Biparjoy Update: 24 ಗಂಟೆಗಳಲ್ಲಿ ಭಾರಿ ಅನಾಹುತಕ್ಕೆ ಕಾರಣವಾಗಲಿದೆ ಬಿಪರಜಾಯ್ ಚಂಡಮಾರುತ, ಹವಾಮಾನ ಇಲಾಖೆ ಎಚ್ಚರಿಕೆ!

Biparjoy Latest Update: ಬಿಪರ್ಜೋಯ್ ಭಾರಿ ವೇಗ ಪಡೆದುಕೊಳ್ಳುತ್ತಿದೆ ಮತ್ತು ಅದರ ಪರಿಣಾಮಗಳನ್ನು  ಕರಾವಳಿ ಪ್ರದೇಶಗಳಲ್ಲಿ ನೋಡಬಹುದಾಗಿದೆ. ಆದರೆ ಇದೀಗ ಈ 'ಅತ್ಯಂತ ತೀವ್ರ' ಚಂಡಮಾರುತ ಬಿಪರ್‌ಜಾಯ್‌ ಬಗ್ಗೆ ಹವಾಮಾನ ಇಲಾಖೆ ಕೂಡ ಎಚ್ಚರಿಕೆ ನೀಡಿದೆ.  

Written by - Nitin Tabib | Last Updated : Jun 10, 2023, 03:15 PM IST
  • ಶುಕ್ರವಾರದಂದು ಮುಂದಿನ 36 ಗಂಟೆಗಳಲ್ಲಿ ಬಿಪರ್‌ಜೋಯ್ ಚಂಡಮಾರುತವು ತೀವ್ರಗೊಳ್ಳುವ ಮುನ್ಸೂಚನೆಯ ಹಿನ್ನೆಲೆ,
  • ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.
  • ಇದಲ್ಲದೆ ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ಕಣ್ಣೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Biparjoy Update: 24 ಗಂಟೆಗಳಲ್ಲಿ ಭಾರಿ ಅನಾಹುತಕ್ಕೆ ಕಾರಣವಾಗಲಿದೆ ಬಿಪರಜಾಯ್ ಚಂಡಮಾರುತ, ಹವಾಮಾನ ಇಲಾಖೆ ಎಚ್ಚರಿಕೆ! title=

Biparjoy Latest Update: 'ಅತ್ಯಂತ ತೀವ್ರ' ಚಂಡಮಾರುತ ಬಿಪರ್‌ಜೋಯ್ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಇದು ಉತ್ತರದಿಂದ ಈಶಾನ್ಯಕ್ಕೆ ಚಲಿಸುತ್ತಿದೆ. ಬಿಪರ್‌ಜಾಯ್ ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದ ಕರಾವಳಿಯ ವಲ್ಸಾಡ್ನ ತಿಥಾಲ್ ಬೀಚ್‌ನಲ್ಲಿ ಎತ್ತರದ ಅಲೆಗಳು ಕಾಣಿಸಿಕೊಂಡಿವೆ. ಮುನ್ನೆಚ್ಚರಿಕೆಯ ಕ್ರಮವಾಗಿ ತಿಥಾಲ್ ಬೀಚ್ ಅನ್ನು ಜೂನ್ 14 ರವರೆಗೆ ಪ್ರವಾಸಿಗರಿಗೆ ಮುಚ್ಚಲಾಗಿದೆ. ಮಾಹಿತಿ ನೀಡಿರುವ ವಲ್ಸಾಡ್ ತಹಸೀಲ್ದಾರ್ ಟಿ.ಸಿ.ಪಟೇಲ್, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಅವರೆಲ್ಲರೂ ಹಿಂತಿರುಗಿದ್ದಾರೆ. ಅಗತ್ಯ ಬಿದ್ದರೆ ಸಮುದ್ರಕ್ಕೆ ಹತ್ತಿರವಿರುವ ಜನರನ್ನು ಗ್ರಾಮಕ್ಕೆ ಸ್ಥಳಾಂತರಿಸಲಾಗುವುದು. ಅವರಿಗಾಗಿ ಆಶ್ರಯ ಮನೆಗಳನ್ನು ನಿರ್ಮಿಸಲಾಗಿದೆ. ನಾವು ಜೂನ್ 14 ರವರೆಗೆ ಪ್ರವಾಸಿಗರ ಹಿತದೃಷ್ಟಿಯಿಂದ ತಿಥಾಲ್ ಬೀಚ್ ಅನ್ನು ಮುಚ್ಚಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತೀವ್ರ ಚಂಡಮಾರುತ ಬಿಪರ್ಜೋಯ್ ಯಾವ ದಿಕ್ಕಿನತ್ತ ಚಲಿಸುತ್ತಿದೆ?
ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಿಂದ ಅತ್ಯಂತ ತೀವ್ರವಾದ ಚಂಡಮಾರುತ ಬಿಪರ್ಜೋಯ್ ಈಶಾನ್ಯಕ್ಕೆ ಚಲಿಸುತ್ತಿದೆ ಮತ್ತು ಗೋವಾದ ಪಶ್ಚಿಮಕ್ಕೆ 740 ಕಿಮೀ, ಮುಂಬೈಯಿಂದ 750 ಕಿಮೀ ಪಶ್ಚಿಮ-ನೈಋತ್ಯಕ್ಕೆ, 2 ಗಂಟೆಗೆ ಪೋರಬಂದರ್‌ನಿಂದ 760 ಕಿಮೀ ಪಶ್ಚಿಮ-ನೈಋತ್ಯ ಭಾಗದಲ್ಲಿರಲಿದೆ ಎಂದು IMD ಹೇಳಿಕೆಯಲ್ಲಿ ತಿಳಿಸಿದೆ: ಜೂನ್ 9 ರಂದು ಸಂಜೆ 30 ಕಿಮೀ ದಕ್ಷಿಣ-ನೈಋತ್ಯ ಮತ್ತು ಕರಾಚಿಯಿಂದ ದಕ್ಷಿಣಕ್ಕೆ 1,070 ಕಿಮೀ ದೂರದಲ್ಲಿರಲಿದೆ. ಮುಂದಿನ ಮೂರು ದಿನಗಳಲ್ಲಿ ಬಿಪರ್‌ಜೋಯ್ ಉತ್ತರ-ಈಶಾನ್ಯಕ್ಕೆ ಮತ್ತು ನಂತರ ಉತ್ತರ-ವಾಯುವ್ಯಕ್ಕೆ ಚಲಿಸಲಿದೆ. ಮುಂದಿನ 24 ಗಂಟೆಗಳಲ್ಲಿ ಇದು ಹೆಚ್ಚು ಅಸಾಧಾರಣ ರೂಪವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.

