ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಆರಂಭಗೊಂಡು ಆಗಸ್ಟ್ 11 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಅಧಿವೇಶನದಲ್ಲಿ ಉತ್ಪಾದಕ ಚರ್ಚೆಗಳಿಗೆ ಕೊಡುಗೆ ನೀಡುವಂತೆ ರಾಜಕೀಯ ಪಕ್ಷಗಳನ್ನು ಅವರು ಒತ್ತಾಯಿಸಿದರು.ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಕಣಕ್ಕಿಳಿಯಲು ವಿರೋಧ ಪಕ್ಷಗಳು ಕಸರತ್ತು ನಡೆಸುತ್ತಿರುವುದರಿಂದ ಅಧಿವೇಶನ ಬಿರುಸಿನಿಂದ ಕೂಡಿರುವ ನಿರೀಕ್ಷೆಯಿದೆ.ಇದೇ ವೇಳೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಆಡಳಿತ ಪಕ್ಷ ಬಿಜೆಪಿ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿನ ಚರ್ಚೆಗಳು ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ.


ಇದನ್ನೂ ಓದಿ: ಕಾಂಗ್ರೆಸ್’ನಿಂದ ಬಿಜೆಪಿಗೆ ವಲಸೆ ಬಂದವರ ವಿರುದ್ಧ ಒಂದು ಪದವನ್ನೂ ಬಳಸಿಲ್ಲ: ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ


ಮುಂಗಾರು ಅಧಿವೇಶನ ಹಳೆಯ ಸಂಸತ್ ಭವನದಲ್ಲಿ ಆರಂಭಗೊಂಡು ನಂತರ ಹೊಸ ಕಟ್ಟಡಕ್ಕೆ ತೆರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. 


ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಕುಸಿತ: ರೈತರಲ್ಲಿ ಮೂಡಿದ ಆತಂಕ


ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆಗೊಂಡಿರುವ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಮಸೂದೆಯನ್ನು ಸಹ ಮಂಡಿಸುವ ಸಾಧ್ಯತೆ ಇದೆ.ಪ್ರಸ್ತಾವಿತ ಪ್ರತಿಷ್ಠಾನವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದೇಶದ ಸಂಶೋಧನಾ ಸಾಮರ್ಥ್ಯವನ್ನು ಹೆಚ್ಚಿಸಲು ಹೊಸ ನಿಧಿಸಂಸ್ಥೆಯಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.