ಕಠ್ಮಾಂಡು: ನೇಪಾಳದ ಪೊಖರಾದಲ್ಲಿ ಭಾನುವಾರ ಭೀಕರ ವಿಮಾನ ದುರಂತ  ಸಂಭವಿಸಿದ್ದು, ಐವರು ಭಾರತೀಯರು ಸೇರಿದಂತೆ 72 ಜನರು ದುರ್ಮರಣ ಹೊಂದಿದ್ದಾರೆ. ಕಳೆದ 30 ವರ್ಷಗಳಲ್ಲೇ ನಡೆದ ಅತ್ಯಂತ ಭೀಕರ ವಿಮಾನ ದುರಂತ ಇದಾಗಿದೆ. ಪತನವಾದ ವಿಮಾನದಲ್ಲಿ 68 ಪ್ರಯಾಣಿಕರು, ನಾಲ್ವರು ಸಿಬ್ಬಂದಿ ಸೇರಿ ಒಟ್ಟು 72 ಮಂದಿ ಇದ್ದರು ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

‘ಯೇತಿ ಏರ್‌ಲೈನ್ಸ್‌ಗೆ ಸೇರಿದ ATR–72 ವಿಮಾನವು ನೇಪಾಳ ರಾಜಧಾನಿ ಕಠ್ಮಂಡುವಿನಿಂದ ಭಾನುವಾರ ಬೆಳಗ್ಗೆ 10.25ಕ್ಕೆ ಹೊರಟಿತ್ತು. ಕಠ್ಮಂಡುವಿನಿಂದ 160 ಕಿಮೀ ದೂರದಲ್ಲಿರುವ ಪೊಖರಾದಲ್ಲಿ ಬೆಳಗ್ಗೆ 10.40ರ ವೇಳೆಗೆ ಈ ವಿಮಾನ ಲ್ಯಾಂಡ್ ಆಗಬೇಕಿತ್ತು. ಆದರೆ ವಿಮಾನ ನಿಲ್ದಾಣದಿಂದ ಕೆಲವೇ 100 ಮೀಟರ್‌ ದೂರದಲ್ಲಿದ್ದಾಗ ವಿಮಾನವು ನೆಲಕ್ಕೆ ಅಪ್ಪಳಿಸಿತ್ತು. ಪರಿಣಾಮ ಬೆಂಕಿ ಹೊತ್ತಿಕೊಂಡು ಉರಿದಿದ್ದು, ವಿಮಾನದಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ.


ಇದನ್ನೂ ಓದಿ: Watch: ಸಂಸದೆ ಸುಪ್ರಿಯಾ ಸುಳೆ ಸೀರೆಗೆ ತಗುಲಿದ ಬೆಂಕಿ, ಸ್ವಲ್ಪದರಲ್ಲೇ ತಪ್ಪಿದ ಭಾರಿ ಅನಾಹುತ


ಪಶುಪತಿನಾಥನ ದರ್ಶನಕ್ಕೆ ತೆರಳಿದ್ದವರ ದುರಂತ ಅಂತ್ಯ!


ಸರ್ಕಾರಿ ನೌಕರರಿಗೆ ಸಂತದ ಸುದ್ದಿ, ಕನಿಷ್ಠ ವೇತನದಲ್ಲಿ ಶೀಘ್ರದಲ್ಲೇ ಹೆಚ್ಚಳ


ಸೋನು ಜೈಸ್ವಾಲ್ ಉದ್ಯಮಿಯಾಗಿದ್ದರೆ, ವಿಶಾಲ್‌ ಶರ್ಮಾ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಅನಿಲ್ ಕುಮಾರ್ ರಾಜ್ಬರ್ ಮತ್ತು ಅಭಿಷೇಕ್ ಕುಶ್ವಾಹಾ ಗಾಜಿಪುರದಲ್ಲಿ ಜನ ಸೇವಾ ಕೇಂದ್ರವನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.