ಇದನ್ನೂ ಓದಿ-Haryana Politics: ಖಟ್ಟರ್ ಸರ್ಕಾರದಲ್ಲಿ ಅಸಮಾಧಾನದ ಹೊಗೆ, 2024ರ ಮುನ್ನವೇ ಬಿಜೆಪಿ ಕೈಜಾರಲಿದೆಯಾ ಹರ್ಯಾಣಾ?

ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
IMD ಯ ಮುನ್ಸೂಚನೆಯ ಪ್ರಕಾರ, ಜೂನ್ 10 ರಂದು ಸೌರಾಷ್ಟ್ರ ಮತ್ತು ಕಚ್ ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 35-45 ಕಿ.ಮೀಗಳಷ್ಟು ಇರಲಿದೆ. ಇದು ಗಂಟೆಗೆ 55 ಕಿ.ಮೀ.ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ. ನಂತರ ಮರುದಿನ ಜೂನ್ 11 ರಂದು ಬಿಪರ್ಜೋಯ್ ವೇಗ ಗಂಟೆಗೆ 40-50 ಕಿ.ಮೀ ಮತ್ತು 60 ಕಿ.ಮೀ ವರೆಗೆ ಹೆಚ್ಚಾಗುವ ನಿರೀಕ್ಷೆಯಿದೆ. ಜೂನ್ 12 ರಂದು ಗಾಳಿಯ ವೇಗ ಗಂಟೆಗೆ 45-55 ಕಿ.ಮೀ. ನಂತರ ಇದು ಗಂಟೆಗೆ 65 ಕಿಮೀ ವೇಗವನ್ನು ಹೆಚ್ಚಿಸಬಹುದು. ಇದಾದ ಬಳಿಕ ಜೂನ್ 13 ಮತ್ತು 14ರಂದು ಮುಂದಿನ ಎರಡು ದಿನಗಳ ಕಾಲ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗಂಟೆಗೆ 70 ಕಿ.ಮೀವರೆಗೆ ಅದು ಹೋಗುವ ಸಾಧ್ಯತೆ ಇದೆ.

ಇದನ್ನೂ ಓದಿ-Maharashtra Politics: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಬಿರುಗಾಳಿಯ ಸಂಕೇತ, ರಾಜೀನಾಮೆಗೆ ಮುಂದಾದ ಸಿಎಂ ಪುತ್ರ ಶ್ರೀಕಾಂತ್ ಸಿಂಧೆ!

ಕೇರಳದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ಶುಕ್ರವಾರದಂದು ಮುಂದಿನ 36 ಗಂಟೆಗಳಲ್ಲಿ ಬಿಪರ್‌ಜೋಯ್ ಚಂಡಮಾರುತವು ತೀವ್ರಗೊಳ್ಳುವ ಮುನ್ಸೂಚನೆಯ ಹಿನ್ನೆಲೆ, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಇದಲ್ಲದೆ ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ಕಣ್ಣೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News