Padma Awards 2022: ಕೇಂದ್ರ ಸರ್ಕಾರ (Central Government) 2022ನೇ ಸಾಲಿನ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಿದೆ. ಇದರಲ್ಲಿ ಸಿಡಿಎಸ್ ಬಿಪಿನ್ ರಾವತ್ (CDS Bipin Rawat) ಮತ್ತು ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಮರಣೋತ್ತರ ಪದ್ಮವಿಭೂಷಣ (Padma Vibhushan) ಪ್ರಶಸ್ತಿ ಲಭಿಸಲಿದೆ. ಇನ್ನೊಂದೆಡ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅವರಿಗೂ ಕೂಡ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.ಈ ಬಾರಿ ಒಟ್ಟು ನಾಲ್ವರಿಗೆ ಪದ್ಮ ವಿಭೂಷಣ 17 ಜನರಿಗೆ ಪದ್ಮಭೂಷಣ (Padma Bhushan) ಹಾಗೂ 107 ಮಂದಿಗೆ ಪದ್ಮಶ್ರೀ (Padma Shri) ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಇದರಲ್ಲಿ ಕರ್ನಾಟಕದ ಒಟ್ಟು ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.


ನಾಯಕತ್ವ ಬದಲಾವಣೆ ಇಲ್ಲ, ಪೂರ್ಣಾವಧಿಗೆ ಬೊಮ್ಮಾಯಿ ಸಿಎಂ: ನಳೀನ್ ಕುಮಾರ್ ಕಟೀಲ್


COMMERCIAL BREAK
SCROLL TO CONTINUE READING

ಒಲಂಪಿಯನ್ ನೀರಜ್ ಚೋಪ್ರಾ, ಪ್ರಮೋದ್ ಭಗತ್ ಮತ್ತು ವಂದನಾ ಕಟಾರಿಯಾ ಹಾಗೂ ಗಾಯಕ ಸೋನು ನಿಗಮ್ ಅವರಿಗೂ ಕೂಡ ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತಿದೆ.


ಇದನ್ನೂ ಓದಿ-SSLC Final Exam 2022 Time Table: ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ


ವಿಜ್ಞಾನ ಮತ್ತು ಇಂಜಿನೀರಿಂಗ್ ವಿಭಾಗದಲ್ಲಿ ಕರ್ನಾಟಕದ ಶ್ರೀ ಸುಬ್ಬಣ್ಣ ಅಯ್ಯಪ್ಪನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತಿದೆ. ಎಚ್. ಆರ್ ಕೇಶವಮೂರ್ತಿ ಅವರಿಗೆ ಕಲಾ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ಸಂದಿದರೆ, ಗ್ರಾಸ್ ರೂಟ್ ಇನ್ನೋವೆಶನ್ಸ್ ನ ಅಬ್ದುಲ್ ಖಾದರ್ ನಡಕಟ್ಟಿನ್ ಅವರಿಗೆ ಇತರೆ ವಿಭಾಗದಲ್ಲಿ, ಅಮಾಯಿ ಮಹಾಲಿಂಗ್ ನಾಯಿಕ್ ಅವರಿಗೆ ಕೃಷಿ ಕ್ಷೇತ್ರದ ಕೊಡುಗೆಗಾಗಿ ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತಿದೆ. ಸಾಹಿತಿ ಶ್ರೀ ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.


ಇದನ್ನೂ ಓದಿ- Aadhaar Cardಗೆ ಸಂಬಂಧಿಸಿದ ನಿಯಮಗಳಲ್ಲಿ ಭಾರಿ ಬದಲಾವಣೆ ಮಾಡಿದ UIDAI


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.