PM Awas Yojana ಯ ಸಮಸ್ಯೆಗಳ ಬಗ್ಗೆ ದೂರು ಸಲ್ಲಿಸುವುದು ಹೇಗೆ ಗೊತ್ತಾ? ಇಲ್ಲಿದೆ ಸಂಪೂರ್ಣ ಡಿಟೈಲ್ಸ್ 

ಪ್ರತಿ ಗ್ರಾಮ ಪಂಚಾಯಿತಿ, ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಕುಂದುಕೊರತೆ ಪರಿಹಾರ ವ್ಯವಸ್ಥೆಗೆ ಅವಕಾಶವಿದೆ. ದೂರು ಸ್ವೀಕರಿಸಿದ ದಿನಾಂಕದಿಂದ 45 ದಿನಗಳ ಅವಧಿಯಲ್ಲಿ ಪ್ರತಿ ಹಂತದಲ್ಲಿ ದೂರುಗಳನ್ನು ವಿಲೇವಾರಿ ಮಾಡಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ, ನೀವು ನಿಮ್ಮ ಸ್ಥಳೀಯ ವಸತಿ ಸಹಾಯಕ ಅಥವಾ ಬ್ಲಾಕ್ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಬಹುದು.

Written by - Channabasava A Kashinakunti | Last Updated : Sep 15, 2021, 04:05 PM IST
  • 2022 ರ ವೇಳೆಗೆ ಎಲ್ಲರಿಗೂ ಮನೆ ಒದಗಿಸುವ ಗುರಿ
  • ಪಿಎಂ ಹೌಸಿಂಗ್‌ಗೆ ಸಂಬಂಧಿಸಿದಂತೆ ನೀವು ಹೇಗೆ ದೂರು ನೀಡಬಹುದು?
  • 45 ದಿನಗಳಲ್ಲಿ ದೂರು ಇತ್ಯರ್ಥಪಡಿಸಲು ಅವಕಾಶವಿದೆ
PM Awas Yojana ಯ ಸಮಸ್ಯೆಗಳ ಬಗ್ಗೆ ದೂರು ಸಲ್ಲಿಸುವುದು ಹೇಗೆ ಗೊತ್ತಾ? ಇಲ್ಲಿದೆ ಸಂಪೂರ್ಣ ಡಿಟೈಲ್ಸ್  title=

ನವದೆಹಲಿ : ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ಮನೆಯಿಲ್ಲದ ಜನರಿಗೆ ಮನೆಗಳನ್ನು ನೀಡಲಾಗುತ್ತದೆ, ಆದರೆ ಅನೇಕ ಬಾರಿ ಜನರಿಗೆ ಇದರ ಬಗ್ಗೆ ವಿವಿಧ ದೂರುಗಳಿವೆ, ಆದರೆ ಈ ಸಮಸ್ಯೆಗಳ ಬಗ್ಗೆ ಯಾರಲ್ಲಿ ದೂರು(Complaint) ನೀಡಬೇಕು ಎಂಬುವುದಿಲ್ಲ ಗೊತ್ತಿಲ್ಲ. ಸಂಬಂಧಪಟ್ಟ ವ್ಯಕ್ತಿ ಯಾರು, ಅವರ ಸಮಸ್ಯೆಗಳನ್ನು ಯಾರು ಪರಿಹರಿಸುತ್ತಾರೆ. ಈ ಕೆಳಗಿದೆ ಸಂಪೂರ್ಣ ಡಿಟೈಲ್ಸ್... 

2022 ರ ವೇಳೆಗೆ ಎಲ್ಲರಿಗೂ ಮನೆ ಒದಗಿಸುವ ಗುರಿ

ವಾಸ್ತವವಾಗಿ, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮನೆಗಳನ್ನು ಒದಗಿಸಲು 2015 ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ(PM Awas Yojana)ಯನ್ನು ಆರಂಭಿಸಲಾಯಿತು. 2022 ರ ವೇಳೆಗೆ ಪ್ರತಿಯೊಬ್ಬ ವ್ಯಕ್ತಿಯು ತನ್ನ ಸ್ವಂತ ಮನೆ ಒದಗಿಸುವುದು ಇದರ ಗುರಿಯಾಗಿದೆ. ಕೊಳೆಗೇರಿ, ಕಚ್ಚಾ ಮನೆಗಳಲ್ಲಿ ವಾಸಿಸುವ ಜನರಿಗೆ ಸರ್ಕಾರ ವಸತಿ ಒದಗಿಸುತ್ತದೆ. ಅಲ್ಲದೆ, ಸಾಲ, ಮನೆ ಅಥವಾ ಫ್ಲಾಟ್‌ಗಳನ್ನು ಖರೀದಿಸುವ ಜನರಿಗೆ ಸರ್ಕಾರ ಸಬ್ಸಿಡಿ ನೀಡುತ್ತದೆ.

