ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಮತ್ತು ಸುಂದರ್‌ಬಾನಿ ಪ್ರದೇಶಗಳಲ್ಲಿ ಭಾನುವಾರ ಬೆಳಿಗ್ಗೆ ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿದೆ, ಆದರೆ ಇದಕ್ಕೆ ಭಾರತೀಯ ಸೇನೆಯ ತಕ್ಕ ಉತ್ತರ ನೀಡಿದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಪಾಕಿಸ್ತಾನದ ಪಡೆಗಳು ಬೆಳಿಗ್ಗೆ 10:00 ರಿಂದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಶಸ್ತ್ರಾಸ್ತ್ರ ಮತ್ತು ಗಾರೆ ಶೆಲ್ ದಾಳಿ ನಡೆಸಿದವು. ಈಗ ಭಾರತ ಮತ್ತು ಪಾಕಿಸ್ತಾನ ನಡುವೆ ಭಾರೀ ಪ್ರಮಾಣದ ಗುಂಡಿನ ಚಕಮಕಿ ನಡೆಯುತ್ತಿದೆ.


ಸೆಪ್ಟೆಂಬರ್ 2 ರ ನಂತರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿತು, ಇದರಲ್ಲಿ ಕಣಿವೆಯಲ್ಲಿ ಶಾಂತಿಯನ್ನು ಭಂಗಗೊಳಿಸುವ ಪಾಕಿಸ್ತಾನದ ದುಷ್ಕೃತ್ಯದ ಪ್ರಯತ್ನಗಳ ವಿರುದ್ಧ ಸೈನಿಕರೊಬ್ಬರು ಹುತಾತ್ಮರಾಗಿದ್ದರು. ಈ ಸೈನಿಕನನ್ನು 23 ವರ್ಷದ ಗ್ರೆನೇಡಿಯರ್ ಹೆಮರಾಜ್ ಜಾಟ್ ಎಂದು ಗುರುತಿಸಲಾಗಿದೆ. ರಾಜಸ್ಥಾನದ ಅಲ್ವಾರ್‌ನ ರೂಪಂಗಡ ತಹಸಿಲ್‌ನ ಭಡೂನ್ ಗ್ರಾಮದ ನಿವಾಸಿಯಾಗಿದ್ದರು. ಮಾರ್ಚ್ 2017 ರಂದು ಸೈನ್ಯಕ್ಕೆ ಸೇರಿದ್ದರು.


ಇದಕ್ಕೂ ಮುನ್ನ ಶನಿವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್  ಗಡಿಯಲ್ಲಿ 20 ಕಿ.ಮೀ ದೂರದಲ್ಲಿರುವ ಪಾಕಿಸ್ತಾನಿ ಸಂವಹನ ಗೋಪುರಗಳಿವೆ, ಅವರು ಸಂದೇಶಗಳನ್ನು ಕಳುಹಿಸುತ್ತಿರುವ ಎಂದು ಮಾಹಿತಿ ನೀಡಿದರು.ಅಲ್ಲದೆ ಪಾಕಿಸ್ತಾನದ ಯಾವುದೇ ಒಳನುಸುಳುವಿಕೆ ಪ್ರಯತ್ನಗಳ ವಿರುದ್ಧ ಹೋರಾಡಲು ಸೈನ್ಯವು ಸಿದ್ಧವಾಗಿದೆ ಎಂದು ಅವರು ಹೇಳಿದರು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ರದ್ದುಗೊಳಿದ ಸರ್ಕಾರದ ಕ್ರಮವನ್ನು ಬಹುತೇಕ ಕಾಶ್ಮಿರೈಗಳು ಬೆಂಬಲಿಸಿದ್ದಾರೆ  ಎಂದು ಅವರು ತಿಳಿಸಿದ್ದರು.