)
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಭದ್ರತಾ ಲೋಪಗಳು ಸಂಭವಿಸಿವೆ ಎಂದು ಕೇಂದ್ರ ಸರ್ಕಾರವು ಗುರುವಾರ ಮುಚ್ಚಿದ ಬಾಗಿಲಿನ ಸರ್ವಪಕ್ಷಗಳ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೇ ಟಿವಿ ವರದಿ ಮಾಡಿದೆ.
"ಯಾವುದೇ ತಪ್ಪು ಸಂಭವಿಸದಿದ್ದರೆ, ನಾವು ಇಲ್ಲಿ ನಾವೇಕೆ ಕುಳಿತುಕೊಳ್ಳುತ್ತಿದ್ದೆವು, ಎಲ್ಲೋ ಲೋಪಗಳಾಗಿವೆ, ಅದನ್ನು ಕಂಡುಹಿಡಿಯಬೇಕು," ಎಂದು ಆಡಳಿತ ಪಕ್ಷದ ನಾಯಕರೊಬ್ಬರು ಪ್ರತಿಪಕ್ಷದ ನಾಯಕರಿಗೆ ಸಭೆಯಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.
"Opposition has given full support to Govt to take any action": Rahul Gandhi after all-party meeting
Read @ANI Story | https://t.co/gjM1tb4qly#Opposition #RahulGandhi #AllPartyMeeting pic.twitter.com/aWVNFnBDd2
— ANI Digital (@ani_digital) April 24, 2025
ಈ ಭೀಕರ ದಾಳಿಯಲ್ಲಿ 26 ಜನರು, ಮುಖ್ಯವಾಗಿ ಪ್ರವಾಸಿಗರು, ಸಾವನ್ನಪ್ಪಿದ್ದು, ಇದು ರಾಜಕೀಯ ಮತ್ತು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಪ್ರತಿಪಕ್ಷದ ನಾಯಕರಿಗೆ ಮಾಹಿತಿ ನೀಡಲು ಈ ಸರ್ವಪಕ್ಷ ಸಭೆಯನ್ನು ಕರೆದಿತ್ತು.
ಸಭೆಯಲ್ಲಿ, ಹಲವು ಪ್ರತಿಪಕ್ಷಗಳು ಭದ್ರತಾ ಕ್ರಮಗಳ ವೈಫಲ್ಯದ ಬಗ್ಗೆ ಪ್ರಶ್ನಿಸಿವೆ. "ಭದ್ರತಾ ಪಡೆಗಳು ಎಲ್ಲಿದ್ದವು? ಕೇಂದ್ರೀಯ ಮೀಸಲು ಪೊಲೀಸ್ ಪಡೆ ಎಲ್ಲಿತ್ತು?" ಎಂದು ಹಲವು ನಾಯಕರು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಕ್ರಿಯೆಯಾಗಿ, ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಬೈಸರನ್ ಪ್ರದೇಶವನ್ನು ಸ್ಥಳೀಯ ಅಧಿಕಾರಿಗಳು ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡದೇ ತೆರೆದಿದ್ದರು ಎಂದು ಸರ್ಕಾರ ಹೇಳಿದೆ. ಈ ಪ್ರದೇಶವನ್ನು ಸಾಮಾನ್ಯವಾಗಿ ಜೂನ್ನಲ್ಲಿ ಅಮರನಾಥ ಯಾತ್ರೆಯವರೆಗೆ ನಿರ್ಬಂಧಿತವಾಗಿರುತ್ತದೆ.
ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಲ್ಲಿ ವಿಳಂಬವಾದ ಬಗ್ಗೆಯೂ ಕಳವಳ ವ್ಯಕ್ತವಾಗಿದೆ. ಸರ್ಕಾರಿ ಅಧಿಕಾರಿಗಳ ಪ್ರಕಾರ, ಘಟನಾ ಸ್ಥಳವು 45 ನಿಮಿಷಗಳ ಕಾಲ ಕಾಲ್ನಡಿಗೆಯ ದೂರದಲ್ಲಿದ್ದು, ಇಂತಹ ತುರ್ತು ಪರಿಸ್ಥಿತಿಗಳನ್ನು ತ್ವರಿತವಾಗಿ ನಿಭಾಯಿಸಲು ಯಾವುದೇ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಇರಲಿಲ್ಲ.
ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನ ಕರೆ
ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಚಿವ ಕಿರೆನ್ ರಿಜಿಜು, ಎಲ್ಲಾ ಪಕ್ಷಗಳು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಒಪ್ಪಿವೆ ಎಂದು ತಿಳಿಸಿದರು. "ಎಲ್ಲಾ ಪಕ್ಷಗಳು ಸರ್ಕಾರದ ಜೊತೆಗಿದೆ ಎಂದು ಹೇಳಿವೆ. ಸರ್ಕಾರ ಯಾವ ಕ್ರಮ ಕೈಗೊಂತಾದರೂ ನಾವು ಬೆಂಬಲಿಸುತ್ತೇವೆ ಎಂದು ಎಲ್ಲಾ ನಾಯಕರು ಒಕ್ಕೊರಲಿನಿಂದ ಹೇಳಿದ್ದಾರೆ ಎಂದು ರಿಜಿಜು ಹೇಳಿದರು.
ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ, ಪಹಲ್ಗಾಮ್ ದಾಳಿಯನ್ನು ಖಂಡಿಸಿ, ಸರ್ಕಾರಕ್ಕೆ ಯಾವುದೇ ಕ್ರಮ ಕೈಗೊಳ್ಳಲು ಪ್ರತಿಪಕ್ಷವು ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಿದ್ದರು. ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್. ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸದೀಯ ವ್ಯವಹಾರ ಸಚಿವ ಕಿರೆನ್ ರಿಜಿಜು ಸೇರಿದಂತೆ ಉನ್ನತ ಸಚಿವರು ಸರ್ಕಾರವನ್ನು ಪ್ರತಿನಿಧಿಸಿದ್ದರು.
ರಾಜ್ಯಸಭೆಯಲ್ಲಿ ಆಡಳಿತ ಪಕ್ಷದ ನಾಯಕ ಜೆಪಿ ನಡ್ಡಾ, ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಜೊತೆಗೆ ಸುಪ್ರಿಯಾ ಸುಳೆ (ಎನ್ಸಿಪಿ-ಎಸ್ಪಿ), ಪ್ರಫುಲ್ ಪಟೇಲ್ (ಎನ್ಸಿಪಿ), ಅಸಾದುದ್ದೀನ್ ಒವೈಸಿ (ಎಐಎಂಐಎಂ), ಸಸ್ಮಿತ್ ಪಾತ್ರ (ಬಿಜೆಡಿ), ಶಿವಸೇನಾದ ಶ್ರೀಕಾಂತ್ ಶಿಂದೆ, ಆಪ್ನ ಸಂಜಯ್ ಸಿಂಗ್, ಟಿಎಂಸಿಯ ಸುದೀಪ್ ಬಂದ್ಯೋಪಾಧ್ಯಾಯ, ಆರ್ಜೆಡಿಯ ಪ್ರೇಮಚಂದ್ ಗುಪ್ತಾ, ಡಿಎಂಕೆಯ ಟಿ. ಶಿವ ಮತ್ತು ಎಸ್ಪಿಯ ರಾಮ್ ಗೋಪಾಲ್ ಯಾದವ್ ಸಭೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.