ನವದೆಹಲಿ: ವಾಯುವ್ಯ ಭಾರತದ ಭಾಗಗಳಲ್ಲಿ ತಾಪಮಾನದಲ್ಲಿ ಕುಸಿತವಾಗಿದ್ದರಿಂದಾಗಿ ಶನಿವಾರದಂದು ಪಂಜಾಬ್, ಹರಿಯಾಣ, ಉತ್ತರ ರಾಜಸ್ಥಾನ, ಉತ್ತರ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಭಾಗಗಳಲ್ಲಿ ಡಿಸೆಂಬರ್ 21 ರವರೆಗೆ ಶೀತದ ಅಲೆಯು ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಗಂಗಾ ಎಕ್ಸ್‌ಪ್ರೆಸ್‌ವೇ ಜಿಲ್ಲೆಗಳನ್ನು ಮಾತ್ರವಲ್ಲದೆ ಹೃದಯಗಳನ್ನೂ ಸಂಪರ್ಕಿಸುತ್ತದೆ: ಯೋಗಿ ಆದಿತ್ಯನಾಥ್


ಹಿರಿಯ ಐಎಂಡಿ ಅಧಿಕಾರಿ ಮೃತ್ಯುಂಜಯ್ ಮೊಹಾಪಾತ್ರ ಮಾತನಾಡಿ, “ಕಳೆದ ಮೂರು ದಿನಗಳಿಂದ ಪಂಜಾಬ್, ಹರಿಯಾಣ, ಉತ್ತರ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳು ಸೇರಿದಂತೆ ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಶೀತ ಅಲೆಯಿಂದ ತೀವ್ರ ಶೀತ ಅಲೆಗಳ ಪರಿಸ್ಥಿತಿಗಳು ಚಾಲ್ತಿಯಲ್ಲಿವೆ.


ಇದನ್ನೂ ಓದಿ: ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಪಂಜಾಬ್, ಹರಿಯಾಣ, ಉತ್ತರ ರಾಜಸ್ಥಾನ, ಉತ್ತರ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಡಿಸೆಂಬರ್ 21 ರವರೆಗೆ ಈ ಶೀತ ಅಲೆಯ ಪರಿಸ್ಥಿತಿಗಳು ಮುಂದುವರಿಯುತ್ತದೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ ಎಂದು ಅವರು ಹೇಳಿದರು. ನಂತರ ಕನಿಷ್ಠ ತಾಪಮಾನವು ಸ್ವಲ್ಪಮಟ್ಟಿಗೆ ಏರಿಕೆಯಾಗುವ ನಿರೀಕ್ಷೆಯಿದೆ.


ಇದನ್ನೂ ಓದಿ: 'ಭಾರತಕ್ಕೆ ಫೆಬ್ರುವರಿಯಲ್ಲಿ ಅಪ್ಪಳಿಸಲಿದೆ ಮೂರನೇ ಕೊರೊನಾ ಅಲೆ'


ಈ ವಾರದ ಆರಂಭದಲ್ಲಿ, ಡಿಸೆಂಬರ್ 18 ರ ಶನಿವಾರದಂದು ರಾಷ್ಟ್ರ ರಾಜಧಾನಿಯಲ್ಲಿ ತಾಪಮಾನವು ಮತ್ತಷ್ಟು ಕಡಿಮೆಯಾಗಿದೆ.ದೆಹಲಿಯಲ್ಲಿ ಕನಿಷ್ಠ 5 ಡಿಗ್ರಿ ಸೆಲ್ಸಿಯಸ್ ಮತ್ತು ಹರಿಯಾಣದಲ್ಲಿ ಕನಿಷ್ಠ 3 ಡಿಗ್ರಿ ಸೆಲ್ಸಿಯಸ್ ಮತ್ತು ಪಂಜಾಬ್ 0.7 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ.ಮತ್ತೊಂದೆಡೆ, ರಾಜಸ್ಥಾನದ ಚುರು ಕನಿಷ್ಠ -1.1 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿದೆ.


ಇದನ್ನೂ ಓದಿ: 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.