ಜುಲೈ 20 ರಿಂದ ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭ, ಚರ್ಚೆಗೆ ಬರಲಿದೆ ಏಕರೂಪ ನಾಗರೀಕ ಸಂಹಿತೆ..!

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಆರಂಭಗೊಂಡು ಆಗಸ್ಟ್ 11 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ತಿಳಿಸಿದ್ದಾರೆ. 

Written by - Manjunath N | Last Updated : Jul 1, 2023, 04:50 PM IST
  • 'ಸಂಸತ್ತಿನ ಮುಂಗಾರು ಅಧಿವೇಶನ, 2023, ಜುಲೈ 20 ರಿಂದ ಪ್ರಾರಂಭವಾಗುತ್ತದೆ ಮತ್ತು ಆಗಸ್ಟ್ 11 ರವರೆಗೆ ಮುಂದುವರಿಯುತ್ತದೆ.
  • ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಬಗ್ಗೆ ಉತ್ಪಾದಕ ಚರ್ಚೆಗಳಿಗೆ ಕೊಡುಗೆ ನೀಡಲು ಎಲ್ಲಾ ಪಕ್ಷಗಳನ್ನು ಆಗ್ರಹಿಸುವುದಾಗಿ ಜೋಶಿ ಟ್ವೀಟ್ ಮಾಡಿದ್ದಾರೆ.
  • ಅಧಿವೇಶನವು 23 ದಿನಗಳ ಕಾಲ ನಡೆಯಲಿದ್ದು ಮತ್ತು 17 ಸಭೆಗಳನ್ನು ಹೊಂದಿರುತ್ತದೆ
ಜುಲೈ 20 ರಿಂದ ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭ, ಚರ್ಚೆಗೆ ಬರಲಿದೆ ಏಕರೂಪ ನಾಗರೀಕ ಸಂಹಿತೆ..! title=

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಆರಂಭಗೊಂಡು ಆಗಸ್ಟ್ 11 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ತಿಳಿಸಿದ್ದಾರೆ. 

ಅಧಿವೇಶನದಲ್ಲಿ ಉತ್ಪಾದಕ ಚರ್ಚೆಗಳಿಗೆ ಕೊಡುಗೆ ನೀಡುವಂತೆ ರಾಜಕೀಯ ಪಕ್ಷಗಳನ್ನು ಅವರು ಒತ್ತಾಯಿಸಿದರು.ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಕಣಕ್ಕಿಳಿಯಲು ವಿರೋಧ ಪಕ್ಷಗಳು ಕಸರತ್ತು ನಡೆಸುತ್ತಿರುವುದರಿಂದ ಅಧಿವೇಶನ ಬಿರುಸಿನಿಂದ ಕೂಡಿರುವ ನಿರೀಕ್ಷೆಯಿದೆ.ಇದೇ ವೇಳೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಆಡಳಿತ ಪಕ್ಷ ಬಿಜೆಪಿ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿನ ಚರ್ಚೆಗಳು ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಾಂಗ್ರೆಸ್’ನಿಂದ ಬಿಜೆಪಿಗೆ ವಲಸೆ ಬಂದವರ ವಿರುದ್ಧ ಒಂದು ಪದವನ್ನೂ ಬಳಸಿಲ್ಲ: ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ

ಮುಂಗಾರು ಅಧಿವೇಶನ ಹಳೆಯ ಸಂಸತ್ ಭವನದಲ್ಲಿ ಆರಂಭಗೊಂಡು ನಂತರ ಹೊಸ ಕಟ್ಟಡಕ್ಕೆ ತೆರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. 

'ಸಂಸತ್ತಿನ ಮುಂಗಾರು ಅಧಿವೇಶನ, 2023, ಜುಲೈ 20 ರಿಂದ ಪ್ರಾರಂಭವಾಗುತ್ತದೆ ಮತ್ತು ಆಗಸ್ಟ್ 11 ರವರೆಗೆ ಮುಂದುವರಿಯುತ್ತದೆ. ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಬಗ್ಗೆ ಉತ್ಪಾದಕ ಚರ್ಚೆಗಳಿಗೆ ಕೊಡುಗೆ ನೀಡಲು ಎಲ್ಲಾ ಪಕ್ಷಗಳನ್ನು ಆಗ್ರಹಿಸುವುದಾಗಿ"ಜೋಶಿ ಟ್ವೀಟ್ ಮಾಡಿದ್ದಾರೆ.ಅಧಿವೇಶನವು 23 ದಿನಗಳ ಕಾಲ ನಡೆಯಲಿದ್ದು ಮತ್ತು 17 ಸಭೆಗಳನ್ನು ಹೊಂದಿರುತ್ತದೆ ಎಂದು ಅವರು ಹಿಂದಿಯಲ್ಲಿ ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಅಧಿವೇಶನದಲ್ಲಿ, ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಸುಗ್ರೀವಾಜ್ಞೆಗೆ ಬದಲಿಯಾಗಿ ಸರ್ಕಾರವು ಮಸೂದೆಯನ್ನು ತರುವ ಸಾಧ್ಯತೆಯಿದೆ.ಸುಗ್ರೀವಾಜ್ಞೆಯು ಸುಪ್ರೀಂ ಕೋರ್ಟ್ ತೀರ್ಪನ್ನು ಪರಿಣಾಮಕಾರಿಯಾಗಿ ರದ್ದುಗೊಳಿಸಿತು, ಅದು ದೆಹಲಿ ಸರ್ಕಾರಕ್ಕೆ ಸೇವೆಗಳ ವಿಷಯದ ಮೇಲೆ ಹೆಚ್ಚಿನ ಶಾಸಕಾಂಗ ಮತ್ತು ಆಡಳಿತಾತ್ಮಕ ನಿಯಂತ್ರಣವನ್ನು ನೀಡಿತು.

ಇದನ್ನೂ ಓದಿ: ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಕುಸಿತ: ರೈತರಲ್ಲಿ ಮೂಡಿದ ಆತಂಕ

ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆಗೊಂಡಿರುವ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಮಸೂದೆಯನ್ನು ಸಹ ಮಂಡಿಸುವ ಸಾಧ್ಯತೆ ಇದೆ.ಪ್ರಸ್ತಾವಿತ ಪ್ರತಿಷ್ಠಾನವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದೇಶದ ಸಂಶೋಧನಾ ಸಾಮರ್ಥ್ಯವನ್ನು ಹೆಚ್ಚಿಸಲು ಹೊಸ ನಿಧಿಸಂಸ್ಥೆಯಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News