದಕ ದ್ರವ್ಯ ದಂಧೆಯಿಂದಾಗಿ ಸಿಪಿಐ(ಎಂ)ನ ಕೇರಳ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಷ್ ಕೊಡಿಯೇರಿ ಅವರನ್ನು ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು, ಮೊಹಮ್ಮದ್ ಅನೂಪ್ ಜತೆಗಿನ ಹಣಕಾಸು ವ್ಯವಹಾರದ ಆರೋಪದ ಮೇಲೆ ಬಂಧಿಸಿದೆ. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿಯಲ್ಲಿ ಬೆಂಗಳೂರಿನ ಎನ್‌ಸಿಬಿಯಿಂದ ಆಗಸ್ಟ್‌ನಲ್ಲಿ, NCB, BZU ತನಿಖೆಯು ಸೆಪ್ಟೆಂಬರ್ 2020 ರಲ್ಲಿ ಸ್ಯಾಂಡಲ್‌ವುಡ್ ಡ್ರಗ್ ಲಿಂಕ್‌ಗಳನ್ನು ಭೇದಿಸಲು ಬೆಂಗಳೂರು ನಗರ ಪೊಲೀಸರಿಗೆ ಕಾರಣವಾಯಿತು. 

ಈ ಪ್ರಕರಣದಲ್ಲಿ ಕೆಲವು ಪ್ರಮುಖ ಸ್ಯಾಂಡಲ್‌ವುಡ್ ನಟ-ನಟಿಯರು, ಈವೆಂಟ್ ಮ್ಯಾನೇಜರ್‌ಗಳು, ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಸೋದರಮಾವ ಆದಿತ್ಯ ಆಳ್ವ ಅವರನ್ನು ಬಂಧಿಸಲಾಯಿತು. 2020 ರ ಜೂನ್‌ನಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಸಾವಿನ ರೂವಾರಿ ರಿಯಾ ಚಕ್ರವರ್ತಿ ಪಾತ್ರವನ್ನು ಆರಂಭದಲ್ಲಿ ತನಿಖೆ ನಡೆಸಿದ ತಂಡದಲ್ಲಿ ಘಾವಟೆ ಇದ್ದರು.

ಇದನ್ನೂ ಓದಿ : ನ್ಯಾಷನಲ್ ಹೆರಾಲ್ಡ್ ಕೇಸ್‌: ಸೋನಿಯಾ-ರಾಹುಲ್ ಗಾಂಧಿಗೆ ಇಡಿಯಿಂದ ಸಮನ್ಸ್ ಜಾರಿ

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Section: 
English Title: 
NCB Bengaluru chief to replace Sameer Wankhede
News Source: 
Home Title: 

ಸಮೀರ್ ವಾಂಖೆಡೆ ಸ್ಥಾನಕ್ಕೆ ಬೆಂಗಳೂರು ಎನ್‌ಸಿಬಿ ಚೀಫ್ ನೇಮಕ!

Mumbai New NCB Chief : ಸಮೀರ್ ವಾಂಖೆಡೆ ಸ್ಥಾನಕ್ಕೆ ಬೆಂಗಳೂರು ಎನ್‌ಸಿಬಿ ಚೀಫ್ ನೇಮಕ!
Yes
Is Blog?: 
No
Tags: 
Facebook Instant Article: 
Yes
Highlights: 

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಡ್ರಗ್ಸ್ ಆನ್ ಕ್ರೂಸ್ ಪ್ರಕರಣ

ಮುಂಬೈ ಎನ್‌ಸಿಬಿ ಮುಖ್ಯಸ್ಥ ಸಮೀರ್ ವಾಂಖೆಡೆ ಚೆನ್ನೈಗೆ ವರ್ಗಾವಣೆ

ಬೆಂಗಳೂರು ಎನ್‌ಸಿಬಿ ನಿರ್ದೇಶಕ ಅಮಿತ್ ಘಾವಟೆಗೆ ಅವರನ್ನು ನೇಮಕ

Mobile Title: 
ಸಮೀರ್ ವಾಂಖೆಡೆ ಸ್ಥಾನಕ್ಕೆ ಬೆಂಗಳೂರು ಎನ್‌ಸಿಬಿ ಚೀಫ್ ನೇಮಕ!
Channabasava A Kashinakunti
Publish Later: 
No
Publish At: 
Wednesday, June 1, 2022 - 17:48
Created By: 
Chennabasava A Kashinakunti
Updated By: 
Chennabasava A Kashinakunti
Published By: 
Chennabasava A Kashinakunti
Request Count: 
2
Is Breaking News: 
No