ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ನಿತ್ಯಾನಂದ ಇದೀಗ ಮತ್ತೊಮ್ಮೆ ಚರ್ಚೆಯ ವಿಷಯವಾಗಿದ್ದಾರೆ. ಕೈಲಾಸದಲ್ಲಿ ತಲೆಮರೆಸಿಕೊಂಡಿರುವ ನಿತ್ಯಾನಂದನ ಪ್ರತಿಮೆಯನ್ನು ಸ್ಥಾಪಿಸಿ, ಅದಕ್ಕೆ ಪೂಜೆ, ಅಭಿಷೇಕ, ಅರ್ಚನೆಗಳನ್ನು ಮಾಡಲಾಗುತ್ತಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Vi-Airtelಗೆ ಜಿಯೋ ಟಕ್ಕರ್: ಅಗ್ಗದ ಪ್ರೀಪೇಡ್ ಯೋಜನೆಯಲ್ಲಿ ಡೇಟಾ ಸೇರಿ ಹಲವು ಪ್ರಯೋಜನ


ಈ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು ಎಂದು ಹೇಳಲಾಗಿತ್ತು. ಆದರೆ ಫೇಸ್‌ಬುಕ್‌ ಮೂಲಕ ಸಂದೇಶ ಕಳುಹಿಸಿ, "ನಾನು ಆರೋಗ್ಯವಾಗಿದ್ದೇನೆ" ಎಂದು ಹೇಳಿದ್ದರು. ಸದ್ಯ ನಿತ್ಯಾನಂದನ ಮೂರ್ತಿಗೆ ಪೂಜೆ ಸಲ್ಲಿಸುತ್ತಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದೆ.  ಚೈತ್ರ ನಕ್ಷತ್ರ ಹಬ್ಬದ ಹಿನ್ನೆಲೆಯಲ್ಲಿ ನಿತ್ಯಾನಂದನ ಮೂರ್ತಿಗೆ ಪೂಜೆ ಮಾಡಲಾಗಿದೆ.  


ಇತ್ತೀಚೆಗೆ ನಿತ್ಯಾನಂದನಿಗೆ ಆರೋಗ್ಯ ಸರಿಯಿಲ್ಲ. ಆತನ ಮರಣ ಸಂಭವಿಸಿದೆ ಎಂಬೆಲ್ಲಾ ಸುದ್ದಿಗಳು ಹರಿದಾಡಿದ್ದವು. ಆದರೆ ಆ ಬಳಿಕ ಕೈಲಾಸದಿಂದ ಸಂದೇಶವೊಂದು ಬಂದಿದ್ದು, "ನಿತ್ಯಾನಂದ ಸ್ವಾಮಿ ಆರೋಗ್ಯವಾಗಿದ್ದಾರೆ. ಶೀಘ್ರವೇ ಭಕ್ತರಿಗೆ ದರ್ಶನ ನೀಡಲಿದ್ದಾರೆ" ಎಂದು ಹೇಳಲಾಗಿತ್ತು. 


ಇದನ್ನೂ ಓದಿ: ಗ್ರಹ ದೋಷಗಳ ಪರಿಹಾರಕ್ಕೆ ಈ ಮಂತ್ರ ಪಠಿಸಿ: ಮಂಗಳಕರ ಫಲ ಪಡೆಯಿರಿ


"ಮೈ ಡಾಟರ್‌ ಜಾಯಿನ್‌ ಎ ಕಲ್ಟ್‌" ಎಂಬ ನಿತ್ಯಾನಂದನ ಜೀವನ ಆಧಾರಿತ ಸಾಕ್ಷ್ಯಚಿತ್ರವು ಡಿಸ್ಕವರಿ ಪ್ಲಸ್ ಒಟಿಟಿಯಲ್ಲಿ ಬಿಡುಗಡೆಗೊಂಡಿತ್ತು. ಈ ಸರಣಿಯನ್ನು ವೈಸ್ ಸ್ಟುಡಿಯೋಸ್ ನಿರ್ಮಿಸಿದ್ದು, 3 ಭಾಗಗಳಲ್ಲಿ ಬಿಡುಗಡೆ ಮಾಡಿದೆ. 


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.