'ದೆಹಲಿಯ ಒಟ್ಟು 384 Coronavirus ಸೋಂಕಿತರಲ್ಲಿ ಒಟ್ಟು 259 ಮಂದಿ ತಬ್ಲಿಘಿ ಜಮಾತ್ ಗೆ ಸೇರಿದವರಾಗಿದ್ದಾರೆ'

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕಿಗೆ ಇಂದು ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ. ಈ ವ್ಯಕ್ತಿಯನ್ನು ತಬ್ಲಿಘಿ ಜಮಾತ್ ಮರ್ಕಜ್ ನಿಂದ ತರಲಾಗಿತ್ತು.

Last Updated : Apr 3, 2020, 08:50 PM IST
'ದೆಹಲಿಯ ಒಟ್ಟು 384 Coronavirus ಸೋಂಕಿತರಲ್ಲಿ ಒಟ್ಟು 259 ಮಂದಿ ತಬ್ಲಿಘಿ ಜಮಾತ್ ಗೆ ಸೇರಿದವರಾಗಿದ್ದಾರೆ'  title=

ನವದೆಹಲಿ: ನಿಜಾಮುದ್ದೀನ್ ಮರ್ಕಜ್ ನಿಂದ ಹೊರಬಂದ ಕೊರೊನಾ ವೈರಸ್ ಸೋಂಕಿತರ ಪೈಕಿ ಮೂರನೇ ವ್ಯಕ್ತಿ ಮೃತಪಟ್ಟಿದ್ದಾನೆ. ಇದರಿಂದ ರಾಷ್ಟ್ರರಾಜಧಾನಿಯಲ್ಲಿ ಈ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ತಲುಪಿದೆ. ಈ ಐವರಲ್ಲಿ ಮೂವರು ಸೊಂಕಿತರು ಮರ್ಕಜ್ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಒಟ್ಟು 91 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಮಾಹಿತಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೆಜ್ರಿವಾಲ್, ದೆಹಲಿಯಲ್ಲಿ ಪತ್ತೆಯಾಗಿರುವ ಒಟ್ಟು 386 ಸೋಂಕಿತರ ಪೈಕಿ 259 ಜನರು ತಬ್ಲಿಘಿ ಜಮಾತ್ ನವರಾಗಿದ್ದಾರೆ. ಮರ್ಕಜ್ ರೋಗಿಗಳ ಕಾರಣ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಆರು ಹೇಳಿದ್ದಾರೆ. ಆದರೆ, ಇನ್ನೊಂದೆಡೆ ದೆಹಲಿಯಲ್ಲಿ ಕೊರೊನಾ ವೈರಸ್ ನ ಕಮ್ಯೂನಿಟಿ ಹರಡುವಿಕೆ ಇನ್ನೂ ಆರಂಭವಾಗಿಲ್ಲ ಎಂಬುದು ಸಂತಸದ ವಿಷಯ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಸದ್ಯ ದೆಹಲಿಯಲ್ಲಿನ ಸ್ಥಿತಿ ಭಾರಿ ನಿಯಂತ್ರಣದಲ್ಲಿದ್ದು, ಜನರಿಗೆ ಇದೆ ರೀತಿ ಮುಂಜಾಗ್ರತೆ ವಹಿಸುವಂತೆ ಮನವಿ ಮಾಡಿದ್ದಾರೆ. ಸದ್ಯ ದೆಹಲಿಯಲ್ಲಿ ಕೋರೋನಾ ಸೋಂಕಿಗೆ ಒಳಗಾದ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ವೆಂಟಿಲೇಟರ್ ಮೇಲೆ ಇಡಲಾಗಿದ್ದು, ಭಯಪಡುವ ಯಾವುದೇ ಅಗತ್ಯತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ಕೇಂದ್ರ ಆರೋಗ್ಯ ಸಚಿವಾಲಯ ಕೂಡ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ್ದು, ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್ ನ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನರಲ್ಲಿ ಒಟ್ಟು 647 ಜನರಿಗೆ ಕೊರೊನಾ ವೈರಸ್ ಸೋಂಕು ಪಸರಿಸಿರುವುದು ಧೃಢಪಟ್ಟಿದ್ದು, ಈ ಜನರನ್ನು ದೇಶದ ಒಟ್ಟು 14 ರಾಜ್ಯಗಳಿಂದ ವಶಕ್ಕೆ ಪಡೆದು ಅವರ ಮೇಲೆ ಚಿಕಿತ್ಸೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಈ ಎಲ್ಲ 647 ಜನರನ್ನು ಅಸ್ಸಾಂ, ಅಂಡಮಾನ್ ನಿಕೊಬಾರ್, ದೆಹಲಿ, ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಹರ್ಯಾಣ, ಝಾರ್ಖಂಡ್, ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರಾಖಂಡ್ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ವಶಕ್ಕೆ ಪಡೆಯಲಾಗಿದೆ.

ಸದ್ಯ ದೇಶಾದ್ಯಂತ ಕೊರೊನಾ ವೈರಸ್ ನ ಒಟ್ಟು 2301 ಪ್ರಕರಣಗಳು ಬೆಳಕಿಗೆ ಬಂದಿದ್ದು, ಇವರಲ್ಲಿ 56 ಜನರು ಈ ಮಾರಕ ಕಾಯಿಲೆಗೆ ಅಸುನೀಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಸಂಯುಕ್ತ ಕಾರ್ಯದರ್ಶಿ ಲವ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ಈ ವೈರಸ್ ನ ಸೋಂಕಿನ ಕಾರಣ ಒಟ್ಟು 12 ಜನರು ಮೃತಪಟ್ಟಿದ್ದು, ಇವರೆಲ್ಲರೂ ತಬ್ಲಿಘಿ ಜಮಾತ್ ಮರ್ಕಜ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದು ಅವರು ಹೇಳಿದ್ದಾರೆ. ಇವರೆಲ್ಲರೂ ಕೂಡ ಕೊರೊನಾ ವೈರಸ್ ನ ಸರಣಿಯನ್ನು ಮುರಿಯಲು ವಿಧಿಸಲಾಗಿದ್ದ ಲಾಕ್ ಡೌನ್ ಅನ್ನು ಉಲ್ಲಂಘಿಸಿದ್ದಾರೆ. ಲಾಕ್ ಡೌನ್ ಉಲ್ಲಂಘಿಸಿದ ಇನ್ನೂ ಹಲವರು ಈ ಮಾರಕ ಕಾಯಿಲೆಯ ವಿರುದ್ಧ ಸಾವು-ನೋವಿನ ಹೋರಾಟ ನಡೆಸುತ್ತಿದ್ದಾರೆ ಎಂದಿದ್ದಾರೆ.

Trending News