ಕಣಿವೆ ರಾಜ್ಯದ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ಮಾಡಲು ಉಗ್ರರಿಗೆ ಪಾಕ್ ISI ಆದೇಶ!

ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಲು ಕಾಶ್ಮೀರ ಕಣಿವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಗುಂಪುಗಳಿಗೆ ಐಎಸ್‌ಐ ಆದೇಶ ನೀಡಿದೆ. ಭಯೋತ್ಪಾದಕರು ಮತ್ತು ಅವರ ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳ ನಡುವಿನ ಸಂದೇಶಗಳನ್ನು ಟ್ಯಾಪ್ ಮಾಡಿದ ನಂತರ ಅದರ ದುಷ್ಕೃತ್ಯದ ಯೋಜನೆ ಬಹಿರಂಗಗೊಂಡಿದೆ ಎಂದು ಮೂಲಗಳು ತಿಳಿಸಿವೆ.

Last Updated : Sep 5, 2019, 07:40 AM IST
ಕಣಿವೆ ರಾಜ್ಯದ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ಮಾಡಲು ಉಗ್ರರಿಗೆ ಪಾಕ್ ISI ಆದೇಶ! title=
Pic courtesy: Reuters

ಶ್ರೀನಗರ: ಪಾಕಿಸ್ತಾನದ ಗೂಢಚಾರ ಸಂಸ್ಥೆ ಐಎಸ್‌ಐ ಈ ಪ್ರದೇಶದ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ಮಾಡಲು ಭಯೋತ್ಪಾದಕರಿಗೆ ಆದೇಶ ನೀಡುವ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ಕೋಮು ಉದ್ವೇಗವನ್ನು ಸೃಷ್ಟಿಸಲು ಯೋಜಿಸುತ್ತಿದೆ ಎಂದು ಗುಪ್ತಚರ ಸಂಸ್ಥೆಗಳ ಮೂಲಗಳು ಜೀ ಮೀಡಿಯಾಕ್ಕೆ ತಿಳಿಸಿವೆ. ಕಾಶ್ಮೀರ ಕಣಿವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಗುಂಪುಗಳಿಗೆ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಲು ಐಎಸ್‌ಐ ಆದೇಶಿಸಿದೆ. ಭಯೋತ್ಪಾದಕರು ಮತ್ತು ಅವರ ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳ ನಡುವಿನ ಸಂದೇಶಗಳನ್ನು ತಡೆದ ನಂತರ ಐಎಸ್‌ಐನ ದುಷ್ಕೃತ್ಯದ ಯೋಜನೆ ಬಹಿರಂಗಗೊಂಡಿದೆ  ಎಂದು ಹೇಳಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕಾಶ್ಮೀರದಲ್ಲಿ ಬೀಡುಬಿಟ್ಟಿರುವ ಭಾರತೀಯ ಭದ್ರತಾ ಪಡೆಗಳ ವಿರುದ್ಧ ಕಾಶ್ಮೀರ ಕಣಿವೆಯಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುವುದು ಮತ್ತು ಪ್ರದೇಶದ ಜನರನ್ನು ಪ್ರಚೋದಿಸುವುದು ಐಎಸ್‌ಐ ಮುಖ್ಯ ಉದ್ದೇಶವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯನ್ನು ಭಂಗಗೊಳಿಸುವ ಸಲುವಾಗಿ ಪಾಕಿಸ್ತಾನವು ಭಾರತದೊಳಗೆ ಗರಿಷ್ಠ ಭಯೋತ್ಪಾದಕರನ್ನು ಒಳನುಸುಳಲು ತೀವ್ರವಾಗಿ ಪ್ರಯತ್ನಿಸುತ್ತಿದೆ ಎಂದು ಭಾರತೀಯ ಸೇನೆಯು ಬುಧವಾರ ಹೇಳಿದೆ.

ಶ್ರೀನಗರ, ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲಾನ್, ಎಲ್ಲಾ ಉಡಾವಣಾ ಪ್ಯಾಡ್‌ಗಳು ಈಗ ಪೂರ್ಣಗೊಂಡಿವೆ. ನೆರೆ ರಾಷ್ಟ್ರ ಪಾಕಿಸ್ತಾನದಿಂದ ಪ್ರತಿದಿನವೂ ಒಳನುಸುಳುವಿಕೆ ಪ್ರಯತ್ನಗಳು ನಡೆಯುತ್ತಿವೆ. ಪಾಕಿಸ್ತಾನ ಸೇನೆಯ ಸಹಾಯದಿಂದ ಗಡಿಯ ಉದ್ದಗಲಕ್ಕೂ ಉಗ್ರರ ಒಳನುಗ್ಗುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

"ಪಾಕಿಸ್ತಾನದ ಸೈನ್ಯದ ಸಹಾಯದಿಂದ ಹಗಲು ರಾತ್ರಿ ಒಳನುಗ್ಗುವ ಪ್ರಯತ್ನಗಳು ನಡೆಯುತ್ತಿವೆ. ರಾಜೌರಿಯ ಪೂಂಚ್‌ನಲ್ಲೂ ಒಳನುಸುಳುವಿಕೆ ಪ್ರಯತ್ನಗಳು ನಡೆದಿವೆ. ಈ ಪ್ರಯತ್ನಗಳಿಗೆ ಸೇನೆಯು ಸೂಕ್ತ ಉತ್ತರವನ್ನು ನೀಡಿದೆ. ಸೆರೆಹಿಡಿದ ಭಯೋತ್ಪಾದಕರ ಬಗ್ಗೆ ನಾವು ಡಿಜಿಎಂಒ ಪಾಕಿಸ್ತಾನಕ್ಕೂ ಮಾಹಿತಿ ನೀಡಿದ್ದೇವೆ" ಎಂದು ಅವರು ತಿಳಿಸಿದರು.
 

Trending News