ಇದನ್ನೂ ಓದಿ : ನೀವೂ ಕೆಲಸ ಕಳೆದುಕೊಂಡಿದ್ದೀರಾ ? ಹಾಗಿದ್ದರೆ ನಿರುದ್ಯೋಗ ಭತ್ಯೆಗಾಗಿ ಇಲ್ಲಿ ನೋಂದಾಯಿಸಿಕೊಳ್ಳಿ

ಇಲ್ಲಿಗೆ ದೂರು ನೀಡಿ

ಈ ಯೋಜನೆಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದರೆ, ಅದನ್ನು ಪರಿಹರಿಸಲು ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ(Gram Panchayat), ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಕುಂದುಕೊರತೆ ಪರಿಹಾರ ವ್ಯವಸ್ಥೆಗೆ ಅವಕಾಶವಿದೆ. ದೂರು ಸ್ವೀಕರಿಸಿದ ದಿನಾಂಕದಿಂದ 45 ದಿನಗಳ ಅವಧಿಯಲ್ಲಿ ಪ್ರತಿ ಹಂತದಲ್ಲಿ ದೂರುಗಳನ್ನು ವಿಲೇವಾರಿ ಮಾಡಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ, ನೀವು ನಿಮ್ಮ ಸ್ಥಳೀಯ ವಸತಿ ಸಹಾಯಕ ಅಥವಾ ಬ್ಲಾಕ್ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಬಹುದು.

ಈ ರೀತಿ  ಅರ್ಜಿ ಸಲ್ಲಿಸಿ

ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅಡಿಯಲ್ಲಿ ಅರ್ಜಿ ಸಲ್ಲಿಸಲು ಸರ್ಕಾರ ವಸತಿ ಅಪ್ಲಿಕೇಶನ್ ಅನ್ನು ರಚಿಸಿದೆ. ಪ್ಲೇ ಸ್ಟೋರ್‌(Play Store)ನಿಂದ ಡೌನ್‌ಲೋಡ್ ಮಾಡಿದ ನಂತರ ನೀವು ಲಾಗಿನ್ ಐಡಿಯನ್ನು ರಚಿಸಬೇಕು. ಈ ಐಡಿಯನ್ನು ನಿಮ್ಮ ಮೊಬೈಲ್ ಸಂಖ್ಯೆಯಿಂದ ಜನರೇಟ್ ಮಾಡಲಾಗುತ್ತದೆ. ಸಂಖ್ಯೆಗೆ ಒಟಿಪಿ ಬರುತ್ತದೆ. ನೀವು ಅದನ್ನು ಭರ್ತಿ ಮಾಡಿ ಅಗತ್ಯ ಮಾಹಿತಿ ನೀಡಬೇಕು.

ಇದನ್ನೂ ಓದಿ : ಕಾರಿನ ಮೇಲೆರಗಿ ಬಂತು ಬಸ್ , ನೋಡ ನೋಡುತ್ತಿದ್ದಂತೆಯೇ ಐದು ಜನ ಸಜೀವ ದಹನ

ಯೋಜನೆಗೆ ಅರ್ಜಿ ಬಂದ ನಂತರ, ಕೇಂದ್ರ ಸರ್ಕಾರ(Central government)ವು ಫಲಾನುಭವಿಗಳನ್ನು ಆಯ್ಕೆ ಮಾಡುತ್ತದೆ. ಇದರ ನಂತರ ಫಲಾನುಭವಿಗಳ ಅಂತಿಮ ಪಟ್ಟಿಯನ್ನು PMAYG ವೆಬ್‌ಸೈಟ್‌ನಲ್ಲಿ ಹಾಕಲಾಗುತ್ತದೆ. ಅದೇ ಸಮಯದಲ್ಲಿ, ಪಕ್ಕಾ ಮನೆಗಳ ನಿರ್ಮಾಣಕ್ಕೆ ಹಣವನ್ನು ಒದಗಿಸುವುದರ ಜೊತೆಗೆ, ಸರ್ಕಾರವು ಹಳೆಯ ಮನೆಯನ್ನು ದುರಸ್ತಿ ಮಾಡಲು ಸಹಾಯ ಮಾಡುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News