Nitish Kumar Resigns : ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ಬಿಹಾರ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್‌!

Nitish Kumar Resigns : ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಮೈತ್ರಿ ಮುರಿದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ ತಮ್ಮ ಮುಂದಿನ ರಾಜಕೀಯ ನಡೆಗಳ ಕುರಿತು ಚರ್ಚಿಸಲು ಜೆಡಿಯು ಮುಖಂಡರ ಜತೆ ಸಭೆ ನಡೆಸಿದರು. 

Written by - Chetana Devarmani | Last Updated : Aug 9, 2022, 05:08 PM IST
  • ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಮೈತ್ರಿ ಮುರಿದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ರಾಜೀನಾಮೆ ನೀಡಿದ್ದಾರೆ
  • ಇದಕ್ಕೂ ಮುನ್ನ ತಮ್ಮ ಮುಂದಿನ ರಾಜಕೀಯ ನಡೆಗಳ ಕುರಿತು ಚರ್ಚಿಸಲು ಜೆಡಿಯು ಮುಖಂಡರ ಜತೆ ಸಭೆ ನಡೆಸಿದರು
  • ಇಂದು ನಡೆದ ಜೆಡಿಯು ಸಭೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿ ಕುಮಾರ್ ಅವರ ನಿರ್ಧಾರವನ್ನು ಬೆಂಬಲಿಸಿದರು
Nitish Kumar Resigns : ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ಬಿಹಾರ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್‌! title=
ನಿತೀಶ್ ಕುಮಾರ್

Nitish Kumar Resigns : ಭಾರತೀಯ ಜನತಾ ಪಕ್ಷ (ಬಿಜೆಪಿ) ಜೊತೆಗಿನ ಮೈತ್ರಿ ಮುರಿದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ ತಮ್ಮ ಮುಂದಿನ ರಾಜಕೀಯ ನಡೆಗಳ ಕುರಿತು ಚರ್ಚಿಸಲು ಜೆಡಿಯು ಮುಖಂಡರ ಜತೆ ಸಭೆ ನಡೆಸಿದರು. ನಂತರ ಅವರು ರಾಜ್ಯಪಾಲ ಫಾಗು ಚೌಹಾಣ್ ಅವರಿಂದ ಸಮಯ ಕೋರಿದರು. ಸಂಜೆ 4 ಗಂಟೆ ಸುಮಾರಿಗೆ ರಾಜಭವನಕ್ಕೆ ಆಗಮಿಸಿದ ನಿತೀಶ್‌ ಕುಮಾರ್, ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ತಿಳಿಸಿದರು. ಇದಕ್ಕೂ ಮುನ್ನ ಇಂದು ನಡೆದ ಜೆಡಿಯು ಸಭೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರ ನಿರ್ಧಾರವನ್ನು ಬೆಂಬಲಿಸಿದರು. ನಾವೆಲ್ಲರೂ ಅವರ ಜೊತೆಗಿದ್ದೇವೆ ಎಂದು ಹೇಳಿದರು. ನಿತೀಶ್‌ ಕುಮಾರ್ ಅವರ ನಿರ್ಧಾರವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದು ಅವರು ಪ್ರತಿಪಾದಿಸಿದರು. 

ಇದನ್ನೂ ಓದಿ : Bihar Political Crisis : ಶೀಘ್ರದಲ್ಲೇ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ!?

ಸಿಎಂ ನಿವಾಸದ ಹೊರಗೆ ಪೊಲೀಸ್ ಬಂದೋಬಸ್ತ್‌ : 

ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮುರಿದುಕೊಳ್ಳುವುದಾಗಿ ಘೋಷಿಸಿದ ಕೆಲವೇ ಗಂಟೆಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಮೂಲಗಳ ಪ್ರಕಾರ, ಜೆಡಿಯು ಮುಖ್ಯಸ್ಥರು ಶೀಘ್ರದಲ್ಲೇ ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳದೊಂದಿಗೆ ಅಧಿಕಾರದ ಹಕ್ಕು ಸಾಧಿಸಲಿದ್ದಾರೆ. ಹೊಸ ಸೆಟ್ ಅಪ್ ನಲ್ಲಿ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. 

