ಈರುಳ್ಳಿ ಬೆಲೆ ಏರಿಕೆ ನಿಯಂತ್ರಣ ಸಾಧ್ಯವಿಲ್ಲ- ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್

ಗಗನಕ್ಕೆ ಏರಿರುವ ಈರುಳ್ಳಿ ಬೆಲೆಯ ನಿಯಂತ್ರಣ ಅಸಾಧ್ಯ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.

Last Updated : Nov 27, 2019, 06:56 PM IST
 ಈರುಳ್ಳಿ ಬೆಲೆ ಏರಿಕೆ ನಿಯಂತ್ರಣ ಸಾಧ್ಯವಿಲ್ಲ- ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ title=
ಸಾಂದರ್ಭಿಕ ಚಿತ್ರ

ನವದೆಹಲಿ: ಗಗನಕ್ಕೆ ಏರಿರುವ ಈರುಳ್ಳಿ ಬೆಲೆಯ ನಿಯಂತ್ರಣ ಅಸಾಧ್ಯ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು ಬುಧವಾರ ಬೆಲೆ ನಿಯಂತ್ರಣ ತನ್ನ ಕೈಯಲ್ಲಿಲ್ಲದ ಕಾರಣ ದೇಶಾದ್ಯಂತ ಇದನ್ನು ಪರೀಕ್ಷಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿತು. ಈರುಳ್ಳಿ ಬೆಲೆ ಯಾವಾಗ ಕಡಿಮೆಯಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಾಮ್ ವಿಲಾಸ್ ಪಾಸ್ವಾನ್, "ಇದು ನಮ್ಮ ಕೈಯಲ್ಲಿಲ್ಲ" ಎಂದು ಹೇಳಿದರು.

ಆದಾಗ್ಯೂ, ಈರುಳ್ಳಿ ಬೆಲೆ ಏರಿಕೆಯನ್ನು ತಡೆಯಲು ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು. ರಾಮ್ ವಿಲಾಸ್ ಪಾಸ್ವಾನ್ ಈ ಹಿಂದೆ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಬೇಡಿಕೆ, ಪೂರೈಕೆ ಮತ್ತು ಈರುಳ್ಳಿ ಬೆಲೆಯ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು, ಈ ಸಂದರ್ಭದಲ್ಲಿ ಎರಡೂ ಇಲಾಖೆಗಳ ಕಾರ್ಯದರ್ಶಿಗಳು ಹಾಜರಿದ್ದರು. ಪೂರೈಕೆ-ಬೇಡಿಕೆಯನ್ನು ಅವಲಂಬಿಸಿ ಬೆಲೆಗಳು ಏರಿಳಿತಗೊಳ್ಳುತ್ತವೆ ಎಂದು ಹೇಳಿರುವ ಪಾಸ್ವಾನ್, ಪ್ರಸ್ತುತ ಇದರಲ್ಲಿ ಹೊಂದಾಣಿಕೆಯಿಲ್ಲ ಎಂದು ಹೇಳಿದರು. ಆದಾಗ್ಯೂ, ಲಭ್ಯತೆ ಸುಧಾರಿಸಲು ಮತ್ತು ಬೆಲೆಗಳನ್ನು ಪರಿಶೀಲಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಭರವಸೆ ನೀಡಿದರು.

ನಾವು ಸದ್ಯದ ಪರಿಸ್ಥಿತಿಯ ಬಗ್ಗೆ ಕಾಳಜಿ ವಹಿಸುತ್ತೇವೆ ಅದಕ್ಕಾಗಿ ಸರ್ಕಾರ ತನ್ನ ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದೆ. ನಾವು ಗರಿಷ್ಠ ಕ್ರಮಗಳನ್ನು ಕೈಗೊಂಡಿದ್ದೇವೆ "ಎಂದು ಅವರು ಹೇಳಿದರು. ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಸುಮಾರು 80-100 ರೂ.ಗಳಷ್ಟು ಏರಿಕೆಯಾಗಿರುವ ಬೆಲೆಗಳನ್ನು ನಿಯಂತ್ರಿಸಲು 1 ಲಕ್ಷ ಟನ್ ಈರುಳ್ಳಿ ಆಮದು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.

Trending News