ನೂತನ ಶಾಸಕರಿಗೆ ಭಾನುವಾರ ಪ್ರಮಾಣವಚನ

ಉಪಚುನಾವಣೆಯಲ್ಲಿ ಗೆದ್ದ ನೂತನ ಶಾಸಕರಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರ ಗೌಪ್ಯತೆ ಬೋಧಿಸಲಾಗುವುದು.

Last Updated : Dec 17, 2019, 12:50 PM IST
ನೂತನ ಶಾಸಕರಿಗೆ ಭಾನುವಾರ ಪ್ರಮಾಣವಚನ title=

ಬೆಂಗಳೂರು: ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಗೆದ್ದು ಶಾಸಕಾರಗಿರುವ ನೂತನ ಶಾಸಕರು ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿಯ 12, ಇಬ್ಬರು ಕಾಂಗ್ರೆಸ್ ಹಾಗೂ ಓರ್ವ ಪಕ್ಷೇತರ ಶಾಸಕ ಸೇರಿದಂತೆ ಒಟ್ಟು 15 ಮಂದಿ ಶಾಸಕರು ಇದೇ ಭಾನುವಾರ ಪ್ರಮಾಣ ವಚನ ಸ್ವೀಕರಿಸುವರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೂತನ ಶಾಸಕರಿಗೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ. 

ಯಾವ ಕ್ಷೇತ್ರದಲ್ಲಿ ಯಾರು ಗೆದ್ದರು?
1. ಅಥಣಿ ವಿಧಾನಸಭಾ ಕ್ಷೇತ್ರಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮಹೇಶ್ ಕುಮಟಳ್ಳಿ ತಮ್ಮ ಪ್ರತಿಸ್ಪರ್ಧಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗಜಾನನ್ ಭಾಲಚಂದ್ರ ಮಂಗಸೂಳಿ ವಿರುದ್ಧ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ - 39989 ಮತಗಳು)
2. ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ರಮೇಶ್ ಜಾರಕಿಹೊಳಿ ತಮ್ಮ ಪ್ರತಿಸ್ಪರ್ಧಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಮಂಗಸೂಳಿ ವಿರುದ್ಧ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ - 29006 ಮತಗಳು)
3. ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀಮಂತ ಪಾಟೀಲ ಅವರು ತಮ್ಮ ಪ್ರತಿಸ್ಪರ್ಧಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಭರಮಗೌಡ ಕಾಗೆ ವಿರುದ್ಧ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ - 18557 ಮತಗಳು)
4. ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಅರುಣ್ ಕುಮಾರ್ ಅವರು ತಮ್ಮ ಪ್ರತಿಸ್ಪರ್ಧಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ವಿರುದ್ಧ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ - 23222 ಮತಗಳು)
5. ಹಿರೇಕೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್ ಅವರು ತಮ್ಮ ಪ್ರತಿಸ್ಪರ್ಧಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬಿ.ಹೆ.ಬನ್ನಿಕೋಡ್ ವಿರುದ್ಧ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ-2906 ಮತಗಳು)
6. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಶಿವರಾಮ್ ಹೆಬ್ಬಾರ್ ಅವರು ತಮ್ಮ ಪ್ರತಿಸ್ಪರ್ಧಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ವಿರುದ್ಧ ಬಿಜೆಪಿ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ - 31408 ಮತಗಳು)
7. ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ಪ್ರತಿಸ್ಪರ್ಧಿ ಹಾಗೂ  ಕಾಂಗ್ರೆಸ್ ಅಭ್ಯರ್ಥಿ ವಿ.ವೈ.ಘೋರ್ಪಡೆ ವಿರುದ್ಧ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ - 30125 ಮತಗಳು)
8. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ತಮ್ಮಪ್ರತಿಸ್ಪರ್ಧಿ ಹಾಗೂ  ಕಾಂಗ್ರೆಸ್ ಅಭ್ಯರ್ಥಿ ಎಂ.ಅಂಜನಪ್ಪ ವಿರುದ್ಧ ಗೆಲುವಿನ ನಗೆಬೀರಿದ್ದಾರೆ.(ಗೆಲುವಿನ ಅಂತರ - 34801 ಮತಗಳು)
9. ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು ಅವರು ತಮ್ಮ ಪ್ರತಿಸ್ಪರ್ಧಿ ಹಾಗೂ  ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣ ಸ್ವಾಮಿ ವಿರುದ್ಧ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ - 59124 ಮತಗಳು)
10. ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯಅವರು ತಮ್ಮ ಪ್ರತಿಸ್ಪರ್ಧಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜು  ವಿರುದ್ಧ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ - 54386)
11. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ತಮ್ಮ ಪ್ರತಿಸ್ಪರ್ಧಿ ಹಾಗೂ JDS ಅಭ್ಯರ್ಥಿ ಬಿ.ಎಲ್. ದೇವರಾಜ್ ವಿರುದ್ಧ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ-9731 ಮತಗಳು)
12. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್'ಟಿ. ಸೋಮಶೇಖರ್ ಅವರು ಜೆಡಿಎಸ್ ಅಭ್ಯರ್ಥಿ ಟಿ.ಎನ್.ಜವರಾಯಿಗೌಡ ವಿರುದ್ಧ ಗೆಲುವು ಸಾಧಿಸಿದ್ದಾರೆ.  (ಗೆಲುವಿನ ಅಂತರ - 27699 ಮತಗಳು)
13. ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ  ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಚ್.ಪಿ. ಮಂಜುನಾಥ್ ತಮ್ಮ ಪ್ರತಿಸ್ಪರ್ಧಿ ಹಾಗೂ ಬಿಜೆಪಿ ಅಭ್ಯರ್ಥಿ ಎ.ಹೆಚ್ ವಿಶ್ವನಾಥ್ ವಿರುದ್ಧ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ - 39727 ಮತಗಳು)
14. ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್  ಅವರು ತಮ್ಮ ಪ್ರತಿಸ್ಪರ್ಧಿ ಹಾಗೂ ಬಿಜೆಪಿ ಅಭ್ಯರ್ಥಿ ಎಂ. ಸರವನ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ. (ಗೆಲುವಿನ ಅಂತರ - 13521 ಮತಗಳು)
15. ಇನ್ನು ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ತಮ್ಮ ಪ್ರತಿಸ್ಪರ್ಧಿ ಹಾಗೂ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಗೆಲುವಿನ ನಗೆಬೀರಿದ್ದಾರೆ. (ಗೆಲುವಿನ ಅಂತರ - 11486 ಮತಗಳು)

Trending News