ನವದೆಹಲಿ: ಇಂದು ಭಾನುವಾರ ಜಾರ್ಸುಗುಡ ಜಿಲ್ಲೆಯಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಗುಂಡು ಹಾರಿಸಿದ ಒಡಿಶಾ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರು ಗಾಯಗೊಂಡು ಸಾವನ್ನಪ್ಪಿದ್ದಾರೆ.


COMMERCIAL BREAK
SCROLL TO CONTINUE READING

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ದಾಸ್ ತೆರಳುತ್ತಿದ್ದಾಗ ಜಾರ್ಸುಗುಡಾದ ಬ್ರಜರಾಜನಗರದ ಗಾಂಧಿ ಛಾಕ್ ಬಳಿ ಈ ಘಟನೆ ಸಂಭವಿಸಿದೆ.ಸಮವಸ್ತ್ರದಲ್ಲಿದ್ದ ಎಎಸ್‌ಐ ಗೋಪಾಲ್ ದಾಸ್ ಅವರು ಇದ್ದಕ್ಕಿದ್ದಂತೆ ಸಚಿವರ ವಾಹನದ ಬಳಿ ಬಂದು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದಾರೆ ಎಂದು ಬ್ರಜರಾಜನಗರ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಗುಪ್ತೇಶ್ವರ ಭೋಯ್ ಹೇಳಿದ್ದಾರೆ.


ಸಾಹಸ ಸಿಂಹನಿಗೆ ʼಕರ್ನಾಟಕ ರತ್ನʼ ಗೌರವ ನೀಡುವ ಭರವಸೆ ನೀಡಿದ ಸಿಎಂ..!


ASI ಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ, ಆದರೆ ಹಿರಿಯ ಬಿಜೆಡಿ ನಾಯಕನ ಮೇಲಿನ ಕ್ರೂರ ದಾಳಿಯ ಹಿಂದಿನ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ.ಸ್ಥಳದಲ್ಲೇ ಸಚಿವರು ಪ್ರಜ್ಞೆ ತಪ್ಪಿ ಬಿದ್ದಿದ್ದರು.ಅಂತಹ ಗಂಭೀರ ಸ್ಥಿತಿಯಲ್ಲಿ, ಅವರನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.ನಂತರ, ಅವರನ್ನು ವಿಮಾನದಲ್ಲಿ ಭುವನೇಶ್ವರಕ್ಕೆ ಕರೆದೊಯ್ಯಲಾಯಿತು.


ಇದನ್ನೂ ಓದಿ: CCL 2023 : ʼಸೆಲೆಬ್ರಿಟಿ ಕ್ರಿಕೆಟ್ ಲೀಗ್‌ʼ ಶುರು.. ಸುದೀಪ್‌ ʼಕರ್ನಾಟಕ ಬುಲ್ಡೋಜರ್ಸ್ʼ ತಂಡ ಸೇರಿ 8 ಟೀಂ ಭಾಗಿ


ಆರೋಗ್ಯ ಸಚಿವರ ಮೇಲಿನ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಪ್ರಕರಣದ ತನಿಖೆಯನ್ನು ಅಪರಾಧ ವಿಭಾಗಕ್ಕೆ ಆದೇಶಿಸಿದ್ದಾರೆ.ಏತನ್ಮಧ್ಯೆ, ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿ ತನಿಖೆ ಆರಂಭಿಸಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.