ನವದೆಹಲಿ : ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8ನೇ ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಅನೇಕ ರೈತರು(Farmers) ಈ ಯೋಜನೆಗೆ ತಮ್ಮನ್ನು ನೋಂದಾಯಿಸಿಕೊಂಡಿಲ್ಲ. ಹಾಗಾಗಿ ರೈತರಿಗೆ ಯೋಜನೆಯ ಲಾಭ ಪಡೆಯುವುದು ಸಾಧ್ಯವಾಗುತ್ತಿಲ್ಲ. ಯೋಜನೆಯ ದ್ವಿಗುಣ ಲಾಭವನ್ನು ಪಡೆಯಲು ಬಯಸುವುದಾದರೆ ಜೂನ್ 30 ರೊಳಗೆ ಈ ಯೋಜನೆಯಡಿಯಲ್ಲಿ ನಿಮ್ಮನ್ನು ನೋಂದಾಯಿಸಿಕೊಳ್ಳುವುದು ಅಗತ್ಯವಾಗಿದೆ.


ಇದನ್ನೂ ಓದಿ : E-Vehicles: ದ್ವಿಚಕ್ರ ವಾಹನ ಖರೀದಿದಾರರಿಗೆ ಸಂತಸದ ಸುದ್ದಿ ಪ್ರಕಟಿಸಿದ Modi Government


ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ(Prime Minister Kisan Samman Nidhi)ಯಡಿ ನೋಂದಾಯಿಸಿಕೊಳ್ಳುವ ಎಲ್ಲಾ ಅರ್ಹತೆಯಿದ್ದರೆ, ಜೂನ್ 30 ರೊಳಗೆ ಈ ಯೋಜನೆಯಡಿ ನೊಂದಾಯಿಸಿಕೊಂಡರೆ, ನಿಮ್ಮ ಖಾತೆಗೆ 4,000 ರೂ. ಕೇಂದ್ರ ಸರ್ಕಾರದಿಂದ ಜಮೆಯಾಗುತ್ತದೆ. ಅಂದರೆ 8ನೇ ಮತ್ತು 9ನೇ ಕಂತಿನ ಹಣವನ್ನು ಒಟ್ಟಿಗೆ ನಿಮ್ಮ ಖಾತೆಗೆ ವರ್ಗಾಯಿಸಲಾಗುತ್ತದೆ.


ಇದನ್ನೂ ಓದಿ : Jammu & Kashmir Terror Attack: ಪೊಲೀಸ್-CRPF ಜಂಟಿಪಡೆ ಮೇಲೆ ಉಗ್ರರ ದಾಳಿ, ಇಬ್ಬರು ಜವಾನರು ಹುತಾತ್ಮ


ಮೂರು ಕಂತುಗಳಲ್ಲಿ 6 ಸಾವಿರ ರೂ. :


ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಸರ್ಕಾರ ಒಟ್ಟು 8 ಕಂತುಗಳ ಹಣ(Money)ವನ್ನು ರೈತರ ಖಾತೆಗೆ ವರ್ಗಾಯಿಸಿದೆ. ಈ ಯೋಜನೆಯಲ್ಲಿ ನೋಂದಣಿ ಮಾಡಬೇಕಾದರೆ, ರೈತರು ಮೊದಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಅಧಿಕೃತ ವೆಬ್‌ ಸೈಟ್‌ pmkisan.gov.in ಗೆ ಭೇಟಿ ನೀಡಬೇಕಾಗುತ್ತದೆ.


ಇದನ್ನೂ ಓದಿ : Heavy Rain in Mumbai : ಮುಂಬೈನಲ್ಲಿ ನಾಳೆ-ನಾಡಿದ್ದು ಭಾರೀ ಮಳೆ ; ನಗರದಲ್ಲಿ 'ಹೈ ಅಲರ್ಟ್‌' ಘೋಷಣೆ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.