ಮುಂಬೈನಲ್ಲಿ ಭಾರೀ ಮಳೆ: ಕಾರ್‌ಗೆ ತರಕಾರಿ ಸಾಗಿಸುತ್ತಿದ್ದ ಲಾರಿ ಡಿಕ್ಕಿ, ಓರ್ವ ಸಾವು

ಮಳೆಯಿಂದಾಗಿ ಟ್ರಕ್ ನಿಯಂತ್ರಣ ಕಳೆದುಕೊಂಡು ಇನ್ನೊಂದು ಕಡೆಯಿಂದ ಬರುತ್ತಿದ್ದ ವ್ಯಾಗನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. 

Last Updated : Jul 6, 2019, 11:56 AM IST
ಮುಂಬೈನಲ್ಲಿ ಭಾರೀ ಮಳೆ: ಕಾರ್‌ಗೆ ತರಕಾರಿ ಸಾಗಿಸುತ್ತಿದ್ದ ಲಾರಿ ಡಿಕ್ಕಿ, ಓರ್ವ ಸಾವು title=

ಮುಂಬೈ: ಇಲ್ಲಿನ ಜೋಗೇಶ್ವರಿ ಪ್ರದೇಶದಲ್ಲಿ ಶನಿವಾರ ಮುಂಜಾನೆ ಭಾರೀ ಮಳೆಯ ನಡುವೆಯೇ ತರಕಾರಿಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ತರಕಾರಿ ತುಂಬಿದ ಲಾರಿ ಜೋಗೇಶ್ವರಿಯಿಂದ ದಾದರ್ ಕಡೆಗೆ ಹೋಗುತ್ತಿತ್ತು ಎನ್ನಲಾಗಿದ್ದು, ಮಳೆಯಿಂದಾಗಿ ಟ್ರಕ್ ನಿಯಂತ್ರಣ ಕಳೆದುಕೊಂಡು ಇನ್ನೊಂದು ಕಡೆಯಿಂದ ಬರುತ್ತಿದ್ದ ವ್ಯಾಗನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಸದ್ಯ ಪೊಲೀಸರು ಸ್ಳಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Trending News