ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿರುವ ಕಾಂಗ್ರೆಸ್ ಶಾಸಕ ಮುನಿರತ್ನ ಅವರ ಮನೆ ಬಳಿ ಸ್ಫೋಟ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. 


COMMERCIAL BREAK
SCROLL TO CONTINUE READING

ಬೆಂಗಳೂರಿನ ರಾಜರಾಜೇಶ್ವರಿ ನಗರದ 11ನೇ ಬಿ ಕ್ರಾಸ್ ವೈಯಾಲಿಕಾವಲ್ ಬಳಿ ಇರುವ ಮುನಿರತ್ನ ಮನೆ ಬಳಿ ಈ ಘಟನೆ ನಡೆದಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಸಿಲಿಂಡರ್ ಸ್ಫೋಟದಿಂದ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. 


ಘಟನೆಯಲ್ಲಿ ಅವರ ಮನೆ ಕೆಲಸ ಮಾಡುತ್ತಿದ್ದ ವೆಂಕಟೇಶ್ ಎಂಬಾತ ಸಾವನ್ನಪ್ಪಿದ್ದು, ದೇಹ ಸಂಪೂರ್ಣ ಛಿದ್ರಗೊಂಡಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.