ಗಡಿದಾಟಿ ಭಾರತದ ಒಳಗೆ ಬಂದ "ಪಾಕ್‌ ಸೈನಿಕ".. ಬಾರ್ಡರ್‌ನಲ್ಲಿ ಉದ್ವಿಗ್ನತೆ..! ಸೇನೆ ಹೈ ಅಲರ್ಟ್‌ 

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಗಡಿ ದಾಟಿ ಬಂದ ಪಾಕಿಸ್ತಾನಿ ಸೈನಿಕನನ್ನು ಭದ್ರತಾ ಪಡೆಗಳು ಬಂಧಿಸಿವೆ. ಕಳೆದ ವಾರ ಭಾರತೀಯ ಸೈನಿಕನೊಬ್ಬ ಗಡಿ ದಾಟಿ ಸಿಕ್ಕಿಬಿದ್ದ ನಂತರ ಈ ಘಟನೆ ನಡೆದಿತ್ತು.. ಹೆಚ್ಚಿನ ಮಾಹಿತಿ ಇಲ್ಲಿದೆ..

Written by - Krishna N K | Last Updated : May 4, 2025, 08:20 PM IST
    • ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದೆ.
    • ರಾಜಸ್ಥಾನ ಗಡಿಯಲ್ಲಿ ಪಾಕಿಸ್ತಾನಿ ಸೈನಿಕನನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದೆ
    • ಗಡಿ ಭದ್ರತಾ ಪಡೆ (BSF) ಪಾಕಿಸ್ತಾನಿ ಸೈನಿಕನನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ.
ಗಡಿದಾಟಿ ಭಾರತದ ಒಳಗೆ ಬಂದ "ಪಾಕ್‌ ಸೈನಿಕ".. ಬಾರ್ಡರ್‌ನಲ್ಲಿ ಉದ್ವಿಗ್ನತೆ..! ಸೇನೆ ಹೈ ಅಲರ್ಟ್‌ 

ರಾಜಸ್ಥಾನ : ಗಡಿಯಲ್ಲಿ ಪಾಕಿಸ್ತಾನಿ ಸೈನಿಕನನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ. ಬಂಧಿತ ಪಾಕಿಸ್ತಾನಿ ಸೈನಿಕನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ಗಡಿ ಭದ್ರತಾ ಪಡೆ (BSF) ಪಾಕಿಸ್ತಾನಿ ಸೈನಿಕನನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. 

Add Zee News as a Preferred Source

ಏಪ್ರಿಲ್ 22, 2025 ರಂದು, ಜಮ್ಮು ಮತ್ತು ಕಾಶ್ಮೀರದ ಜನಪ್ರಿಯ ಪ್ರವಾಸಿ ತಾಣವಾದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ಮಾಡಿದರು. ಈ ದಾಳಿಯಲ್ಲಿ 26 ಅಮಾಯಕರು ಸಾವನ್ನಪ್ಪಿದ್ದರು. ಈ ಕ್ರೂರ ದಾಳಿಯು ಭಾರತ ಸೇರಿದಂತೆ ವಿಶ್ವದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ದೇಶದಲ್ಲಿ ಏನೋ ಸಂಭವಿಸಲಿದೆ...! ನೌಕಾಪಡೆಯ ಮುಖ್ಯಸ್ಥರ ನಂತರ, ಈಗ ವಾಯುಪಡೆಯ ಮುಖ್ಯಸ್ಥರೊಂದಿಗೆ ಪಿಎಂ ಮಹತ್ವದ ಸಭೆ

ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಸಂಘಟನೆ ಭಾಗ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಈ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂದು ಭಾರತ ಆರೋಪಿಸುತ್ತಲೇ ಬಂದಿದೆ. ಇದರ ಜೊತೆಗೆ, ಪಾಕಿಸ್ತಾನದ ವಿರುದ್ಧ ಗಟ್ಟಿ ನಿರ್ಧಾರವನ್ನು ಭಾರತ ಸರ್ಕಾರ ಕೈಗೊಂಡಿದೆ. ಇದರಿಂದಾಗಿ ಎರಡೂ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ವಿರುದ್ಧ ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಭಾರತ ಭರವಸೆ ನೀಡಿದೆ. ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವಲ್ಲಿ ಭಾರತಕ್ಕೆ ವಿಶ್ವದಾದ್ಯಂತದ ಹಲವಾರು ದೇಶಗಳು ಬೆಂಬಲ ವ್ಯಕ್ತಪಡಿಸಿವೆ. ಪರಿಣಾಮವಾಗಿ, ಎರಡೂ ದೇಶಗಳು ಸೇನಾ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿವೆ. ಯಾವುದೇ ಸಮಯದಲ್ಲಿ ಯುದ್ಧ ನಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ:ಅಟ್ಟಾರಿ ಗಡಿಯ ಬಳಿಯ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ..! ಗ್ರಾಮಸ್ಥರಿಂದ ಆಘಾತಕಾರಿ ಹೇಳಿಕೆ

ಇದರ ನಡುವೆ ನಿನ್ನೆ, ಮೇ 3, 2025 ರಂದು, ಪಾಕಿಸ್ತಾನವು ಕ್ಷಿಪಣಿ ಪರೀಕ್ಷೆ ನಡೆಸಿತು... ಪಾಕ್‌ 420 ಕಿಲೋಮೀಟರ್ ವ್ಯಾಪ್ತಿಯ ಕ್ಷಿಪಣಿಯನ್ನು ಪರೀಕ್ಷಿಸಿತು. ಇದು ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅದೇ ಸಮಯದಲ್ಲಿ, ಎರಡೂ ದೇಶಗಳ ನಡುವಿನ ಗಡಿಯಲ್ಲಿ ಸೈನಿಕರನ್ನು ಜಮಾಯಿಸಲಾಗಿದೆ.

ಈ ಪರಿಸ್ಥಿತಿಯ ನಡುವೆ ರಾಜಸ್ಥಾನ ಗಡಿದಾಟಿ ಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ ಪಾಕಿಸ್ತಾನಿ ಸೈನಿಕನನ್ನು ಬಂಧಿಸಿ, ಆರ್ಮಿ ತನಿಖೆ ನಡೆಸುತ್ತಿದೆ. ಇದಕ್ಕೂ ಮೊದಲು, ಕಳೆದ ವಾರ ಆಕಸ್ಮಿಕವಾಗಿ ಪಾಕಿಸ್ತಾನದ ಗಡಿ ದಾಟಿದ್ದಕ್ಕಾಗಿ ಪಾಕಿಸ್ತಾನವು ಬಿಎಸ್‌ಎಫ್ ಸೈನಿಕನನ್ನು ಬಂಧಿಸಿತ್ತು.

ಬಂಧಿತ ಬಿಎಸ್‌ಎಫ್‌ ಯೋಧನನ್ನು ಪೂರ್ಣಂ ಕುಮಾರ್ ಎಂದು ಗುರುತಿಸಲಾಗಿದೆ. ಅವರ ಬಿಡುಗಡೆಗೆ ಸಂಬಂಧಿಸಿದಂತೆ ಭಾರತ ಹಲವಾರು ಮಾತುಕತೆಗಳನ್ನು ನಡೆಸಿದೆ. ಆದರೆ ಪಾಕಿಸ್ತಾನ ಸೈನಿಕನನ್ನು ಬಿಡುಗಡೆ ಮಾಡಲಿಲ್ಲ. ಈ ಸಂದರ್ಭದಲ್ಲಿ ಗಡಿ ಭದ್ರತಾ ಪಡೆ ಸಿಬ್ಬಂದಿ ಪಾಕಿಸ್ತಾನಿ ಸೈನಿಕನನ್ನು ಬಂಧಿಸಿದ್ದು, ಗಮನಾರ್ಹ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News