ಇಂದು ನಡೆದ ಜೆಡಿಯು ಸಭೆ :

ಮೈತ್ರಿ ಮುರಿದುಕೊಳ್ಳುವುದಾಗಿ ಘೋಷಿಸುವಾಗ, ನಿತೀಶ್ ಕುಮಾರ್, ಎನ್‌ಡಿಎ ತೊರೆಯಲು ಇದು ಸಾಮೂಹಿಕ ಕರೆ ಎಂದಿದ್ದರು. ಇಲ್ಲಿನ ನಿತೀಶ್ ಕುಮಾರ್ ಅವರ ಅಧಿಕೃತ ನಿವಾಸದಲ್ಲಿ ಜೆಡಿಯು ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಇಂದು ನಡೆದ ಜೆಡಿಯು ಸಭೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿ ಕುಮಾರ್ ಅವರ ನಿರ್ಧಾರವನ್ನು ಬೆಂಬಲಿಸಿದರು ಮತ್ತು ಅವರ ಜೊತೆಗಿದ್ದೇವೆ ಎಂದು ಹೇಳಿದರು. ಕುಮಾರ್ ಅವರ ನಿರ್ಧಾರಕ್ಕೆ ತಾವು ಬೆಂಬಲ ನೀಡುತ್ತೇವೆ ಎಂದು ಅವರು ಪ್ರತಿಪಾದಿಸಿದರು. ಈ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಮುಖ್ಯಮಂತ್ರಿ ನಿವಾಸದ ಹೊರಗೆ ಬಿಗಿ ಪೊಲೀಸ್‌ ಬಂದೋ ಬಸ್ತ್‌ ನಿಯೋಜಿಸಲಾಗಿತ್ತು. 

ಮೂಲಗಳ ಪ್ರಕಾರ, ಸಭೆಯ ನಂತರ ರಾಷ್ಟ್ರೀಯ ಜನತಾ ದಳದ ಶಾಸಕರು, ಎಂಎಲ್‌ಸಿಗಳು ಮತ್ತು ರಾಜ್ಯಸಭಾ ಸಂಸದರು ಪಕ್ಷದ ನಾಯಕ ತೇಜಸ್ವಿ ಯಾದವ್ ಅವರಿಗೆ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ನೀಡಿದರು ಮತ್ತು ಅವರಿಗೆ ತಮ್ಮ ಬೆಂಬಲವನ್ನು ಪ್ರತಿಪಾದಿಸಿದರು. ಮೂಲಗಳ ಪ್ರಕಾರ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಶಾಸಕರು ಕೂಡ ಯಾದವ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಆದರೆ ಎಲ್ಲವನ್ನೂ ತೇಜಸ್ವಿ ಯಾದವ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ : Nitin Gadkari: ವಾಹನ ಸವಾರರಿಗೆ ಸಂತಸದ ಸುದ್ದಿ ಪ್ರಕಟಿಸಿದ ಕೇಂದ್ರ ಸಚಿವ ನಿತೀನ್ ಗಡ್ಕರಿ

ಏತನ್ಮಧ್ಯೆ, ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ರಾಜ್ಯದಲ್ಲಿ ಮುಂಬರುವ ರಾಜಕೀಯ ಬದಲಾವಣೆಯ ಕುರಿತು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. "ಪಟ್ಟಾಭಿಷೇಕಕ್ಕೆ ಸಿದ್ಧರಾಗಿ, ಲ್ಯಾಂಟರ್ನ್ ಹೋಲ್ಡರ್" ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ ಮತ್ತು ಅದಕ್ಕೆ 'ವಿಜಯ' ಎಮೋಟಿಕಾನ್ ಅನ್ನು ಸೇರಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಯು ವಿಭಿನ್ನ ರಾಗ :

ಬಿಜೆಪಿ ಮತ್ತು ಜೆಡಿಯು ವಿವಿಧ ವಿಷಯಗಳಲ್ಲಿ ವಿಭಿನ್ನ ರಾಗಗಳನ್ನು ಜಪಿಸುತ್ತಿದ್ದರು. ಹೀಗಿರುವಾಗ ಕೇಂದ್ರದ ಮಾಜಿ ಸಚಿವ ಆರ್.ಸಿ.ಪಿ.ಸಿಂಗ್ ರಾಜೀನಾಮೆ ನೀಡಿದ ಬಳಿಕ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ‘ಚಿರಾಗ್ ಮಾಡೆಲ್’ ಕುರಿತು ಮಾತನಾಡಿದ ರೀತಿ, ಜೆಡಿಯು ವಿಭಿನ್ನ ಹಾದಿ ಹಿಡಿದಿದೆ. ಮೂಲಗಳ ಪ್ರಕಾರ, ಇಂದು ನಡೆದ ಮಹಾಮೈತ್ರಿಕೂಟದ ಸಭೆಯಲ್ಲಿ, ಆರ್‌ಜೆಡಿ ಶಾಸಕರು, ಎಂಎಲ್‌ಸಿಗಳು ಮತ್ತು ರಾಜ್ಯಸಭಾ ಸಂಸದರು ತೇಜಸ್ವಿ ಯಾದವ್‌ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ನೀಡಿದ್ದು, ನಾವು ಅವರೊಂದಿಗಿದ್ದೇವೆ ಎಂದು ಹೇಳಿದರು. ಆದರೆ ಕಾಂಗ್ರೆಸ್ ಮತ್ತು ಎಡ ಶಾಸಕರು ತೇಜಸ್ವಿ ಯಾದವ್ ಜೊತೆಗಿದ್ದೇವೆ ಎಂದು ಹೇಳಿದ್ದಾರೆ.

ಆರ್‌ಜೆಡಿ ಸಭೆಗೆ ಮುನ್ನ ಬಿಜೆಪಿ ನಾಯಕರ ಸಭೆ : 

ಇಂದು ಕರೆದಿರುವ ಆರ್‌ಜೆಡಿ ಸಭೆಗೆ ಮುನ್ನ, ಕಾಂಗ್ರೆಸ್ ಬಿಹಾರ ಶಾಸಕಾಂಗ ಪಕ್ಷದ ನಾಯಕ ಅಜಿತ್ ಶರ್ಮಾ, "ನಿತೀಶ್ ಕುಮಾರ್ ಬಂದರೆ ನಾವು ಅವರನ್ನು ಸ್ವಾಗತಿಸುತ್ತೇವೆ, ಅವರು ಬಂದರೆ ನಾವು ಅವರನ್ನು ಬೆಂಬಲಿಸುತ್ತೇವೆ. ಮಹಾಘಟಬಂಧನ್ ಸಭೆ ನಡೆಯುತ್ತಿದೆ, ನಾವು ನಿರ್ಧಾರ ತೆಗೆದುಕೊಳ್ಳಬೇಕು" ಎಂದರು. ಮಂಗಳವಾರ ಪಾಟ್ನಾದಲ್ಲಿರುವ ಉಪಮುಖ್ಯಮಂತ್ರಿ ತಾರ್ಕಿಶೋರ್ ಪ್ರಸಾದ್ ಅವರ ನಿವಾಸದಲ್ಲಿ ಬಿಹಾರ ಬಿಜೆಪಿ ನಾಯಕರು ಸಭೆ ನಡೆಸಿದರು. 

ಬಿಜೆಪಿಯವರ ಹೇಳಿಕೆ :

ಅದೇ ಸಮಯದಲ್ಲಿ, ಕೇಂದ್ರ ಸಚಿವ ಕೌಶಲ್ ಕಿಶೋರ್, "ಬಿಹಾರದ ರಾಜಕೀಯ ಪರಿಸ್ಥಿತಿಯ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ" ಎಂದು ಹೇಳಿದರು. "ಆದರೆ ಬಿಜೆಪಿ ಯಾವುದೇ ವಿವಾದ ಅಥವಾ ಅಹಿತಕರ ಪರಿಸ್ಥಿತಿಯನ್ನು ಸೃಷ್ಟಿಸಲು ಏನನ್ನು ಮಾಡಲಿಲ್ಲ. ಜೆಡಿಯು ನಿರ್ಧಾರ ತೆಗೆದುಕೊಳ್ಳುತ್ತದೆ ಆದರೆ ಬಿಜೆಪಿಯು ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಉಳಿಯಬೇಕೆಂದು ಬಯಸುತ್ತದೆ. ಬಿಹಾರದ ಜನರ ಒಳಿತಿಗಾಗಿ ಜೆಡಿಯು-ಬಿಜೆಪಿ ಮತ್ತು ಇತರ ಪಕ್ಷಗಳು ನಿತೀಶ್ ಕುಮಾರ್ ನಾಯಕತ್ವದಲ್ಲಿ ದೃಢವಾಗಿ ಕೆಲಸ ಮಾಡುವುದನ್ನು ಬಿಜೆಪಿ ಬಯಸುತ್ತದೆ" ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News